ಈ ರಾಶಿಯವರ ಎಲ್ಲಾ ಕಷ್ಟಗಳಿಗೂ ಮುಕ್ತಿ ! ಇನ್ನೇನಿದ್ದರೂ ಪ್ರಗತಿ, ಸಮೃದ್ದಿ, ನೆಮ್ಮದಿಯ ಬದುಕು

ಜ್ಯೋತಿಷಿಗಳ ಪ್ರಕಾರ, ಬುಧಗ್ರಹ ಅಸ್ತ ಅವಸ್ಥೆಯಲ್ಲಿ ಇರುವುದು ಮಂಗಳಕರವಲ್ಲ. ಈ ಬಾರಿ ಬುಧನು ಮೇಷ ರಾಶಿಯಲ್ಲಿ ಉದಯಿಸಲಿರುವುದರಿಂದ ಕೆಲವು ರಾಶಿಗಳ ಅದೃಷ್ಟದ ಬಾಗಿಲು ತೆರೆಯಲಿದೆ

ಬೆಂಗಳೂರು : ಜ್ಯೋತಿಷ್ಯದ ಪ್ರಕಾರ, ಗ್ರಹಗಳ ಉದಯ ಮತ್ತು ಅಸ್ತ ಎಲ್ಲಾ ರಾಶಿಯವರ ಜೀವನದ ಮೇಲೆ ಪರಿಣಾಮ ಬೀರುತ್ತದೆ. ಮೇ  ತಿಂಗಳಲ್ಲಿ ಅನೇಕ ದೊಡ್ಡ ಗ್ರಹಗಳು ತಮ್ಮ ಸ್ಥಾನವನ್ನು ಬದಲಾಯಿಸಲಿವೆ. ಕೆಲವು ಗ್ರಹಗಳ ಉದಯವಾದರೆ ಇನ್ನು ಕೆಲವು ಗ್ರಹಗಳ ಅಸ್ತವಾಗುವುದು. ಪ್ರಸ್ತುತ ಸಮಯದಲ್ಲಿ ಬುಧನು ಮೇಷ ರಾಶಿಯಲ್ಲಿ ಅಸ್ತಮಿಸುತ್ತಿದ್ದಾನೆ. ಮೇ 14 ರಂದು ಮೇಷ ರಾಶಿಯಲ್ಲಿಯೇ ಮತ್ತೆ ಉದಯಿಸುತ್ತಾನೆ.  

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /4

ಜ್ಯೋತಿಷಿಗಳ ಪ್ರಕಾರ, ಬುಧಗ್ರಹ ಅಸ್ತ ಅವಸ್ಥೆಯಲ್ಲಿ ಇರುವುದು ಮಂಗಳಕರವಲ್ಲ. ಈ ಬಾರಿ ಬುಧನು ಮೇಷ ರಾಶಿಯಲ್ಲಿ ಉದಯಿಸಲಿರುವುದರಿಂದ ಕೆಲವು ರಾಶಿಗಳ ಅದೃಷ್ಟದ ಬಾಗಿಲು ತೆರೆಯಲಿದೆ. ಈ ಸಮಯದಲ್ಲಿ ವೃತ್ತಿ ಮತ್ತು ಉದ್ಯೋಗದಲ್ಲಿ ಪ್ರಯೋಜನಗಳನ್ನು ಪಡೆಯುವುದು ಸಾಧ್ಯವಾಗುತ್ತದೆ. ಈ ರಾಶಿಯವರ ಆದಾಯದಲ್ಲಿ ಹೆಚ್ಚಳವಾಗಲಿದೆ. ಸಾಮಾಜಿಕ ಗೌರವ ಹೆಚ್ಚಾಗಲಿದೆ.

2 /4

ಮೇಷ ರಾಶಿ : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಬುಧಗ್ರಹದ ಉದಯವು ಮೇಷ ರಾಶಿಯವರಿಗೆ ಶುಭ ಮತ್ತು ಫಲದಾಯಕವಾಗಿರುತ್ತದೆ. ಈ ಸಮಯದಲ್ಲಿ, ಈ ರಾಶಿಯವರ ಆತ್ಮ ವಿಶ್ವಾಸವು ಹೆಚ್ಚಾಗುತ್ತದೆ.  ವ್ಯಕ್ತಿತ್ವ ಸುಧಾರಿಸುತ್ತದೆ. ವೈವಾಹಿಕ ಜೀವನವು ಮಂಗಳಕರವಾಗಿರುತ್ತದೆ. ಅಷ್ಟೇ ಅಲ್ಲ, ವ್ಯಾಪಾರ ಮಾಡುವವರಿಗೂ ಈ ಸಮಯ ಅತ್ಯಂತ ಶುಭಕರವಾಗಿದೆ. ಆದಾಯ ಹೆಚ್ಚಲಿದೆ.

3 /4

ಕಟಕ ರಾಶಿ : ಬುಧ ಗ್ರಹದ ಉದಯವು ಕರ್ಕಾಟಕ ರಾಶಿಯವರಿಗೆ ತುಂಬಾ ಅನುಕೂಲಕರವಾಗಿರುತ್ತದೆ. ಈ ಸಮಯದಲ್ಲಿ, ವೃತ್ತಿಜೀವನದಲ್ಲಿ ಪ್ರಗತಿಯ ಸಾಧ್ಯತೆಯಿದೆ. ಉದ್ಯಮಿಗಳಿಗೂ ಲಾಭವಾಗುವುದು. ನೀವು ಸಾಲವಾಗಿ ಕೊಟ್ಟು ಹಿರಗೆ ಉಳಿದಿರುವ ಹಣ ಅಥವಾ, ಇಷ್ಟು ದಿನ ನಿಮ್ಮ ಕೈ ಸೇರದೇ ಉಳಿದಿರುವ ಹಣವನ್ನು ಮರಳಿ ಪಡೆಯುವುದು ಸಾಧ್ಯವಾಗುತ್ತದೆ.   

4 /4

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಬುಧಗ್ರಹದ ಉದಯದಿಂದಾಗಿ, ಸಿಂಹ ರಾಶಿಯವರ ಅದೃಷ್ಟದ ಬಾಗಿಲು ತೆರೆಯುತ್ತದೆ. ಈ ಸಮಯದಲ್ಲಿ, ಈ ರಾಶಿಯವರು ಇದ್ದಕ್ಕಿದ್ದಂತೆ ಹಣವನ್ನು ಗಳಿಸುತ್ತಾರೆ. ಯಾವುದೇ ರೀತಿಯ ಶುಭ ಕಾರ್ಯವನ್ನು ನೆರವೇರಿಸಬಹುದು. ನಿಮ್ಮ ಸ್ಥಾನ ಮತ್ತು ಗೌರವ ಹೆಚ್ಚಾಗುತ್ತದೆ.   (ಸೂಚನೆ : ಇಲ್ಲಿ ನೀಡಲಾದ ಲೇಖನವು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಅದನ್ನು ಖಚಿತಪಡಿಸುವುದಿಲ್ಲ.)