ಸಮಸಪ್ತಕ ರಾಜಯೋಗ ನಿರ್ಮಾಣ, ಧನ ಕುಬೇರನ ಕೃಪಾವೃಷ್ಟಿಯಿಂದ ಈ ಜನರಿಗೆ ಸಕಲೈಶ್ವರ್ಯ ಪ್ರಾಪ್ತಿಯ ಯೋಗ!

Shani-Surya Samasaptaka Rajyoga: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ, ತಂದೆ-ಮಗನಾಗಿರುವ ಸೂರ್ಯ ಹಾಗೂ ಶನಿಯ ಕೃಪಾವೃಷ್ಟಿಯಿಂದ ಸಮಸಪ್ತಕ ರಾಜಯೋಗ ನಿರ್ಮಾಣಗೊಳ್ಳುತ್ತಿದೆ. ಈ ಶುಭ ರಾಜಯೋಗ ಮೂರು ರಾಶಿಗಳ ಜಾತಕದವರ ಜೀವನದಲ್ಲಿ ಆಕಸ್ಮಿಕ ಧನಲಾಭ ಯೋಗವನ್ನು ಉಂಟುಮಾಡಲಿದೆ. ಬನ್ನಿ ಆ ಅದೃಷ್ಟವಂತ ರಾಶಿಗಳು ಯಾವುವು ಎಂಬುದನ್ನು ತಿಳಿದುಕೊಳ್ಳೋಣ (Spiritual News In Kannada). 
 

Shani-Surya Samasaptak Rajyog 2023:  ವೈದಿಕ ಜೋತಿಷ್ಯ ಪಂಚಾಂಗದ ಪ್ರಕಾರ ಗ್ರಹಗಳು ಕಾಲಕಾಲಕ್ಕೆ ಗೋಚರಿಸಿ ಶುಭ ಹಾಗೂ ಅಶುಭ ಯೋಗಗಳನ್ನು ರೂಪಿಸುತ್ತವೆ. ಅವುಗಳ ಪ್ರಭಾವ ಮಾನವನ ಜೀವನ ಸೇರಿದಂತೆ ಭೂಮಿಯ ಮೇಲಿರುವ ಸಕಲ ಚರಾಚರಗಳ ಮೇಲೆ ಗೋಚರಿಸುತ್ತದೆ. ಪ್ರಸ್ತುತ ಆಗಸ್ಟ್ 17, 2023ರಂದು ಗ್ರಹಗಳ ರಾಜ ಎಂದೇ ಕರೆಯಲಾಗುವ ಸೂರ್ಯ ದೇವ ತನ್ನ ಸ್ವರಾಶಿಯಾಯಿಗಿರುವ ಸಿಂಹ ರಾಶಿಗೆ ಪ್ರವೇಶಿಸಲಿದ್ದಾನೆ (Spiritual News In Kannada). ಇದರಿಂದ ಸೂರ್ಯ ಹಾಗೂ ಶನಿ ಮುಖಾಮುಖಿಯಾಗಿ ಸಮಸಪ್ತಕ ರಾಜಯೋಗ ರೂಪುಗೊಳ್ಳಲಿದೆ. ಈ ರಾಜಯೋಗದ ಪ್ರಭಾವ ಎಲ್ಲಾ ದ್ವಾದಶ ರಾಶಿಗಳ ಜನರ ಮೇಲೆ ಪ್ರಭಾವ ಬೀರಲಿದೆ. ಆದರೆ ಮೂರು ರಾಶಿಗಳ ಜಾತಕದವರಿಗೆ ಇದರಿಂದ ಆಕಸ್ಮಿಕ ಧನಪ್ರಾಪ್ತಿಯ ಯೋಗ ನಿರ್ಮಾಣಗೊಳ್ಳುತ್ತಿದೆ. ಇದರಿಂದ ಅವರ ಜೀವನದಲ್ಲಿ ಅಪಾರ ಉನ್ನತಿ ನೆರವೇರಲಿದೆ. ಬನ್ನಿ ಆ ಅದೃಷ್ಟವಂತ ರಾಶಿಗಳು ಯಾವುವು ತಿಳಿದುಕೊಳ್ಳೋಣ, 

 

ಇದನ್ನೂ ಓದಿ-ಗಜಕೇಸರಿಯಂತಹ ಅತ್ಯಂತ ಶುಭ ರಾಜಯೋಗಗಳ ನಿರ್ಮಾಣ, ಆದಿಲಕ್ಷ್ಮಿಯ ಕೃಪೆಯಿಂದ ಅಪಾರ ಧನಪ್ರಾಪ್ತಿಯ ಯೋಗ!

 

ಇದನ್ನೂ ನೋಡಿ-

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್

1 /5

Shani-Surya Samasaptaka Rajyoga: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ, ತಂದೆ-ಮಗನಾಗಿರುವ ಸೂರ್ಯ ಹಾಗೂ ಶನಿಯ ಕೃಪಾವೃಷ್ಟಿಯಿಂದ ಸಮಸಪ್ತಕ ರಾಜಯೋಗ ನಿರ್ಮಾಣಗೊಳ್ಳುತ್ತಿದೆ. ಈ ಶುಭ ರಾಜಯೋಗ ಮೂರು ರಾಶಿಗಳ ಜಾತಕದವರ ಜೀವನದಲ್ಲಿ ಆಕಸ್ಮಿಕ ಧನಲಾಭ ಯೋಗವನ್ನು ಉಂಟುಮಾಡಲಿದೆ. ಬನ್ನಿ ಆ ಅದೃಷ್ಟವಂತ ರಾಶಿಗಳು ಯಾವುವು ಎಂಬುದನ್ನು ತಿಳಿದುಕೊಳ್ಳೋಣ (Spiritual News In Kannada).   

2 /5

ವೃಷಭ ರಾಶಿ: ಸಮಸಪ್ತಕ ರಾಜಯೋಗ ನಿಮ್ಮ ಪಾಲಿಗೆ ಅತ್ಯಂತ ಲಾಭದಾಯಕ ಸಾಬೀತಾಗಲಿದೆ. ಏಕೆಂದರೆ ನಿಮ್ಮ ರಾಶ್ಯಾಧಿಪ ಶುಕ್ರ ನಿಮ್ಮ ಗೋಚರ ಜಾತಕದ ತೃತೀಯ ಭಾವದಲ್ಲಿ ವಕ್ರನಾಗಿದ್ದಾನೆ. ಇದರಿಂದ ನಿಮ್ಮ ಸಾಹಸ-ಪರಾಕ್ರಮ ಹೆಚ್ಚಾಗಲಿದೆ. ವಿದೇಶಗಳಿಂದ ನಿಮಗೆ ಲಾಭ ಹರಿದುಬರಲಿದೆ. ವಿದೇಶಕ್ಕೆ ಹೋಗುವ ಪ್ರಸಂಗ ಕೂಡ ಎದುರಾಗುವ ಸಾಧ್ಯತೆ ಇದೆ. ಆಮದು ಮತ್ತು ರಫ್ತು ವ್ಯವಹಾರದಲ್ಲಿರುವವರಿಗೆ ಇದರಿಂದ ಭಾರಿ ಆರ್ಥಿಕ ಲಾಭ ಸಿಗುವ ಸಾಧ್ಯತೆ ಇದೆ. ಇನ್ನೊಂದೆಡೆ ನಿಮ್ಮ ಗೋಚರ ಜಾತಕದಲ್ಲಿ ಸೂರ್ಯ ಹಾಗೂ ಶನಿ ಕಾರ್ಕಾಕ್ಷ ರಾಜಯೋಗವನ್ನು ನಿರ್ಮಿಸುತ್ತಿವೆ. ಹೀಗಾಗಿ ಈ ಸಮಯ ನಿಮಗೆ ಸಾಕಷ್ಟು ಅನುಕೂಲಕರ ಸಿದ್ಧ ಸಾಬೀತಾಗಲಿದೆ. ರಾಜಕೀಯದಲ್ಲಿ ಸಕ್ರೀಯರಾಗಿರುವ ಜನರಿಗೆ ಸ್ಥಾನಮಾನ-ಪ್ರತಿಷ್ಠೆ ಪ್ರಾಪ್ತಿಯಾಗಲಿದೆ, ಇಂಜಿನಿಯರ್, ಪೊಲೀಸ್, ಸೇನೆಯ ವೃತ್ತಿಯಲ್ಲಿ ತೊಡಗಿರುವ ಜನರಿಗೆ ಈ ಸಮಯದಲ್ಲಿ ಒಳ್ಳೆಯ ಲಾಭ ಸಿಗಲಿದೆ.   

3 /5

ಸಿಂಹ ರಾಶಿ: ಸಮಸಪ್ತಕ ರಾಜಯೋಗ ನಿಮ್ಮ ಪಾಲಿಗೆ ಅತ್ಯಂತ ಅದ್ಭುತ ಸಿದ್ಧ ಸಾಬೀತಾಗಲಿದೆ. ಏಕೆಂದರೆ ನಿಮ್ಮ ಗೋಚರ ಜಾತಕದಲ್ಲಿ ಬುದ್ಧಾದಿತ್ಯ ರಾಜಯೋಗ ಕೂಡ ನಿರ್ಮಾಣಗೊಳ್ಳುತ್ತಿದೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಆಕಸ್ಮಿಕ ಧನಲಾಭ ಉಂಟಾಗುವ ಸಾಧ್ಯತೆ ಇದೆ. ಇನ್ನೊಂದೆಡೆ ಈ ಅವಧಿಯಲ್ಲಿ ನಿಮಗೆ ಸಕಲ ಭೌತಿಕ ಸುಖ-ಸೌಕರ್ಯಗಳು ಕೂಡ ಪ್ರಾಪ್ತಿಯಾಗಲಿವೆ. ಒಂದು ವೇಳೆ ನೀವು ನಿಮ್ಮ ವ್ಯಾಪಾರವನ್ನು ವಿಸ್ತರಿಸುವ ಯೋಜನೆ ಹೊಂದಿದ್ದರೆ, ಅದಕ್ಕಾಗಿ ಸಮಯ ಸಾಕಷ್ಟು ಉತ್ತಮವಾಗಿರಲಿದೆ. ಈ ಅವಧಿಯಲ್ಲಿ ನೀವು ವಾಹನ-ಆಸ್ತಿಪಾಸ್ತಿ ಖರೀದಿಸುವ ಸಾಧ್ಯತೆ ಇದೆ. ಒಂದು ವೇಳೆ ನೀವು ವಿದ್ಯಾರ್ಥಿಗಳಾಗಿದ್ದು, ಯಾವುದಾದರೊಂದು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅಥವಾ ಉನ್ನತ ವ್ಯಾಸಂಗದ ಸಿದ್ಧತೆಯಲ್ಲಿ ತೊಡಗಿದ್ದರೆ, ಜಯ ನಿಮ್ಮದಾಗಲಿದೆ.   

4 /5

ವೃಶ್ಚಿಕ ರಾಶಿ: ಸಮಸಪ್ತಕ ರಾಜಯೋಗ ನಿರ್ಮಾಣಗೊಳ್ಳುವುದು ನಿಮ್ಮ ಪಾಲಿಗೆ ಅತ್ಯಂದ ಲಾಭದಾಯಕ ಸಿದ್ಧ ಸಾಬೀತಾಗಲಿದೆ. ಏಕೆಂದರೆ ನಿಮ್ಮ ರಾಶಿಯ ರಾಶ್ಯಾಧಿಪನಾಗಿರುವ ಮಂಗಳ ಲಾಭದ ಸ್ಥಾನದಲ್ಲಿದ್ದಾನೆ. ಹೀಗಾಗಿ ನಿಮಗೆ ಹಳೆ ಹೂಡಿಕೆಯಿಂದ ಲಾಭ ಸಿಗಲಿದೆ. ಇನ್ನೊಂದೆಡೆ ನಿಮ್ಮ ಗೋಚರ ಜಾತಕದ ದಶಮ ಭಾವದಲ್ಲಿ ಬುದ್ಧಾದಿತ್ಯ ರಾಜಯೋಗ ಕೂಡ ರೂಪುಗೊಳ್ಳುತ್ತಿದೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಕೆಲಸ-ಕಾರ್ಯಗಳಲ್ಲಿ ಉನ್ನತಿ ಪ್ರಾಪ್ತಿಯಾಗಲಿದೆ. ಈ ಸಮಯದಲ್ಲಿ ನೀವು ನಿಮ್ಮ ಸಾಮಾಜಿಕ ಒಡನಾಟ ಹೆಚ್ಚಿಸುವ ಸಾಧ್ಯತೆ ಇದ್ದು, ನಿಮಗಾಗಿ ಒಂದು ಉತ್ತಮ ನೆಟ್ವರ್ಕ್ ರೂಪಿಸುವಲ್ಲಿ ಯಶಸ್ವಿಯಾಗುವಿರಿ. ನಿಮ್ಮ ಎಲ್ಲಾ ಆಸೆ ಆಕಾಂಕ್ಷೆಗಳು ಈ ಅವಧಿಯಲ್ಲಿ ಈಡೇರಲಿವೆ.   

5 /5

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)