Shukra Nakshatra Parivartan 2024: ಪೂರ್ವಾಷಾಢಾ ನಕ್ಷತ್ರಕ್ಕೆ ಶುಕ್ರನ ಪ್ರವೇಶ, ಮಹಾಲಕ್ಷ್ಮಿ ಕೃಪೆಯಿಂದ ಈ ಜನರಿಗೆ ಧನ ಕುಬೇರ ನಿಧಿ ಪ್ರಾಪ್ತಿ ಯೋಗ!

Sun, 28 Jan 2024-3:52 pm,

ಒಟ್ಟು 27 ನಕ್ಷತ್ರಗಳಲ್ಲಿ ಪೂರ್ವಾಷಾಢಾ ನಕ್ಷತ್ರ 20ನೇ ನಕ್ಷತ್ರವಾಗಿದೆ. ಸ್ವಯಂ ಶುಕ್ರನೆ ಈ ನಕ್ಷತ್ರಕ್ಕೆ ಅಧಿಪತಿಯಾಗಿದ್ದಾನೆ. ಹೀಗಿರುವಾಗ ಶುಕ್ರ ತನ್ನ ಸ್ವನಕ್ಷತ್ರಕ್ಕೆ ಪ್ರವೇಶಿಸುತ್ತಿರುವುದು, ಸಮಾಜದಲ್ಲಿ ಘನತೆ ಗೌರವವನ್ನು ಹೆಚ್ಚಿಸುತ್ತದೆ. ಪ್ರೇಮ ಸಂಬಂಧದಲ್ಲಿ ಲಾಭ ಸಿಗಲಿದೆ. ಇದರ ಜೊತೆಗೆ ಅಪಾರ ಧನ ಸಂಪತ್ತು ಪ್ರಾಪ್ತಿಯಾಗಿ ಸುಖಿ ಜೀವನವನ್ನು ಕಳೆಯಬಹುದು.   

ಮೇಷ ರಾಶಿ: ಶುಕ್ರ ಪೂರ್ವಾಷಾಢಾ ನಕ್ಷತ್ರವನ್ನು ಪ್ರೇವೇಶಿಸಿದ ನಿಮ್ಮ ಗೋಚರ ಜಾತಕದ ನವಮ ಭಾವದಲ್ಲಿ ಸಂಚರಿಸಲಿದ್ದಾನೆ. ಹೀಗಿರುವಾಗ ನಿಮಗೆ ನಿಮ್ಮ ಅದೃಷ್ಟದ ಸಂಪೂರ್ಣ ಬೆಂಬಲ ಪ್ರಾಪ್ತಿಯಾಗಲಿದೆ. ಆಧ್ಯಾತ್ಮದತ್ತ ನಿಮ್ಮ ಒಲವು ಹೆಚ್ಚಾಗಲಿದೆ. ಉನ್ನತ ಶಿಕ್ಷಣ ಪಡೆಯಬೇಕೆಂಬ ನಿಮ್ಮ ಆಸೆ ಈಡೇರಲಿದೆ. ಕಾರ್ಯ ಕ್ಷೇತ್ರದಲ್ಲಿ ನಿಮ್ಮ ಪ್ರಯತ್ನಕ್ಕೆ ಭಾರಿ ಪ್ರಶಂಸೆ ಸಿಗಲಿದೆ. ಪದೋನ್ನತಿಯ ಜೊತೆಗೆ ಪ್ರಶಸ್ತಿ ಲಭಿಸಲಿದೆ. ವಿದೇಶಕ್ಕೆ ಹೋಗುವ ನಿಮ್ಮ ಕನಸು ಈಡೇರಲಿದೆ. ವೈವಾಹಿಕ ಜೀವನ ಮತ್ತು ಲವ್ ಲೈಫ್ ಕುರಿತು ಹೇಳುವುದಾದರೆ, ಸಕಾರಾತ್ಮಕ ಪ್ರರಿಣಾಮಗಳು ಕಂಡುಬರಲಿವೆ. ಬಾಳಸಂಗಾತಿಯ ಜೊತೆಗೆ ಉತ್ತಮ ಕಾಲವನ್ನು ಕಳೆಯುವಿರಿ. ಪರಸ್ಪರ ಚೆನ್ನಾಗಿ ಅರಿತು, ಅವರ ಬೆಂಬಲದಿಂದ ನೀವು ಪ್ರತಿಯೊಂದು ಕ್ಷೇತ್ರದಲ್ಲಿ ಯಶಸ್ಸನ್ನು ಸಾಧಿಸುವಿರಿ.   

ಮಿಥುನ ರಾಶಿ: ಶುಕ್ರನ ಪೂರ್ವಾಷಾಢಾ ನಕ್ಷತ್ರ ಗೋಚರದ ಮೂಲಕ ನಿಮ್ಮ ಜಾತಕದ ಸಪ್ತಮ ಭಾವದಲ್ಲಿ ಸಂಚರಿಸಲಿದ್ದಾನೆ. ಹೀಗಿರುವಾಗ ನಿಮ್ಮ ಜೀವನದಲ್ಲಿ ಅದರ ಸಕಾರಾತ್ಮಕ ಪರಿಣಾಮಗಳನ್ನು ನೀವು ಕಾಣಬಹುದು. ಸ್ವಲ್ಪ ಎಚ್ಚರಿಕೆ ವಹಿಸಿದರೆ, ಪಾಟ್ನರ್ ಶಿಪ್ ವ್ಯವಹಾರದಲ್ಲಿ ನಿಮಗೆ ಲಾಭ ಸಿಗಲಿದೆ. ವೈವಾಹಿಕ ಜೀವನ ಸಾಕಷ್ಟು ಖುಷಿಗಳಿಂದ ಕೂಡಿರಲಿದೆ. ಒಂಟಿಯಾಗಿದ್ದರೆ, ವಿಶೇಷ ವ್ಯಕ್ತಿಯ ಜೊತೆಗೆ ನಿಮ್ಮ ಭೇಟಿ ನೆರವೇರುವ ಸಾಧ್ಯತೆ ಇದೆ. ಶುಕ್ರನ ಕೃಪೆಯಿಂದ ನಿಮಗೆ ಅಪಾರ ಧನ-ಸಂಪತ್ತು ಪ್ರಾಪ್ತಿಯಾಗಲಿದೆ. ಕುಟುಂಬಸ್ಥರ ಜೊತೆಗೆ ಉತ್ತಮ ಕಾಲವನ್ನು ಕಳೆಯುವಿರಿ.   

ಧನು ರಾಶಿ: ಪೂರ್ವಾಷಾಢಾ ನಕ್ಷತ್ರಕ್ಕೆ ಶುಕ್ರ ಪ್ರವೇಶಿಸಿ ನಿಮ್ಮ ಜಾತಕದ ಲಗ್ನ ಭಾವದಲ್ಲಿ ಆತ ಸಂಚರಿಸಲಿದ್ದಾನೆ. ಇದರಿಂದ ನಿಮ್ಮ ಆರೋಗ್ಯ ಉತ್ತಮವಾಗಿರಲಿದೆ. ಆತ್ಮ ಗೌರವ ಹೆಚ್ಚಾಗಲಿದೆ. ಇದರಿಂದ ಪ್ರತಿಯೊಂದು ಕ್ಷೇತ್ರದಲ್ಲಿ ಯಶಸ್ಸು ನಿಮ್ಮದಾಗುವುದರ ಜೊತೆಗೆ ಅಪಾರ ಧನ ಸಂಪಾದನೆಯನ್ನು ಮಾಡುವಲ್ಲಿ ನೀವು ಯಶಸ್ವಿಯಾಗುವಿರಿ. ಆದಾಯದ ಹೊಸ ಮೂಲಗಳು ತೆರೆದುಕೊಳ್ಳಲಿವೆ. ವೈಯಕ್ತಿಕ ವಿಕಾಸದ ಜೊತೆಗೆ ದೀರ್ಘಕಾಲದಿಂದ ನೀವು ಪಡುತ್ತಿರುವ ಪ್ರಯತ್ನಕ್ಕೆ ಯಶಸ್ಸು ಸಿಗಲಿದೆ. ನಿಮಗೆ ಪ್ರತಿಯೊಂದು ಕ್ಷೇತ್ರದಲ್ಲಿ ಯಶಸ್ಸಿನ ಜೊತೆಗೆ ಧನಲಾಭ ಸಿಗುವ ಪ್ರಬಲ ಯೋಗಗಳು ನಿರ್ಮಾಣಗೊಳ್ಳುತ್ತಿವೆ. ಇದಲ್ಲದೆ ಈ ಅವಧಿಯಲ್ಲಿ ಅದೃಷ್ಟವೂ ಕೂಡ ನಿಮ್ಮೊಂದಿಗಿರಲಿದೆ.  

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)  

ZEENEWS TRENDING STORIES

By continuing to use the site, you agree to the use of cookies. You can find out more by Tapping this link