ಸಮಸಪ್ತಕ ರಾಜಯೋಗ ನಿರ್ಮಾಣ, ಧನ ಕುಬೇರನ ಕೃಪಾವೃಷ್ಟಿಯಿಂದ ಈ ಜನರಿಗೆ ಸಕಲೈಶ್ವರ್ಯ ಪ್ರಾಪ್ತಿಯ ಯೋಗ!
Shani-Surya Samasaptaka Rajyoga: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ, ತಂದೆ-ಮಗನಾಗಿರುವ ಸೂರ್ಯ ಹಾಗೂ ಶನಿಯ ಕೃಪಾವೃಷ್ಟಿಯಿಂದ ಸಮಸಪ್ತಕ ರಾಜಯೋಗ ನಿರ್ಮಾಣಗೊಳ್ಳುತ್ತಿದೆ. ಈ ಶುಭ ರಾಜಯೋಗ ಮೂರು ರಾಶಿಗಳ ಜಾತಕದವರ ಜೀವನದಲ್ಲಿ ಆಕಸ್ಮಿಕ ಧನಲಾಭ ಯೋಗವನ್ನು ಉಂಟುಮಾಡಲಿದೆ. ಬನ್ನಿ ಆ ಅದೃಷ್ಟವಂತ ರಾಶಿಗಳು ಯಾವುವು ಎಂಬುದನ್ನು ತಿಳಿದುಕೊಳ್ಳೋಣ (Spiritual News In Kannada).
ವೃಷಭ ರಾಶಿ: ಸಮಸಪ್ತಕ ರಾಜಯೋಗ ನಿಮ್ಮ ಪಾಲಿಗೆ ಅತ್ಯಂತ ಲಾಭದಾಯಕ ಸಾಬೀತಾಗಲಿದೆ. ಏಕೆಂದರೆ ನಿಮ್ಮ ರಾಶ್ಯಾಧಿಪ ಶುಕ್ರ ನಿಮ್ಮ ಗೋಚರ ಜಾತಕದ ತೃತೀಯ ಭಾವದಲ್ಲಿ ವಕ್ರನಾಗಿದ್ದಾನೆ. ಇದರಿಂದ ನಿಮ್ಮ ಸಾಹಸ-ಪರಾಕ್ರಮ ಹೆಚ್ಚಾಗಲಿದೆ. ವಿದೇಶಗಳಿಂದ ನಿಮಗೆ ಲಾಭ ಹರಿದುಬರಲಿದೆ. ವಿದೇಶಕ್ಕೆ ಹೋಗುವ ಪ್ರಸಂಗ ಕೂಡ ಎದುರಾಗುವ ಸಾಧ್ಯತೆ ಇದೆ. ಆಮದು ಮತ್ತು ರಫ್ತು ವ್ಯವಹಾರದಲ್ಲಿರುವವರಿಗೆ ಇದರಿಂದ ಭಾರಿ ಆರ್ಥಿಕ ಲಾಭ ಸಿಗುವ ಸಾಧ್ಯತೆ ಇದೆ. ಇನ್ನೊಂದೆಡೆ ನಿಮ್ಮ ಗೋಚರ ಜಾತಕದಲ್ಲಿ ಸೂರ್ಯ ಹಾಗೂ ಶನಿ ಕಾರ್ಕಾಕ್ಷ ರಾಜಯೋಗವನ್ನು ನಿರ್ಮಿಸುತ್ತಿವೆ. ಹೀಗಾಗಿ ಈ ಸಮಯ ನಿಮಗೆ ಸಾಕಷ್ಟು ಅನುಕೂಲಕರ ಸಿದ್ಧ ಸಾಬೀತಾಗಲಿದೆ. ರಾಜಕೀಯದಲ್ಲಿ ಸಕ್ರೀಯರಾಗಿರುವ ಜನರಿಗೆ ಸ್ಥಾನಮಾನ-ಪ್ರತಿಷ್ಠೆ ಪ್ರಾಪ್ತಿಯಾಗಲಿದೆ, ಇಂಜಿನಿಯರ್, ಪೊಲೀಸ್, ಸೇನೆಯ ವೃತ್ತಿಯಲ್ಲಿ ತೊಡಗಿರುವ ಜನರಿಗೆ ಈ ಸಮಯದಲ್ಲಿ ಒಳ್ಳೆಯ ಲಾಭ ಸಿಗಲಿದೆ.
ಸಿಂಹ ರಾಶಿ: ಸಮಸಪ್ತಕ ರಾಜಯೋಗ ನಿಮ್ಮ ಪಾಲಿಗೆ ಅತ್ಯಂತ ಅದ್ಭುತ ಸಿದ್ಧ ಸಾಬೀತಾಗಲಿದೆ. ಏಕೆಂದರೆ ನಿಮ್ಮ ಗೋಚರ ಜಾತಕದಲ್ಲಿ ಬುದ್ಧಾದಿತ್ಯ ರಾಜಯೋಗ ಕೂಡ ನಿರ್ಮಾಣಗೊಳ್ಳುತ್ತಿದೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಆಕಸ್ಮಿಕ ಧನಲಾಭ ಉಂಟಾಗುವ ಸಾಧ್ಯತೆ ಇದೆ. ಇನ್ನೊಂದೆಡೆ ಈ ಅವಧಿಯಲ್ಲಿ ನಿಮಗೆ ಸಕಲ ಭೌತಿಕ ಸುಖ-ಸೌಕರ್ಯಗಳು ಕೂಡ ಪ್ರಾಪ್ತಿಯಾಗಲಿವೆ. ಒಂದು ವೇಳೆ ನೀವು ನಿಮ್ಮ ವ್ಯಾಪಾರವನ್ನು ವಿಸ್ತರಿಸುವ ಯೋಜನೆ ಹೊಂದಿದ್ದರೆ, ಅದಕ್ಕಾಗಿ ಸಮಯ ಸಾಕಷ್ಟು ಉತ್ತಮವಾಗಿರಲಿದೆ. ಈ ಅವಧಿಯಲ್ಲಿ ನೀವು ವಾಹನ-ಆಸ್ತಿಪಾಸ್ತಿ ಖರೀದಿಸುವ ಸಾಧ್ಯತೆ ಇದೆ. ಒಂದು ವೇಳೆ ನೀವು ವಿದ್ಯಾರ್ಥಿಗಳಾಗಿದ್ದು, ಯಾವುದಾದರೊಂದು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅಥವಾ ಉನ್ನತ ವ್ಯಾಸಂಗದ ಸಿದ್ಧತೆಯಲ್ಲಿ ತೊಡಗಿದ್ದರೆ, ಜಯ ನಿಮ್ಮದಾಗಲಿದೆ.
ವೃಶ್ಚಿಕ ರಾಶಿ: ಸಮಸಪ್ತಕ ರಾಜಯೋಗ ನಿರ್ಮಾಣಗೊಳ್ಳುವುದು ನಿಮ್ಮ ಪಾಲಿಗೆ ಅತ್ಯಂದ ಲಾಭದಾಯಕ ಸಿದ್ಧ ಸಾಬೀತಾಗಲಿದೆ. ಏಕೆಂದರೆ ನಿಮ್ಮ ರಾಶಿಯ ರಾಶ್ಯಾಧಿಪನಾಗಿರುವ ಮಂಗಳ ಲಾಭದ ಸ್ಥಾನದಲ್ಲಿದ್ದಾನೆ. ಹೀಗಾಗಿ ನಿಮಗೆ ಹಳೆ ಹೂಡಿಕೆಯಿಂದ ಲಾಭ ಸಿಗಲಿದೆ. ಇನ್ನೊಂದೆಡೆ ನಿಮ್ಮ ಗೋಚರ ಜಾತಕದ ದಶಮ ಭಾವದಲ್ಲಿ ಬುದ್ಧಾದಿತ್ಯ ರಾಜಯೋಗ ಕೂಡ ರೂಪುಗೊಳ್ಳುತ್ತಿದೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಕೆಲಸ-ಕಾರ್ಯಗಳಲ್ಲಿ ಉನ್ನತಿ ಪ್ರಾಪ್ತಿಯಾಗಲಿದೆ. ಈ ಸಮಯದಲ್ಲಿ ನೀವು ನಿಮ್ಮ ಸಾಮಾಜಿಕ ಒಡನಾಟ ಹೆಚ್ಚಿಸುವ ಸಾಧ್ಯತೆ ಇದ್ದು, ನಿಮಗಾಗಿ ಒಂದು ಉತ್ತಮ ನೆಟ್ವರ್ಕ್ ರೂಪಿಸುವಲ್ಲಿ ಯಶಸ್ವಿಯಾಗುವಿರಿ. ನಿಮ್ಮ ಎಲ್ಲಾ ಆಸೆ ಆಕಾಂಕ್ಷೆಗಳು ಈ ಅವಧಿಯಲ್ಲಿ ಈಡೇರಲಿವೆ.
(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)