Radish In Winter: ಚಳಿಗಾಲದಲ್ಲಿ ಮೂಲಂಗಿ ಸೇವನೆಯಿಂದ ಸಿಗುವ ಅದ್ಭುತ ಪ್ರಯೋಜನಗಳಿವು

                       

Radish In Winter: ಚಳಿಗಾಲದಲ್ಲಿ ನಾವು ನೆನಪಿನಲ್ಲಿಟ್ಟುಕೊಳ್ಳಬೇಕಾದ ಪ್ರಮುಖ ವಿಷಯವೆಂದರೆ ರೋಗನಿರೋಧಕ ಶಕ್ತಿಯನ್ನು ಬಲಪಡಿಸುವುದು. ಹಾಗಾಗಿ ಈ ಸಮಯದಲ್ಲಿ ಏನು ತಿನ್ನಬೇಕು. ಏನನ್ನೂ ತಿನ್ನಬಾರದು ಎಂಬ ಬಗ್ಗೆಯೂ ತಿಳಿದಿರುವುದು ಬಹಳ ಮುಖ್ಯ. 

ಈಗಾಗಲೇ ದೇಶದ ಹಲವು ಭಾಗಗಳಲ್ಲಿ ಚಳಿಗಾಲ ಆರಂಭವಾಗಿದೆ. ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಈ ಸಮಯದಲ್ಲಿ ಹಣ್ಣು-ತರಕಾರಿಗಳನ್ನು ಸೇವಿಸುವುದು ಅತ್ಯಗತ್ಯ. ಇವುಗಳಲ್ಲಿ ಕೆಲವು ನಮ್ಮ ಆರೋಗ್ಯವನ್ನು ಸುಧಾರಿಸುತ್ತವೆ. ಇನ್ನೂ ಕೆಲವು ನಮ್ಮನ್ನು ಸೋಂಕಿನಿಂದ ರಕ್ಷಿಸುತ್ತವೆ. ಈ ರೀತಿ ರಕ್ಷಣೆ ನೀಡುವ ತರಕಾರಿಗಳಲ್ಲಿ ಮೂಲಂಗಿಯೂ ಒಂದು. ಹಾಗಿದ್ದರೆ ಚಳಿಗಾಲದಲ್ಲಿ ಮೂಲಂಗಿ ಸೇವನೆಯಿಂದ ಸಿಗುವ ಅದ್ಭುತ ಪ್ರಯೋಜನಗಳ ಬಗ್ಗೆ ತಿಳಿಯೋಣ.
 

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

1 /5

ಮಧುಮೇಹದ ಅಪಾಯವನ್ನು ಕಡಿಮೆ ಮಾಡುವುದು: ಮೂಲಂಗಿಯಲ್ಲಿ ರಾಸಾಯನಿಕ ಸಂಯುಕ್ತಗಳಿವೆ. ಅವು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತಾರೆ. ಮೂಲಂಗಿ ಸೇವನೆಯು ಗಣನೀಯ ಪ್ರಮಾಣದ ನೈಸರ್ಗಿಕ ಅಡಿಪೋನೆಕ್ಟಿನ್ ಅನ್ನು ಉತ್ಪಾದಿಸುತ್ತದೆ. ಇದು ಇನ್ಸುಲಿನ್ ಅನ್ನು ಉತ್ತೇಜಿಸುವ ಮೂಲಕ ಮಧುಮೇಹದ ಬೆಳವಣಿಗೆಯನ್ನು ನಿಯಂತ್ರಿಸುತ್ತದೆ.  

2 /5

ಹೃದಯದ ಆರೋಗ್ಯವನ್ನು ಸುಧಾರಿಸುವುದು: ಮೂಲಂಗಿಯಲ್ಲಿ ಉತ್ಕರ್ಷಣ ನಿರೋಧಕಗಳು, ಕ್ಯಾಲ್ಸಿಯಂ, ಪೊಟ್ಯಾಸಿಯಮ್ ಮತ್ತು ಇತರ ಅನೇಕ ಖನಿಜಗಳು ಸಮೃದ್ಧವಾಗಿವೆ. ಈ ಪೋಷಕಾಂಶಗಳು ಅಧಿಕ ರಕ್ತದೊತ್ತಡವನ್ನು ಕಡಿಮೆ ಮಾಡಲು ಮತ್ತು ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಮೂಲಂಗಿಯು ರಕ್ತದ ಹರಿವನ್ನು ಸುಧಾರಿಸುವ ನೈಸರ್ಗಿಕ ನೈಟ್ರೇಟ್‌ಗಳ ಉತ್ತಮ ಮೂಲವಾಗಿದೆ.  

3 /5

ಕ್ಯಾನ್ಸರ್ ವಿರೋಧಿ ಗುಣಗಳನ್ನು ಹೊಂದಿದೆ: ಮೂಲಂಗಿ ಗ್ಲುಕೋಸಿನೋಲೇಟ್ಗಳು ಮತ್ತು ಸಲ್ಫರ್ ಸಂಯುಕ್ತಗಳಲ್ಲಿ ಸಮೃದ್ಧವಾಗಿದೆ. ಇದು ಕ್ಯಾನ್ಸರ್ಗೆ ಕಾರಣವಾಗುವ ಅನುವಂಶಿಕ ರೂಪಾಂತರಗಳಿಂದ ಜೀವಕೋಶಗಳನ್ನು ರಕ್ಷಿಸುವ ಸಾಮರ್ಥ್ಯವನ್ನು ಹೊಂದಿದೆ. ಇದು ಕ್ಯಾನ್ಸರ್ ಗೆಡ್ಡೆಗಳ ಬೆಳವಣಿಗೆಯನ್ನು ಉತ್ತೇಜಿಸುವ ಜೀವಕೋಶಗಳ ಬೆಳವಣಿಗೆಯನ್ನು ತಡೆಯುವುದು. ದೇಹದಿಂದ ಕ್ಯಾನ್ಸರ್ ಉಂಟುಮಾಡುವ ಅಂಶಗಳನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ. ಇದನ್ನೂ ಓದಿ- Tea Benefits: ಚಳಿಗಾಲದಲ್ಲಿ ಈ ರೀತಿ ಚಹಾ ತಯಾರಿಸಿ ಸೇವಿಸಿದರೆ ಸಿಗುತ್ತೆ ಅದ್ಭುತ ಲಾಭ

4 /5

ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ: ಮೂಲಂಗಿಯಲ್ಲಿ ನೈಸರ್ಗಿಕವಾಗಿ ಫೈಬರ್ ಅಧಿಕವಾಗಿರುತ್ತದೆ. ಇದು ಜೀರ್ಣಕ್ರಿಯೆಯನ್ನು ಸುಲಭಗೊಳಿಸುವುದು. ಇದು ಕರುಳಿನ ಮೂಲಕ ದೇಹದಿಂದ ತ್ಯಾಜ್ಯವನ್ನು ಹೊರಹಾಕಲು ಸಹಾಯ ಮಾಡುತ್ತದೆ. ಇದನ್ನೂ ಓದಿ- Diwali Diet: ದೀಪಾವಳಿಯ ದಿನ ಈ ಆಹಾರದ ತಪ್ಪುಗಳನ್ನು ಮಾಡಬೇಡಿ, ಆರೋಗ್ಯಕ್ಕೆ ಹಾನಿಯಾದೀತು!

5 /5

ತೂಕ ಇಳಿಸಲು ಸಹಾಯ ಮಾಡುತ್ತದೆ: ತೂಕ ಇಳಿಸಿಕೊಳ್ಳಲು ಬಯಸುವವರು ಪ್ರತಿದಿನ ಬೆಳಿಗ್ಗೆ ಮೂಲಂಗಿಯ ರಸವನ್ನು ಸೇವಿಸಿದರೆ ತೂಕವನ್ನು ತ್ವರಿತವಾಗಿ ಕಳೆದುಕೊಳ್ಳಬಹುದು.