ಫೋಟೋಗಳು: ಕೆಂಪುಕೋಟೆಯಲ್ಲಿ 2014 ರಿಂದ 2019ರವರೆಗಿನ ಸ್ವಾತಂತ್ರ್ಯೋತ್ಸವದಲ್ಲಿ ಪ್ರಧಾನಿ ನರೇಂದ್ರ ಮೋದಿ

Thu, 15 Aug 2019-1:17 pm,

2014ರಲ್ಲಿ ಮೊದಲ ಬಾರಿಗೆ ದೇಶದ ಪ್ರಧಾನಮಂತ್ರಿಯಾಗಿ ಅಧಿಕಾರ ನಂತರ ಪ್ರಧಾನಿ ನರೇಂದ್ರ ಮೋದಿ, ಆಗಸ್ಟ್ 15, 2014 ರಂದು ಮೊದಲ ಬಾರಿಗೆ ಕೆಂಪು ಕೋಟೆಯಲ್ಲಿ ದೇಶವನ್ನು ಉದ್ದೇಶಿಸಿ ಮಾತನಾಡಿದರು. ಕಿತ್ತಳೆ ಮತ್ತು ಹಸಿರು ಬಣ್ಣದ ಜೋಧಪುರಿ ಪೇಟ ಕಟ್ಟಿದರು. 2014 ರ ಆಗಸ್ಟ್ 15 ರಂದು ದೇಶದ ಜನತೆಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಐತಿಹಾಸಿಕ ಭಾಷಣ ಮಾಡಿ, ಬಯಲು ಶೌಚಾಲಯ ಪದ್ಧತಿಯನ್ನು ಕೊನೆಗಾಣಿಸುವಂತೆ ದೇಶದ ಜನತೆಗೆ ಕರೆ ನೀಡಿದ್ದರು. 

ವಿಶ್ವದ ಅತಿದೊಡ್ಡ ಆರ್ಥಿಕ ಸೇರ್ಪಡೆ ಉಪಕ್ರಮಗಳಲ್ಲಿ ಒಂದಾದ ಪ್ರಧಾನ್ ಮಂತ್ರಿ ಧನ್ ಯೋಜನೆ (ಪಿಎಂಜೆಡಿವೈ) ಯನ್ನು ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಆಗಸ್ಟ್ 15, 2014 ರಂದು ಕೆಂಪು ಕೋಟೆಯ ಕಮಾನುಗಳಿಂದ ಘೋಷಿಸಿದರು.

2015 ರ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೆಂಪು ಮತ್ತು ಹಸಿರು ಪಟ್ಟೆಗಳಿರುವ ಪೇಟಾ ಧರಿಸಿದ್ದರು.  ಅಂದು ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿದ್ದ ನರೇಂದ್ರ ಮೋದಿ ಮುಂದಿನ 1000 ದಿನಗಳಲ್ಲಿ ದೇಶದ ಎಲ್ಲಾ ಗ್ರಾಮಗಳಿಗೂ ವಿದ್ಯುತ್ ಪೂರೈಕೆ ಮಾಡುವುದಾಗಿ ಘೋಷಿಸಿದ್ದರು.

2016 ರಲ್ಲಿ ಭಾರತದ 70 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಮೂರನೇ ಬಾರಿಗೆ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದರು. ಈ ವೇಳೆ ಅವರು ಕೆಂಪು-ಗುಲಾಬಿ-ಹಳದಿ ಬಣ್ಣದ ರಾಜಸ್ಥಾನಿ ಪೇಟಾ ಧರಿಸಿದ್ದರು.  90 ನಿಮಿಷಗಳ ಕಾಲ ಮಾತನಾಡಿದ ಪ್ರಧಾನಿ ಮೋದಿ ಅವರು ಕಳೆದ ಎರಡು ವರ್ಷಗಳಲ್ಲಿ ತಮ್ಮ ಸರ್ಕಾರದ ಸಾಧನೆಗಳನ್ನು ಮುಟ್ಟಿದರು ಮತ್ತು ದೇಶವು ಏಕತೆಯ ಮೂಲಕ ಮುಂದುವರಿಯುವ ಏಕೈಕ ಮಾರ್ಗವಾಗಿದೆ ಎಂದು ಒತ್ತಿ ಹೇಳಿದರು. "ಏಕ್ ಭಾರತ್, ಶ್ರೇಷ್ಠ ಭಾರತ್," ದೇಶದಲ್ಲಿ ಹಿಂಸಾಚಾರವನ್ನು ಸಹಿಸುವುದಿಲ್ಲ ಮತ್ತು ಸಾಮಾಜಿಕ ತಾರತಮ್ಯವನ್ನು ಕೊನೆಗೊಳಿಸಬೇಕು ಎಂದು ಮೋದಿ ಪುನರುಚ್ಚರಿಸಿದರು.

2017 ರಲ್ಲಿ ನಾಲ್ಕನೇ ಬಾರಿಗೆ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿ ಪ್ರಧಾನಿ ಮೋದಿ ದೇಶದ 71ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಿದರು. ಈ ಸಂದರ್ಭದಲ್ಲಿ ಅವರು ಕ್ರೀಂ ಮತ್ತು ಮತ್ತು ಹಳದಿ-ಕೆಂಪು ಬಣ್ಣದ ಪೇಟ ಧರಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರು 2014 ರಲ್ಲಿ ಅಧಿಕಾರಕ್ಕೆ ಬಂದ ನಂತರ ಸತತ ನಾಲ್ಕನೇ ವರ್ಷವೂ ಕೆಂಪು ಕೋಟೆಯ ಪ್ರಾಕಾರದಿಂದ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದರು. ಪ್ರಗತಿಗಾಗಿ ನಾವು ಶ್ರಮಿಸೋಣ. ಹೊಸ ಭಾರತಕ್ಕಾಗಿ ಸ್ಪರ್ಧಿಸಲು ನಾನು ಭಾರತವನ್ನು ಆಹ್ವಾನಿಸುತ್ತೇನೆ.

ನವ ಭಾರತದ ಅಡಿಯಲ್ಲಿ 2022 ರ ವೇಳೆಗೆ ರೈತರ ಆದಾಯ ದ್ವಿಗುಣಗೊಳ್ಳುತ್ತದೆ. ಅಲ್ಲಿ ಯುವಕರು ಮತ್ತು ಮಹಿಳೆಯರಿಗೆ ಸಾಕಷ್ಟು ಅವಕಾಶಗಳು ಸಿಗುತ್ತವೆ. ಜಾತಿವಾದ, ಭಯೋತ್ಪಾದನೆ, ಭ್ರಷ್ಟಾಚಾರ, ಸ್ವಜನಪಕ್ಷಪಾತದಿಂದ ಮುಕ್ತವಾದ ಭಾರತ. 

ಸರಿಯಾದ ಸಮಯದಲ್ಲಿ ಕೆಲಸವನ್ನು ಮಾಡದಿದ್ದರೆ ಸರಿಯಾದ ಫಲಿತಾಂಶಗಳನ್ನು ಎಂದಿಗೂ ಸಾಧಿಸಲಾಗುವುದಿಲ್ಲ. ನಾವು 2022 ರ ವೇಳೆಗೆ ಹೊಸ ಭಾರತವನ್ನು ರೂಪಿಸುತ್ತೇವೆ ಎಂಬ ಪ್ರತಿಜ್ಞೆ ಮಾಡಿದರು.

2018 ರಲ್ಲಿ ಭಾರತವು 72ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ, ಪ್ರಧಾನಿ ಮೋದಿ, ಕೆಂಪು ಕೋಟೆಯ ಪ್ರಾಕಾರದಿಂದ 5ನೇ ಬಾರಿಗೆ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದರು. ಸ್ವಾತಂತ್ರ್ಯೋತ್ಸವ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ಮಹಾತ್ವಾಕಾಂಕ್ಷೆಯ ಹತ್ತು ಕೋಟಿ ಕುಟುಂಬಗಳಿಗೆ ವಿಮಾ ಯೋಜನೆ ಕಲ್ಪಿಸುವ 'ಆಯುಷ್ಮಾನ್‌ ಭಾರತ' ಯೋಜನೆಯನ್ನು ಘೋಷಿಸಿದರು. 

ದೇಶವು ಇಂದು 73 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದೆ. ಭಾರತದ 73ನೇ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಸತತ ಆರನೇ ಬಾರಿಗೆ ದೆಹಲಿಯ ಕೆಂಪು ಕೋಟೆಯ ಮೇಲೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಧ್ವಜಾರೋಹಣ ನೆರವೇರಿಸಿದರು. ಶ್ವೇತ ವರ್ಣದ ವಸ್ತ್ರ ಧರಿಸಿ, ಹಳದಿ, ಕೆಂಪು, ಹಸಿರು ಬಣ್ಣದ ಮುಂಡಾಸು ಧರಿಸಿದ್ದ ಪ್ರಧಾನಿ ಮೋದಿ ಮೊದಲು ರಾಜ್‌ಘಾಟ್‌ಗೆ  ತೆರಳಿ ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಸಮಾಧಿಗೆ ನಮಿಸಿ ಗೌರವ ಸಲ್ಲಿಸಿದರು. ಅಲ್ಲಿಂದ ನೇರವಾಗಿ ಕೆಂಪುಕೋಟೆಗೆ ಆಗಮಿಸಿ ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ಜಲ ಜೀವನ್ ಮಿಷನ್‌ಗಾಗಿ 3.5 ಲಕ್ಷ ಕೋಟಿ ಮೀಸಲಿಡಲಾಗಿದೆ ಎಂದು ತಿಳಿಸಿದ ಪ್ರಧಾನಿ ಮೋದಿ, ದೇಶದಲ್ಲಿ ಜನಸಂಖ್ಯೆಯ ಸ್ಫೋಟವು ಮುಂಬರುವ ಪೀಳಿಗೆಗೆ ವಿವಿಧ ಸಮಸ್ಯೆಗಳನ್ನು ಸೃಷ್ಟಿಸುತ್ತದೆ. ಈ ಬಗ್ಗೆ ಜಾಗೃತಿ ಮೂಡಿಸಬೇಕಿದೆ. ಕುಟುಂಬ ಕಲ್ಯಾಣ ಯೋಜನೆ ಬಗ್ಗೆ ಜನರಿಗೆ ಜಾಗೃತಿ ಮೂಡಿಸಬೇಕಿದೆ ಎಂದು ಕರೆ ನೀಡಿದರು.

ನಮ್ಮ ಭದ್ರತಾ ಪಡೆಗಳು ನಮ್ಮ ಹೆಮ್ಮೆ. ನಮ್ಮ ಪಡೆಗಳ ನಡುವಿನ ಸಮನ್ವಯವನ್ನು ಇನ್ನಷ್ಟು ಹೆಚ್ಚಿಸಲು, ನಾನು ಇಂದು ಒಂದು ದೊಡ್ಡ ನಿರ್ಧಾರವನ್ನು ಘೋಷಿಸುತ್ತೇನೆ, ಭಾರತವು ಈಗ ರಕ್ಷಣಾ ಮುಖ್ಯಸ್ಥರನ್ನು ಹೊಂದಿರುತ್ತದೆ- ಸಿಡಿಎಸ್. ಇದು ಪಡೆಗಳನ್ನು ಇನ್ನಷ್ಟು ಬಲಪಡಿಸುತ್ತದೆ" ಎಂದು ಪ್ರಧಾನಿ ಮೋದಿ ಹೇಳಿದರು.

"ಅಕ್ಟೋಬರ್ 2 ರ ಹೊತ್ತಿಗೆ, ನಾವು ದೇಶಾದ್ಯಂತ ಪ್ಲಾಸ್ಟಿಕ್ ಅನ್ನು ರದ್ದುಗೊಳಿಸಲು" ಜನತೆಗೆ ಕರೆ ನೀಡಿದರು. ರಾಸಾಯನಿಕ ಗೊಬ್ಬರಗಳ ಬಳಕೆ ಕಡಿಮೆ ಮಾಡುವಂತೆ ರೈತರಲ್ಲಿ ಪ್ರಧಾನಿ ಮೋದಿ ಮನವಿ ಮಾಡಿದರು.

ZEENEWS TRENDING STORIES

By continuing to use the site, you agree to the use of cookies. You can find out more by Tapping this link