Puneeth Rajkumar Statue : ಬಳ್ಳಾರಿಯಲ್ಲಿ ಕೃಷ್ಣ ಶಿಲೆಯಲ್ಲಿ ನಿರ್ಮಿಸಿದ ಪುನೀತ್‌ ಪ್ರತಿಮೆ ಅನಾವರಣ

Thu, 27 Oct 2022-2:59 pm,

ವರ್ಷ ಕಳೆದರೂ ಪುನೀತ್ ರಾಜ್‌ ಕುಮಾರ್ ಮರಣವನ್ನು ಅಭಿಮಾನಿಗಳಿಗೆ ಅರಗಿಸಿಕೊಳ್ಳೋಕೆ ಆಗುತ್ತಿಲ್ಲ. ಅಪ್ಪು ಕಣ್ಮರೆಯಾದರು ಅಭಿಮಾನಿಗಳ ಮನಸ್ಸಿನಿಂದ ದೂರವಾಗಿಲ್ಲ.

ಅಪ್ಪು ಇನ್ನಿಲ್ಲವಾದರೂ ತಮ್ಮ ನೆಚ್ಚಿನ ನಟ ಹಾಕಿಕೊಟ್ಟ ಮಾರ್ಗದಲ್ಲಿ ಫ್ಯಾನ್ಸ್‌ ನಡೆಯುತ್ತಿದ್ದಾರೆ. 

ಇದೀಗ ಗಣಿ ನಾಡು ಬಳ್ಳಾರಿಯಲ್ಲಿ ಕೃಷ್ಣ ಶಿಲೆಯಲ್ಲಿ ಅದ್ಬುತವಾದ ಅಪ್ಪು ಪ್ರತಿಮೆ ನಿರ್ಮಾಣವಾಗಿದೆ. ಬಳ್ಳಾರಿಯ ತಾಳೂರ ರಸ್ತೆಯ ಕುರುವಳ್ಳಿ ಎನ್‌ಕ್ಲೈವ್‌ನಲ್ಲಿ ಅಪ್ಪು ಪ್ರತಿಮೆ ಅನಾವರಣಗೊಂಡಿದೆ. 

ಕೃಷ್ಣ ಶಿಲೆಯಲ್ಲಿ ನಿರ್ಮಿಸಿದ ಅಪ್ಪು ಪ್ರತಿಮೆಯನ್ನು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಲೋಕಾರ್ಪಣೆ ಮಾಡಿದ್ದಾರೆ.

ZEENEWS TRENDING STORIES

By continuing to use the site, you agree to the use of cookies. You can find out more by Tapping this link