ವರ್ಷ 2024ರವರೆಗೆ ಈ ರಾಶಿಗಳ ಜನರಿಗೆ ಐಶ್ವರ್ಯಲಕ್ಷ್ಮಿಯ ಕೃಪೆಯಿಂದ ಭಾರಿ ಧನಲಾಭ ಪ್ರಾಪ್ತಿಯ ಯೋಗ!

Spiritual News In Kannada: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಗ್ರಹಗಳು ಕಾಲಕಾಲಕ್ಕೆ ತನ್ನ ರಾಶಿಗಳನ್ನು ಬದಲಾಯಿಸಿ ಗೋಚರಿಸುತ್ತವೆ. ಗ್ರಹಗಳ ಈ ಗೋಚರ ವಿವಿಧ ರಾಶಿಗಳ ಮೇಲೆ ಶುಭ-ಅಶುಭ ಪರಿಣಾಮಗಳನ್ನು ನೀಡುತ್ತದೆ. ಪ್ರಸ್ತುತ ಮಂಗಳನ ಅಂಗಳಕ್ಕೆ ದೇವಗುರು ಬೃಹಸ್ಪತಿಯ ಪ್ರವೇಶ ನೆರವೇರಿದೆ. ಇದು ಕೆಲ ಜಾತಕದವರ ಪಾಲಿಗೆ ಸಾಕಷ್ಟು ಶುಭ ಫಲಿತಾಂಶಗಳನ್ನು ನೀಡಲಿದೆ. 
 

ಬೆಂಗಳೂರು: ವೈದಿಕ ಪಂಚಾಂಗದ ಪ್ರಕಾರ ನವಗ್ರಹಗಳಲ್ಲಿ ಅತಿ ಅತ್ಯಂತ ದೊಡ್ಡ ಗ್ರಹ ಎಂದೇ ಹೇಳಲಾಗುವ ಗುರುಗ್ರಹ ಒಂದರಿಂದ ಒಂದೂವರೆ ವರ್ಷಗಳಿಗೊಮ್ಮೆ ತನ್ನ ರಾಶಿಯನ್ನು ಪರಿವರ್ತಿಸುತ್ತದೆ. ಗುರುಗ್ರಹ ಮಾರ್ಚ್ 2023 ರಂದು ಮೇಷ ರಾಶಿಗೆ ಪ್ರವೇಶಿಸಿದೆ ಹಾಗೂ 2024ರವರೆಗೆ ಗುರು ಅಲ್ಲಿಯೇ ವಿರಾಜಮಾನನಾಗಿರಲಿದ್ದಾನೆ. ಅರ್ಥಾತ್ ಅಲ್ಲಿಯೇ ಆತ ಸಂಚಾರವನ್ನು ಮುಂದುವರೆಸಲಿದ್ದಾನೆ. ಗುರುವಿನ ಈ ಸಂಚಾರ ಕೆಲ ರಾಶಿಗಳ ಜಾತಕದವರಿಗೆ ಭಾರಿ ಲಾಭವನ್ನು ತಂದುಕೊಡಲಿದೆ. ಈ ಅವಧಿಯಲ್ಲಿ ಈ ರಾಶಿಗಳ ಜನರ ಧನಸಂಪತ್ತಿನಲ್ಲಿ ಅಪಾರ ಹೆಚ್ಚಳ ಉಂಟಾಗಲಿದೆ. ಹಾಗಾದರೆ ಬನ್ನಿ ಆ ರಾಶಿಗಳು ಯಾವುವು ಎಂಬುದನ್ನೂ ತಿಳಿದುಕೊಳ್ಳೋಣ, 

 

ಇದನ್ನೂ ಓದಿ-ಮುಂದಿನ 10 ದಿನಗಳ ಕಾಲ ಈ ರಾಶಿಗಳ ಜನರಿಗೆ ಅಷ್ಟೈಶ್ವರ್ಯ ಕರುಣಿಸಲಿದ್ದಾಳೆ ಐಶ್ವರ್ಯ ಲಕ್ಷ್ಮಿ!

 

ಇದನ್ನೂ ನೋಡಿ-

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /5

Spiritual News In Kannada: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಗ್ರಹಗಳು ಕಾಲಕಾಲಕ್ಕೆ ತನ್ನ ರಾಶಿಗಳನ್ನು ಬದಲಾಯಿಸಿ ಗೋಚರಿಸುತ್ತವೆ. ಗ್ರಹಗಳ ಈ ಗೋಚರ ವಿವಿಧ ರಾಶಿಗಳ ಮೇಲೆ ಶುಭ-ಅಶುಭ ಪರಿಣಾಮಗಳನ್ನು ನೀಡುತ್ತದೆ. ಪ್ರಸ್ತುತ ಮಂಗಳನ ಅಂಗಳಕ್ಕೆ ದೇವಗುರು ಬೃಹಸ್ಪತಿಯ ಪ್ರವೇಶ ನೆರವೇರಿದೆ. ಇದು ಕೆಲ ಜಾತಕದವರ ಪಾಲಿಗೆ ಸಾಕಷ್ಟು ಶುಭ ಫಲಿತಾಂಶಗಳನ್ನು ನೀಡಲಿದೆ.   

2 /5

ಕರ್ಕ ರಾಶಿ: ನಿಮ್ಮ ಗೋಚರ ಜಾತಕದ ಕರ್ಮ ಭಾವದಲ್ಲಿ ಗುರುವಿನ ಈ ಗೋಚರ ಸಂಭವಿಸಿದೆ. ಹೀಗಾಗಿ 2024ರವರೆಗೆ ಗುರುವಿನ ಈ ಗೋಚರ ನಿಮ್ಮ ಪಾಲಿಗೆ ಸಾಕಷ್ಟು ಲಾಭವನ್ನು ತಂದುಕೊಡಲಿದೆ. ಈ ಅವಧಿಯಲ್ಲಿ ನಿಮಗೆ ನಿಮ್ಮ ಕಾರ್ಯ ಕ್ಷೇತ್ರದಲ್ಲಿ ಅಪಾರ ಯಶಸ್ಸು ಸಿಗಲಿದೆ. ನೌಕರ ವರ್ಗದ ಜನರಿಗೆ ಈ ಅವಧಿಯಲ್ಲಿ ಪದೋನ್ನತಿಯ ಭಾಗ್ಯ ಸಿಗಲಿದೆ. ನಿಮ್ಮ ಮೇಲಾಧಿಕಾರಿ ನಿಮ್ಮ ಕೆಲಸದಿಂದ ತೃಪ್ತರಾಗಲಿದ್ದಾರೆ. ನಿಮ್ಮ ಕೆಲಸಕ್ಕೆ ಅವರು ಮೆಚ್ಚುಗೆ ವ್ಯಕ್ತಪಡಿಸುವ ಕಾರಣ ನಿಮ್ಮ ಗೌರವ ಕೂಡ ಹೆಚ್ಚಾಗಲಿದೆ. ನಿರುದ್ಯೋಗಿಗಳಿಗೆ ಈ ಅವಧಿಯಲ್ಲಿ ಉದ್ಯೋಗ ಭಾಗ್ಯ ಪ್ರಾಪ್ತಿಯಾಗಲಿದೆ. ಸರ್ಕಾರಿ ಕ್ಷೇತ್ರದಲ್ಲಿ ಕೆಲಸ ಮಾಡುವ ಜನರಿಗೆ ಅಥವಾ ರಾಜಕೀಯದಲ್ಲಿ ಸಕ್ರೀಯರಾಗಿರುವವರಿಗೆ ಶುಭ ಸಂಕೇತಗಳು ಪ್ರಾಪ್ತಿಯಾಗಳಿವೆ. ವ್ಯಾಪಾರಿಗಳಿಗೆ ಈ ಅವಧಿಯಲ್ಲಿ ಉತ್ತಮ ಧನಲಾಭವಾಗುವ ಸಾಧ್ಯತೆ ಇದೆ.  

3 /5

ಧನು ರಾಶಿ: ಗುರುವಿನ ಮೇಷ ಗೋಚರ ಧನು ರಾಶಿಯ ಜಾತಕದವರ ಪಾಲಿಗೆ ಸಾಕಷ್ಟು ಅನುಕೂಲಕರ ಸಾಬೀತಾಗಲಿದೆ. ಏಕೆಂದರೆ ಒಂದೆಡೆ ಗುರು ನಿಮ್ಮ ರಾಶಿಯ ರಾಶ್ಯಾಧಿಪನಾಗಿದ್ದಾರೆ ಇನ್ನೊಂದೆಡೆ ಆತ ನಿಮ್ಮ ಗೋಚರ ಜಾತಕದ ಪಂಚಮ ಭಾವದಲ್ಲಿ ಸಂಚರಿಸಲಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ಮಕ್ಕಳಿಗೆ ಸಂಬಂಧಿಸಿದಂತೆ ಒಳ್ಳೆಯ ಸುದ್ದಿ ನಿಮಗೆ ಸಿಗುವ ಸಾಧ್ಯತೆ ಇದೆ. ಕಾರ್ಯಕ್ಷೇತ್ರದಲ್ಲಿ ನಿಮಗೆ ಅತ್ಯುತ್ತಮ ಅವಕಾಶಗಳು ಪ್ರಾಪ್ತಿಯಾಗಲಿವೆ. ಆರ್ಥಿಕ ವಿಷಯದಲ್ಲಿ ನಿಮಗೆ ಸಾಕಷ್ಟು ಲಾಭ ಉಂಟಾಗುವ ಸಾಧ್ಯತೆ ಇದೆ. ಸುಖ ಸಮೃದ್ಧಿ ಹೆಚ್ಚಾಗಲಿದೆ. ಗುರು ನಿಮ್ಮ ಜಾತಕದ ಚತುರ್ಥ ಹಾಗೂ ಲಗ್ನ ಭಾವಕ್ಕೆ ಅಧಿಪತಿ ಹೀಗಾಗಿ ಈ ಅವಧಿಯಲ್ಲಿ ನಿಮಗೆ ಆಸ್ತಿಪಾಸ್ತಿ-ವಾಹನ ಸುಖ ಪ್ರಾಪ್ತಿಯಾಗುವ ಸಾಧ್ಯತೆ ಇದೆ.   

4 /5

ಸಿಂಹ ರಾಶಿ: ಗುರುವಿನ ಸಿಂಹ ರಾಶಿಯಲ್ಲಿನ ಸಂಚಾರ ನಿಮ್ಮ ಪಾಲಿಗೆ ಅತ್ಯಂತ ಲಾಭದಾಯಕ ಸಾಬೀತಾಗುವ ಸಾಧ್ಯತೆ ಇದೆ. ಏಕೆಂದರೆ ಗುರುಗ್ರಹ ನಿಮ್ಮ ಗೋಚರ ಜಾತಕದ ನವಮ ಭಾವದಲ್ಲಿ ಸಂಚರಿಸಲಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಅದೃಷ್ಟದ ಸಂಪೂರ್ಣ ಬೆಂಬಲ ಸಿಗಲಿದೆ. ಸಾಕಷ್ಟು ಯಶಸ್ಸು-ವೈಭವ ಪ್ರಾಪ್ತಿಯಾಗಲಿದೆ. ಧರ್ಮ-ಕರ್ಮಗಳ ಕಾರ್ಯಗಳಲ್ಲಿ ನಿಮ್ಮ ಸದಭಿರುಚಿ ಹೆಚ್ಚಾಗಲಿದೆ. ಈ ಅವಧಿಯಲ್ಲಿ ನೀವು ಧಾರ್ಮಿಕ ಯಾತ್ರೆಯ ಮೇಲೆ ಹೋಗಬಹುದು. ಇನ್ನೊಂದೆಡೆ ನಿಮ್ಮ ಆತ್ಮವಿಶ್ವಾಸದಲ್ಲಿ ಹೆಚ್ಚಳವಾಗಲಿದೆ. ವೃತ್ತಿ ಜೀವನಕ್ಕೆ ಸಂಬಂಧಿಸಿದಂತೆ ನೀವು ಏನೇ ಯೋಜನೆ ರೂಪಿಸಿದರು ಅವುಗಳಲ್ಲಿ ನಿಮಗೆ ಅದೃಷ್ಟದ ಬೆಂಬಲ ಪ್ರಾಪ್ತಿಯಾಗಲಿದೆ. ವಿದೇಶಕ್ಕೆ ಹೋಗಿ ಅಧ್ಯಯನ ನಡೆಸಲು ಬಯಸುವವರ ಆಸೆ ಈಡೇರಲಿದೆ.  

5 /5

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಧಾರ್ಮಿಕ ನಂಬಿಕೆಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಖಚಿತಪಡಿಸುವುದಿಲ್ಲ. ಅನುಸರಿಸುವ ಮುನ್ನ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)