ಮಧುಮೇಹಿಗಳಿಗೆ ವರದಾನವೇ ಸರಿ ʼಈʼ ಹಣ್ಣು! ನೀರಲ್ಲಿ ನೆನಸಿ ತಿಂದ್ರೆ ಯಾವತ್ತೂ ಹೆಚ್ಚಾಗಲ್ಲ ಬ್ಲಡ್‌ ಶುಗರ್!!‌

Thu, 05 Sep 2024-1:02 pm,

ಬಿಡುವಿಲ್ಲದ ದಿನಚರಿಯಲ್ಲಿಯೂ ಮಧುಮೇಹಿಗಳು ತಮ್ಮ ಆಹಾರದ ಬಗ್ಗೆ ಎಚ್ಚರ ವಹಿಸಬೇಕಾಗುತ್ತದೆ.. ಇಲ್ಲವಾದರೇ ಗಂಭೀರ ಸಮಸ್ಯೆಗಳು ಕಾಡುವುದಂತೂ ತಪ್ಪಿದ್ದಲ್ಲ.. ಆದರೆ ಪ್ರಕೃತಿಯಲ್ಲಿ ಸಿಗುವ ಕೆಲವು ಹಣ್ಣು ಮತ್ತು ತರಕಾರಿಗಳು ದೇಹದಲ್ಲಿ ಶುಗರ್‌ ಹೆಚ್ಚಾಗದಂತೆ ತಡೆಯುತ್ತವೆ.. ಅವುಗಳನ್ನು ನಿಮ್ಮ ಆಹಾರದಲ್ಲಿ ಸೇರಿಸಿದರೇ ಮಧುಮೇಹವನ್ನು ನಿಯಂತ್ರಿಸಬಹುದು..   

ಮಧುಮೇಹಿಗಳಿಗೆ ಕೆಲವು ಹಣ್ಣುಗಳು ಔಷಧದಂತೆ ಕೆಲಸ ಮಾಡುತ್ತವೆ.. ಅಂತವುಗಳಲ್ಲಿ ಅಂಜೂರವೂ ಒಂದು.. ಈ ಹಣ್ಣುದೇಹದಲ್ಲಿ ಸಕ್ಕರೆ ಪ್ರಮಾಣ ಹೆಚ್ಚಾಗದಂತೆ ನೋಡಿಕೊಳ್ಳುತ್ತವೆ.. ಹಾಗಾದ್ರೆ ಇವುಗಳನ್ನು ತಿನ್ನುವುದು ಹೇಗೆ ಎಂದು ಇಲ್ಲಿ ತಿಳಿಯೋಣ..  

 ನೆನೆಸಿದ ಅಂಜೂರದ ಹಣ್ಣುಗಳನ್ನು ತಿನ್ನುವುದು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಣದಲ್ಲಿಡಲು ತುಂಬಾ ಪ್ರಯೋಜನಕಾರಿಯಾಗಿದೆ. ಅಂಜೂರದಲ್ಲಿ ನಾರಿನಂಶ ಅಧಿಕವಾಗಿದ್ದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸ್ಥಿರವಾಗಿಡಲು ಸಹಾಯ ಮಾಡುತ್ತದೆ.   

ಅಂಜೂರದ ಹಣ್ಣುಗಳನ್ನು ನೇರವಾಗಿ ತಿನ್ನುವುದಕ್ಕಿಂತ ರಾತ್ರಿ ನೀರಲ್ಲಿ ನೆನಸಿಟ್ಟು ಬೆಳಗಿನ ಜಾವ ಖಾಲಿ ಹೊಟ್ಟೆಯಲ್ಲಿ ತಿಂದ್ರೆ ಮಧುಮೇಹ ಎಷ್ಟೇ ಇದ್ದೂ ನಿಯಂತ್ರಣಕ್ಕೆ ಬರುತ್ತದೆ..  

ನೆನೆಸಿದ ಅಂಜೂರದ ಹಣ್ಣುಗಳನ್ನು ಸೇವಿಸುವುದರಿಂದ, ದೇಹದಲ್ಲಿ ಗ್ಲೂಕೋಸ್ ಮಟ್ಟವು ಕ್ರಮೇಣ ಹೆಚ್ಚಾಗುತ್ತದೆ, ಅದರೊಂದಿಗೆ ರಕ್ತದಲ್ಲಿನ ಸಕ್ಕರೆಯ ಮಟ್ಟವು ನಿಯಂತ್ರಣದಲ್ಲಿರುತ್ತದೆ.   

ಅಂಜೂರದಲ್ಲಿ ನಾರಿನಂಶ ಹೆಚ್ಚಿದ್ದು ಜೀರ್ಣಾಂಗ ವ್ಯವಸ್ಥೆಗೆ ತುಂಬಾ ಪ್ರಯೋಜನಕಾರಿ. ಅಂಜೂರದ ನಿಯಮಿತ ಸೇವನೆಯು ನಿಮ್ಮ ಜೀರ್ಣಾಂಗ ವ್ಯವಸ್ಥೆಯನ್ನು ಬಲವಾಗಿ ಮತ್ತು ಆರೋಗ್ಯಕರವಾಗಿರಿಸುತ್ತದೆ.   

(ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ಜ್ಞಾನವನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಇದನ್ನು ಖಚಿತಪಡಿಸುವುದಿಲ್ಲ.)

ZEENEWS TRENDING STORIES

By continuing to use the site, you agree to the use of cookies. You can find out more by Tapping this link