ಟೀಂ ಇಂಡಿಯಾದ ಮುಂದಿನ ನಾಯಕ ಈ ಸ್ಫೋಟಕ ಬ್ಯಾಟರ್: ರೋಹಿತ್ ಬಳಿಕ ಮತ್ತೆ ಆರಂಭಿಕನಿಗೆ ಕ್ಯಾಪ್ಟನ್ಸಿ ನೀಡಿದ BCCI!

Mon, 24 Jun 2024-5:41 pm,

ಸದ್ಯ ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ T20 ವಿಶ್ವಕಪ್‌’ನಲ್ಲಿ ಅಬ್ಬರಿಸುತ್ತಿದೆ. ಭಾರತ ತಂಡಕ್ಕೆ ಸೆಮಿಫೈನಲ್‌ ಕೇವಲ ಒಂದು ಹೆಜ್ಜೆ ದೂರದಲ್ಲಿದೆ. ಈ ವಿಶ್ವಕಪ್ ಬಳಿಕ ಟೀಂ ಇಂಡಿಯಾ ಜಿಂಬಾಬ್ವೆ ಪ್ರವಾಸ ಕೈಗೊಳ್ಳಲಿದ್ದು, 5 ಪಂದ್ಯಗಳ ಟಿ20 ಸರಣಿ ನಡೆಯಲಿದೆ

ಈ ಸರಣಿಗೆ ಸಂಬಂಧಿಸಿದಂತೆ ಬಿಸಿಸಿಐ ಶೀಘ್ರದಲ್ಲೇ ಟೀಂ ಇಂಡಿಯಾವನ್ನು ಘೋಷಿಸಲಿದ್ದು, ಟೀಂ ಇಂಡಿಯಾ ನಾಯಕತ್ವವೂ ಬದಲಾಗುವ ಸಾಧ್ಯತೆ ಇದೆ.

ಭಾರತ ಮತ್ತು ಜಿಂಬಾಬ್ವೆ ನಡುವಿನ ಟಿ20 ಸರಣಿ ಜುಲೈ 6 ರಿಂದ ಆರಂಭವಾಗಲಿದೆ. ಈ ಪ್ರವಾಸದಲ್ಲಿ ಕೋಚ್‌’ನಿಂದ ಹಿಡಿದು ನಾಯಕನವರೆಗೆ ಬದಲಾವಣೆ ಕಾಣುವ ಸಾಧ್ಯತೆ ಇದೆ.

ವಿಶ್ವಕಪ್‌’ಗೆ ಮೀಸಲು ಆಟಗಾರನಾಗಿ ಶುಭ್ಮನ್ ಗಿಲ್ ಅವರನ್ನು ತಂಡದ ತಂಡದಲ್ಲಿ ಸೇರಿಸಲಾಯಿತು, ನಂತರ ಗಿಲ್ ಅವರನ್ನು ಬಿಡುಗಡೆ ಮಾಡಲಾಯಿತು. ಈಗ ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ನಾಯಕತ್ವವನ್ನು ಶುಭ್‌ಮನ್’ಗೆ ನೀಡುವ ಸಾಧ್ಯತೆ ಇದೆ.

ಜಿಂಬಾಬ್ವೆ ಪ್ರವಾಸದಲ್ಲಿ ಕೆಲ ಯುವ ಪ್ರತಿಭೆಗಳು ಟೀಂ ಇಂಡಿಯಾಗೆ ಪಾದಾರ್ಪಣೆ ಮಾಡುವ ಅವಕಾಶವನ್ನು ಪಡೆಯಬಹುದು. ಇದರಲ್ಲಿ ರಾಜಸ್ಥಾನ ರಾಯಲ್ಸ್‌’ನ ರಿಯಾನ್ ಪರಾಗ್, ಸನ್‌’ರೈಸರ್ಸ್ ಹೈದರಾಬಾದ್‌’ನ ಸ್ಫೋಟಕ ಬ್ಯಾಟ್ಸ್‌ಮನ್ ಅಭಿಷೇಕ್ ಶರ್ಮಾ, ಕೋಲ್ಕತ್ತಾ ನೈಟ್ ರೈಡರ್ಸ್‌ ವೇಗದ ಬೌಲರ್ ಹರ್ಷಿತ್ ರಾಣಾ ಸೇರಿದ್ದಾರೆ.

ಇದಲ್ಲದೇ ಇದುವರೆಗೆ ವಿಶ್ವಕಪ್ ವೇಳೆ ಬೆಂಚ್ ಮೇಲೆ ಕುಳಿತಿದ್ದ ಸಂಜು ಸ್ಯಾಮ್ಸನ್, ರಿಂಕು ಸಿಂಗ್, ಯಶಸ್ವಿ ಜೈಸ್ವಾಲ್ ಜಿಂಬಾಬ್ವೆ ಪ್ರವಾಸದಲ್ಲಿ ಆಡುವ ಸಾಧ್ಯತೆ ಇದೆ.

ZEENEWS TRENDING STORIES

By continuing to use the site, you agree to the use of cookies. You can find out more by Tapping this link