Surya Gochar: ನಾಳೆಯಿಂದ ಈ 4 ರಾಶಿಯವರಿಗೆ ಬಂಗಾರದ ಸಮಯ, ಉದ್ಯೋಗದಲ್ಲಿ ಯಶಸ್ಸು

Fri, 15 Dec 2023-6:27 am,

ಸೂರ್ಯ ಗೋಚಾರ:  ನಾಳೆ ಡಿಸೆಂಬರ್ 16ರಂದು ಗ್ರಹಗಳ ರಾಜ ಸೂರ್ಯದೇವನು ವೃಶ್ಚಿಕ ರಾಶಿಯನ್ನು ತೊರೆದು ಧನು ರಾಶಿಯನ್ನು ಪ್ರವೇಶಿಸಲಿದ್ದಾನೆ. 

ಕರ್ಮ ಮಾಸ:  ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಸೂರ್ಯ ದೇವನು ಧನು ರಾಶಿ ಮತ್ತು ಮೀನ ರಾಶಿಯಲ್ಲಿ ಸಂಚರಿಸುವ ಸಮಯವನ್ನು ಮೂಲ ಮಾಸ, ಕರ್ಮ ಮಾಸ ಎಂದು ಕರೆಯಲಾಗುತ್ತದೆ. ಹಾಗಾಗಿ ಈ ಸಮಯದಲ್ಲಿ ಯಾವುದೇ ಕೆಲಸಗಳನ್ನು ಮಾಡುವುದನ್ನು ನಿಷೇಧಿಸಲಾಗಿದೆ. 

ಸಂಕ್ರಾಂತಿ:  ಸೂರ್ಯ ದೇವನು ಯಾವುದೇ ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಪ್ರವೇಶಿಸಿದಾಗ ಅದನ್ನು ಸಂಕ್ರಾಂತಿ ಎಂದು ಕರೆಯಲಾಗುತ್ತದೆ. 

ಧನು ಸಂಕ್ರಾಂತಿ:  ಇದೀಗ ನಾಳೆ ಡಿಸೆಂಬರ್ 16ರಂದು ಧನು ರಾಶಿಗೆ ಸೂರ್ಯನ ಪ್ರವೇಶವನ್ನು ಧನು ಸಂಕ್ರಾಂತಿ ಎಂದು ಕರೆಯಲಾಗುತ್ತದೆ. ಇದರ ಪ್ರಭಾವ ಎಲ್ಲಾ ರಾಶಿಯವರ ಮೇಲೂ ಕಂಡು ಬರುತ್ತದೆ. ಆದರೂ, ಈ ಸಮಯವನ್ನು ನಾಲ್ಕು ರಾಶಿಯವರ ದೃಷ್ಟಿಯಿಂದ ಬಂಗಾರದ ಸಮಯ ಎಂದು ಹೇಳಲಾಗುತ್ತಿದೆ. ಆ ಅದೃಷ್ಟದ ರಾಶಿಗಳೆಂದರೆ... 

ಮಿಥುನ ರಾಶಿ:  ಧನು ರಾಶಿಗೆ ಸೂರ್ಯನ ಪ್ರವೇಶವು ಮಿಥುನ ರಾಶಿಯವರಿಗೆ ಉದ್ಯೋಗ ರಂಗದಲ್ಲಿ ಸಾಕಷ್ಟು ಒಳ್ಳೆಯ ಅವಕಾಶಗಳನ್ನು ನೀಡಲಿದೆ. ಜೀವನದಲ್ಲಿ ಪ್ರಗತಿಯ ಹೊಸ ಹಾದಿಗಳು ತೆರೆಯಲಿವೆ. 

ಕನ್ಯಾ ರಾಶಿ:  ಧನು ಸಂಕ್ರಾಂತಿ ಕನ್ಯಾ ರಾಶಿಯವರ ಜೀವನದಲ್ಲಿ ಹಲವು ಸಮಸ್ಯೆಗಳಿಂದ ಮುಕ್ತಿ ನೀಡಲಿದೆ. ಅದರಲ್ಲೂ ನ್ಯಾಯಾಲಯಕ್ಕೆ ಸಂಬಂಧಿಸಿದ ಪ್ರಕರಣಗಳು ನಿಮ್ಮ ಪರವಾಗಿ ಆಗಲಿವೆ. ಹಣಕಾಸಿನ ಸ್ಥಿತಿಯೂ ಸುಧಾರಿಸಲಿದೆ. 

ಧನು ರಾಶಿ:  ಸ್ವ ರಾಶಿಯಲ್ಲಿ ಸೂರ್ಯನ ಪ್ರವೇಶವು ಧನು ರಾಶಿಯವರಿಗೆ ಸಾಕಷ್ಟು ಪ್ರಯೋಜನಗಳನ್ನು ತರಲಿದೆ. ಈ ವೇಳೆ ನಿಮ್ಮ ಅದೃಷ್ಟವೇ ಬದಲಾಗಲಿದ್ದು, ವೃತ್ತಿ ಬದುಕಿನಲ್ಲಿ, ಕೌಟುಂಬಿಕ ಜೀವನದಲ್ಲಿ ಒಳ್ಳೆಯ ಫಲಗಳನ್ನು ನೀಡಲಿದೆ. 

ಮೀನ ರಾಶಿ:  ಮೀನ ರಾಶಿಯ ಉದ್ಯೋಗಸ್ಥರಿಗೆ ಪ್ರಮೋಷನ್ ಸಾಧ್ಯತೆ ಇದೆ. ಈ ಸಮಯದಲ್ಲಿ ವಿದ್ಯಾರ್ಥಿಗಳು ಕೂಡ ಪ್ರಗತಿಯನ್ನು ಕಾಣಬಹುದು. ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ ಕಂಡು ಬರಲಿದ್ದು, ಹೊಸ ಆಸ್ತಿ ಖರೀದಿ ಯೋಗವೂ ಇದೆ. 

ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ. 

ZEENEWS TRENDING STORIES

By continuing to use the site, you agree to the use of cookies. You can find out more by Tapping this link