Shukra Uday: ವಾರದ ಬಳಿಕ ಉದಯಿಸಲಿರುವ ಶುಕ್ರನಿಂದ ಈ ರಾಶಿಯವರ ಬಾಳೆ ಬಂಗಾರ

Fri, 11 Aug 2023-6:50 am,

ನವಗ್ರಹಗಳಲ್ಲಿ ಶುಕ್ರನನ್ನು ಅತ್ಯಂತ ಮಂಗಳಕರ ಗ್ರಹ ಎಂದು ಕರೆಯಲಾಗುತ್ತದೆ. ವ್ಯಕ್ತಿಯ ಜಾತಕದಲ್ಲಿ ಶುಕ್ರನು ಶುಭ ಸ್ಥಾನದಲ್ಲಿದ್ದಾರೆ ಅಂತಹ ವ್ಯಕ್ತಿ ಐಷಾರಾಮಿಯಾದ ಸುಖ ಜೀವನವನ್ನು ನಡೆಸುತ್ತಾನೆ ಎಂದು ಹೇಳಲಾಗುತ್ತದೆ. ಅಂತಹ ಜನರ ಜೀವನವು ಸಂತೋಷ ಮತ್ತು ಸಮೃದ್ಧಿಯಿಂದ ತುಂಬಿರುತ್ತದೆ ಎಂಬ ನಂಬಿಕೆಯೂ ಇದೆ. 

ಪ್ರಸ್ತುತ ಕರ್ಕ ರಾಶಿಯಲ್ಲಿ ಅಸ್ತಮ ಸ್ಥಿತಿಯಲ್ಲಿರುವ ಶುಕ್ರನು ವಾರದ ಬಳಿಕ ಎಂದರೆ ಆಗಸ್ಟ್ 18 ರಂದು ಇದೇ ರಾಶಿಯಲ್ಲಿ ಉದಯಿಸಲಿದ್ದಾನೆ. ಇದರ ಪ್ರಭಾವ ಎಲ್ಲಾ 12 ರಾಶಿಯವರ ಮೇಲೆ ಕಂಡು ಬರುತ್ತದೆ. ಆದರೂ, ಮೂರು ರಾಶಿಯವರಿಗೆ ಇದನ್ನು ಬಂಗಾರದ ಸಮಯ ಎಂದು ಹೇಳಲಾಗುತ್ತಿದೆ. ಆ ಅದೃಷ್ಟದ ರಾಶಿಗಳು ಯಾವುವು ಎಂದು ತಿಳಿಯೋಣ... 

ಶುಕ್ರ ಉದಯವು ಮಿಥುನ ರಾಶಿಯವರಿಗೆ ಭಾರೀ ಅದೃಷ್ಟವನ್ನು ಹೊತ್ತು ತರಲಿದೆ. ಈ ಸಮಯದಲ್ಲಿ ಮಿಥುನ ರಾಶಿಯವರ ಪ್ರತಿ ಕೆಲಸದಲ್ಲೂ ಯಶಸ್ಸು ದೊರೆಯಲಿದ್ದು ಹಣಕಾಸಿನ ಸ್ಥಿತಿಯೂ ಉತ್ತಮಗೊಳ್ಳಲಿದೆ. 

ಶುಕ್ರ ಉದಯದಿಂದಾಗಿ ತುಲಾ ರಾಶಿಯವರು ಕೂಡ ಭಾರೀ ಪ್ರಯೋಜನವನ್ನು ಪಡೆಯಲಿದ್ದಾರೆ. ವ್ಯಾಪಾರ-ವ್ಯವಹಾರದಲ್ಲಿ ಏಳ್ಗೆಯಾಗಲಿದ್ದು ಹಣಕಾಸಿಸ ಸ್ಥಿತಿ ಉತ್ತಮಗೊಳ್ಳಲಿದೆ. ಆದಾಯದ ಹೊಸ ಮೂಲಗಳು ಸೃಷ್ಟಿಯಾಗುವುದರಿಂದ ದೀರ್ಘ ಸಮಯದ ಸಾಲದ ಸುಳಿಯಿಂದ ಹೊರಬರುವಿರಿ. 

ಶುಕ್ರ ಉದಯದಿಂದ ಧನು ರಾಶಿಯವರಿಗೆ ಅದೃಷ್ಟದ ಸಂಪೂರ್ಣ ಬೆಂಬಲ ದೊರೆಯಲಿದೆ. ವ್ಯಾಪಾರ-ವ್ಯವಹಾರದಲ್ಲಿ ಒಳ್ಳೆಯ ಸುದ್ದಿಗಳನ್ನು ಪಡೆಯುವ ಸಾಧ್ಯತೆ ಇದೆ. ಕಠಿಣ ಪರಿಶ್ರಮದ ಸಂಪೂರ್ಣ ಫಲ ದೊರೆಯಲಿದ್ದು ನಿಮ್ಮ ಆದಾಯವೂ ಹೆಚ್ಚಾಗಲಿದೆ. ಒಟ್ಟಾರೆಯಾಗಿ ಇದು ನಿಮಗೆ ಬಂಗಾರದಂತ ಸಮಯ ಎಂದು ಸಾಬೀತುಪಡಿಸಲಿದೆ. 

ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ. 

ZEENEWS TRENDING STORIES

By continuing to use the site, you agree to the use of cookies. You can find out more by Tapping this link