ಕೊಲೆಯಾದ ದಿನ ದರ್ಶನ್‌ ಜೊತೆಗಿದ್ದ ಚಿಕ್ಕಣ್ಣ... ಪೊಲೀಸ್‌ ವಿಚಾರಣೆಯಲ್ಲಿ ಹೊರಬಿತ್ತು ಸತ್ಯ !?

Tue, 18 Jun 2024-8:15 am,

ಈ ಪ್ರಕರಣದಲ್ಲಿ ಇತ್ತೀಚಿಗೆ ಕನ್ನಡ ಹಾಸ್ಯನಟ ಚಿಕ್ಕಣ್ಣ ಅವರಿಗೂ ಪೊಲೀಸರು ಕರೆಸಿ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಈ ಕೊಲೆ ಪ್ರಕರಣದಲ್ಲಿ ಚಾಲಕ ಅಪ್ರೂವರ್ ಆಗಿ ಶರಣಾಗಿದ್ದರಿಂದ ತನಿಖೆ ಚುರುಕುಗೊಂಡಿದೆ ಎನ್ನಲಾಗ್ತಿದೆ. 

ರೇಣುಕಾಸ್ವಾಮಿ ಹತ್ಯೆ ಪ್ರಕರಣದ ತನಿಖೆ ವೇಗ ಪಡೆದುಕೊಂಡಿದ್ದು,  ದರ್ಶನ್ ಆಪ್ತ ನಟ ಚಿಕ್ಕಣ್ಣ ಅವರಿಗೂ ನೋಟಿಸ್ ಜಾರಿ ನೀಡಿ ವಿಚಾರಣೆ ನಡೆಸಲಾಗಿದೆ. 

ರೇಣುಕಾಸ್ವಾಮಿ ಹತ್ಯೆಯಾದ ದಿನ ದರ್ಶನ್ ಮತ್ತು ಚಿಕ್ಕಣ್ಣ ಸ್ಟೋನಿ ಬ್ರೂಕ್ ರೆಸ್ಟೋರೆಂಟ್‌ ನಲ್ಲಿ ಭೇಟಿಯಾಗಿದ್ದರು ಎನ್ನಲಾಗಿದೆ. ಮಧ್ಯಾಹ್ನದಿಂದಲೇ ಪಾರ್ಟಿಯಲ್ಲಿ ತೊಡಗಿದ್ದ ದರ್ಶನ್, ಸಂಜೆ ಅರ್ಜೆಂಟ್ ಕೆಲಸವಿದೆ ಎಂದು ಹೇಳಿ ಹೊರಟು ಹೋದರಂತೆ ಎನ್ನಲಾಗಿದೆ. 

ಚಿಕ್ಕಣ್ಣ ಕೂಡ ದರ್ಶನ್‌ ಜೊತೆಗಿನ ಈ ಪಾರ್ಟಿಯಲ್ಲಿದ್ದ ಕಾರಣ ಅವರ ಹೇಳಿಕೆಯನ್ನೂ ದಾಖಲಿಸಿಕೊಂಡಿದ್ದಾರೆ. ಚಿಕ್ಕಣ್ಣ ಠಾಣೆಗೆ ಆಗಮಿಸಿ ಅಧಿಕಾರಿಗಳಿಗೆ ಸಹಕರಿಸಿದ್ದಾರೆ.

ದರ್ಶನ್  ಊಟಕ್ಕೆ ಬರುವಂತೆ ಕಾಲ್ ಮಾಡಿ ಕರೆದಿದ್ರು. ಅದಕ್ಕೆ ನಾನು ಸ್ಟೋನಿ ಬ್ರೂಕ್‌ಗೆ ಹೋಗಿದ್ದೆ. ದರ್ಶನ್ ಮತ್ತು ನಾನು ಉತ್ತಮ ಸ್ನೇಹಿತರು. ಆಗಾಗ ಊಟಕ್ಕೆ ಸೇರುತ್ತೇವೆ. ಅವತ್ತು ಕೂಡ ನನ್ನನ್ನು ಊಟಕ್ಕೆ ಕರೆದಿದ್ದರು ನಾನು ಹೋಗಿದ್ದೆ ಎಂದು ಚಿಕ್ಕಣ್ಣ ಹೇಳಿದ್ದಾರೆ ಎನ್ನಲಾಗಿದೆ.

ಆ ಬಳಿಕ ಅಲ್ಲಿ ಏನಾಯ್ತು ನನಗೆ ಯಾವುದೇ ಮಾಹಿತಿ ಇಲ್ಲ. ರೇಣುಕಾಸ್ವಾಮಿ ಹಾಗೂ ಬೇರೆ ವಿಚಾರ ನನಗೆ ಗೊತ್ತಿಲ್ಲ. ಮಾಧ್ಯಮಗಳಲ್ಲಿ ಬಂದಾಗಲೇ ನನಗೂ ಮಾಹಿತಿ ತಿಳಿದದ್ದು. ಈ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ ಎಂದು ನಡ ಚಿಕ್ಕಣ್ಣ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.

ZEENEWS TRENDING STORIES

By continuing to use the site, you agree to the use of cookies. You can find out more by Tapping this link