Pro Kabaddi Final: ಕನ್ನಡಿಗ ಕೋಚ್‌ ಮಾರ್ಗದರ್ಶನದಲ್ಲಿ ಚೊಚ್ಚಲ ಟ್ರೋಫಿ ಗೆದ್ದ ಪುಣೇರಿ ಪಲ್ಟಾನ್‌!

Pro Kabaddi League Final 2024: ಕಳೆದ ಪ್ರೋ ಕಬಡ್ಡಿ ಲೀಗ್‌ನಲ್ಲಿಯೂ ಪುಣೇರಿ ತಂಡವು ಫೈನಲ್​ ಆಡಿತ್ತು. ಆದರೆ ಜೈಪುರ ವಿರುದ್ಧ ಸೋತು ರನ್ನರ್​ ಅಪ್​ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು. ಆದರೆ ಈ ಬಾರಿ ಪ್ರಶಸ್ತಿ ಗೆಲ್ಲುವಲ್ಲಿ ಯಶಸ್ಸು ಕಂಡಿದೆ.
 

Pro Kabaddi League Final 2024: ಹೈದರಾಬಾದ್‌ನ ಗಚ್ಚಿಬೌಲಿ ಒಳಾಂಗಣ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ 10ನೇ ಆವೃತ್ತಿ ಪ್ರೊ ಕಬಡ್ಡಿಯ ಫೈನಲ್ ಪಂದ್ಯದಲ್ಲಿ ಪುಣೇರಿ ಪಲ್ಟಾನ್‌ 28-25 ಅಂಕಗಳ ಅಂತರದಿಂದ ಹರಿಯಾಣ ಸ್ಟೀಲರ್ಸ್‌ ತಂಡವನ್ನು ಮಣಿಸಿ ಚೊಚ್ಚಲ ಪ್ರಶಸ್ತಿಗೆ ಮುತ್ತಿಕ್ಕಿದೆ. ಉಭಯ ತಂಡಗಳ ಫೈನಲ್​ ಫೈಟ್​ ಆರಂಭದಿಂದ ಕೊನೆವರೆಗೆ ಅತ್ಯಂತ ರೋಚಕತೆಯಿಂದ ಕುಡಿತ್ತು. ಅಂತಿಮವಾಗಿ ಪಲ್ಟಾನ್‌ ತಂಡವು ಹರಿಯಾಣ ತಂಡವನ್ನು ಸೋಲಿಸುವಲ್ಲಿ ಯಶಸ್ವಿಯಾಯಿತು. ಕನ್ನಡಿಗ ಕೋಚ್‌ ಬಿ.ಸಿ.ರಮೇಶ್‌ ಮಾರ್ಗದರ್ಶನದಲ್ಲಿ ಪುಣೇರಿ ತಂಡವು ಚಾಂಪಿಯನ್‌ ಆಗಿದ್ದು ಕನ್ನಡಿಗರಿಗೆ ಹೆಮ್ಮೆಯ ಸಂಗತಿಯಾಗಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

1 /5

ಹೈದರಾಬಾದ್‌ನ ಗಚ್ಚಿಬೌಲಿ ಒಳಾಂಗಣ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ 10ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್ ಫೈನಲ್ ಪಂದ್ಯದಲ್ಲಿ ಪುಣೇರಿ ಪಲ್ಟಾನ್‌‌ ತಂಡವು ಚಾಂಪಿಯನ್‌ ಆಗಿ ಹೊರಹೊಮ್ಮಿತು.

2 /5

ಅಂತ್ಯಂತ ರೋಚಕತೆಯಿಂದ ಕೂಡಿದ್ದ ಈ ಪಂದ್ಯದಲ್ಲಿ 28-25 ಅಂಕಗಳ ಅಂತರದಿಂದ ಹರಿಯಾಣ ಸ್ಟೀಲರ್ಸ್‌ ತಂಡವನ್ನು ಮಣಿಸಿದ ಪುಣೇರಿ ಪಲ್ಟಾನ್ ಚೊಚ್ಚಲ ಪ್ರಶಸ್ತಿಗೆ ಮುತ್ತಿಕ್ಕಿದೆ.‌

3 /5

ಕನ್ನಡಿಗ ಕೋಚ್‌ ಬಿ.ಸಿ.ರಮೇಶ್‌ ಮಾರ್ಗದರ್ಶನದಲ್ಲಿ ಪುಣೇರಿ ತಂಡವು ಈ ಲೀಗ್‌ನ ಆರಂಭದಿಂದಲೂ ಉತ್ತಮ ಪ್ರದರ್ಶನ ನೀಡಿತ್ತು. ಆಡಿದ 22 ಪಂದ್ಯಗಳ ಪೈಕಿ 17 ಗೆಲುವುಗಳೊಂದಿಗೆ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಕಾಣಿಸಿಕೊಂಡಿತ್ತು.

4 /5

ಕಳೆದ ಬಾರಿಯೂ ಪುಣೇರಿ ತಂಡವು ಫೈನಲ್​ ಆಡಿತ್ತು. ಆದರೆ ಜೈಪುರ ವಿರುದ್ಧ ಸೋತು ರನ್ನರ್​ ಅಪ್​ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು. ಈ ಬಾರಿ ಕನ್ನಡಿಗ ಕೋಚ್‌ ಬಿ.ಸಿ.ರಮೇಶ್‌ ಅವರ ಮಾರ್ಗದರ್ಶನದಲ್ಲಿ ಪ್ರಶಸ್ತಿ ಗೆಲ್ಲುವಲ್ಲಿ ಯಶಸ್ಸು ಕಂಡಿದೆ.

5 /5

ಇನ್ನು ಚಾಂಪಿಯನ್‌ ಆದ ಪುಣೇರಿ ತಂಡವು ಪ್ರಶಸ್ತಿ ಮೊತ್ತವಾಗಿ 3 ಕೋಟಿ ರೂ. ಬಹುಮಾನ ಗೆದ್ದರೆ, ರನ್ನರ್ ಅಪ್​ ಹರಿಯಾಣ ತಂಡಕ್ಕೆ 1.8 ಕೋಟಿ ರೂ. ಬಹುಮಾನ ದೊರೆದಿದೆ.