Trigrahi Yog 2024: ಮೂವತ್ತು ವರ್ಷಗಳ ಬಳಿಕ ಕುಂಭ ರಾಶಿಯಲ್ಲಿ ತ್ರಿಗ್ರಹಿ ಯೋಗ, ಲಕ್ಷ್ಮಿ ಕೃಪೆಯಿಂದ ಈ ಜನರ ಮೇಲೆ ಭಾರಿ ಕನಕವೃಷ್ಟಿ!

Sat, 27 Jan 2024-4:47 pm,

ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಪ್ರಸ್ತುತ ಶನಿ ತನ್ನ ಮೂಲ ತ್ರಿಕೋನ ರಾಶಿಯಾಗಿರುವ ಕುಂಭ ರಾಶಿಯಲ್ಲಿ ವಿರಾಜಮಾನನಾಗಿದ್ದು, 2025ರವರೆಗೆ ಆತ ಅಲ್ಲಿಯೇ ಮುಂದುವರೆಯಲಿದ್ದು, ಫೆಬ್ರುಯರಿ 13, 2024 ರಂದು ಸೂರ್ಯ ಹಾಗೂ ಫೆಬ್ರುವರಿ 2024ರಂದು ಬುಧ ಕುಂಭ ರಾಶಿಗೆ ಸಾಗಲಿದ್ದಾನೆ. ಇದರಿಂದ ಕುಂಭ ರಾಶಿಯಲ್ಲಿ ಅಪರೂಪದ ತ್ರಿಗ್ರಹಿ ಯೋಗ ರಚನೆಯಾಗುತ್ತಿದೆ.   

ಮೇಷ ರಾಶಿ: ಈ ಅಪರೂಪದ ಯೋಗ ನಿಮ್ಮ ಪಾಲಿಗೆ ಚಮತ್ಕಾರ ಸಾಬೀತಾಗಲಿದೆ. ಇದರಿಂದ ನಿಮಗೆ ವೃತ್ತಿಯಲ್ಲಿ ಅಪಾರ ಲಾಭ ಸಿಗಲಿದೆ. ಜೀವನದಲ್ಲಿ ಪ್ರಸನ್ನತೆ ಇರಲಿದೆ. ವಿದೇಶದಲ್ಲಿ ನೌಕರಿ ಪಡೆದುಕೊಳ್ಳುವ ಅವಕಾಶ ಸಿಗಲಿದೆ. ಜೀವನದಲ್ಲಿ ಸಂತುಷ್ಟಿ ಕಂಡುಕೊಳ್ಳುವಲ್ಲಿ ಯಶಸ್ವಿಯಾಗುವಿರಿ. ವೃತ್ತಿಯಲ್ಲಿ ಪದೋನ್ನತಿಯ ಜೊತೆಗೆ ಭಾರಿ ಧನಲಾಭ ಸಿಗಲಿದೆ. ವ್ಯಾಪಾರದ ಕುರಿತು ಹೇಳುವುದಾದರೆ, ಉತ್ತಮ ಲಾಭ ನಿಮ್ಮದಾಗಲಿದೆ. ಹೊಸ ವ್ಯಾಪಾರ ಆರಂಭಿಸಲು ಈ ಕಾಲ ಸಕಾಲವಾಗಿದೆ. ಆರ್ಥಿಕ ಸ್ಥಿತಿ ಬಲಿಷ್ಠವಾಗಿರಲಿದೆ. ಪಿತ್ರಾರ್ಜಿತ ಸಂಪತ್ತಿನ ಮತ್ತು ಷೇರು ಮಾರುಕಟ್ಟೆಯಲ್ಲಿನ ಹೂಡಿಕೆಯಿಂದ ನಿಮಗೆ ಲಾಭ ಸಿಗಲಿದೆ.   

ವೃಷಭ ರಾಶಿ: ನಿಮ್ಮ ಜಾತಕದ ದಶಮ ಭಾವದಲ್ಲಿ ಈ ಯೋಗ ರಚನೆಯಾಗುತ್ತಿದ್ದು, ನಿಮ್ಮ ಪಾಲಿಗೆ ಆದಾಯದ ಹಲವು ಮಾರ್ಗಗಳನ್ನು ತೆರೆಯಲಿದೆ. ವಿದೇಶದಲ್ಲಿ ಸಂಪತ್ತು ಖರೀದಿಸುವ ನಿಮ್ಮ ಕನಸು ನನಸಾಗಲಿದೆ. ಈ ಅವಧಿಯಲ್ಲಿ ನಿಮಗೆ ಅದೃಷ್ಟದ ಸಪೂರ್ಣ ಬೆಂಬಲ ಸಿಗಲಿದ್ದು, ನಿಮ್ಮ ಪರಿಶ್ರಮದ ತಕ್ಕ ಫಲ ನಿಮಗೆ ಪ್ರಾಪ್ತಿಯಾಗಲಿದೆ. ನೌಕರಿಯಲ್ಲಿ ಅಪಾರ ಯಶಸ್ಸು ನಿಮ್ಮದಾಗಲಿದೆ. ನಿಮ್ಮ ಕೆಲಸಕ್ಕೆ ಉನ್ನತಾಧಿಕಾರಿಗಳಿಂದ ಪ್ರಶಂಸೆ ಸಿಗಲಿದ್ದು, ಪದೋನ್ನತಿ-ಇಂಕ್ರಿಮೆಂಟ್ ಭಾಗ್ಯ ಪ್ರಾಪ್ತಿಯಾಗಲಿದೆ. ವ್ಯಾಪಾರದ ಕುರಿತು ಹೇಳುವುದಾದರೆ. ನಿಮಗೆ ಅಪಾರ ಯಶಸ್ಸು ಕಾದಿದೆ. ಈ ಅವಧಿಯಲ್ಲಿ ನೀವು ಮಾಡಿರುವ ಹಳೆ ಹೂಡಿಕೆಯಿಂದ ನಿಮಗೆ ಅಪಾರ ಲಾಭ ಸಿಗಲಿದೆ . ವಿದೇಶದಿಂದಲೂ ಕೂಡ ಉತ್ತಮ ಲಾಭ ಹರಿದುಬರಲಿದೆ. ಆರ್ಥಿಕ ಸ್ಥಿತಿಯ ಕುರಿತು ಹೇಳುವುದಾದರೆ. ಈ ಅವಧಿಯಲ್ಲಿ ನೀವು ಉತ್ತಮ ಗಳಿಕೆಯನ್ನು ಮಾಡಬಹುದು. ನಿಮ್ಮ ಪರಿಶ್ರಮದ ಬಲದಿಂದ ಅಪಾರ ಹಣವನ್ನು ನೀವು ಸಂಪಾದಿಸುವಿರಿ.   

ಮಿಥುನ ರಾಶಿ: ನಿಮ್ಮ ಗೋಚರ ಜಾತಕದ ನವಮ ಭಾವದಲ್ಲಿ ಈ ಯೋಗ ರಚನೆಯಾಗುತ್ತಿದ್ದು. ಹೆಜ್ಜೆ ಹೆಜ್ಜೆಗೂ ನಿಮಗೆ ಅಪಾರ ಲಾಭ ನೀಡಲಿದೆ. ದೂರದ ಪ್ರಯಾಣ ಜರುಗುವ ಸಾಧ್ಯತೆ ಇದೆ. ಅಪಾರ ಧನ-ಸಂಪತ್ತು ಕೂಡ ಪ್ರಾಪ್ತಿಯಾಗಲಿದೆ. ಭಾಗ್ಯದ ಸಂಪೂರ್ಣ ಬೆಂಬಲ ಇರುವುದರಿಂದ ಪ್ರತಿಯೊಂದು ಕ್ಷೇತ್ರದಲ್ಲಿ ನಿಮಗೆ ಯಶಸ್ಸು ಸಿಗಲಿದೆ. ನೌಕರಿಯಲ್ಲಿ ಹೊಸ ಅವಕಾಶಗಳು ಸಿಗಲಿದ್ದು, ಪ್ರಮೋಷನ್ ಸೇರಿದಂತೆ ಇತರೆ ಲಾಭಗಳು ನಿಮ್ಮದಾಗಲಿವೆ. ಉನ್ನತ ನೌಕರಿ ಪಡೆದುಕೊಳ್ಳುವ ನಿಮ್ಮ ಆಸೆ ಈಡೇರಲಿದೆ. ವ್ಯಾಪಾರದ ಕುರಿತು ಹೇಳುವುದಾದರೆ, ಉತ್ತಮ ಲಾಭಾಂಶ ನಿಮ್ಮದಾಗಲಿದೆ. ವಿದೇಶದಲ್ಲಿ ವ್ಯಾಪಾರ ಮಾಡುವವರಿಗೆ ಉತ್ತಮ ಲಾಭ ಸಿಗಲಿದೆ, ಆರ್ಥಿಕ ಸ್ಥಿತಿ ಕೂಡ ಸಾಕಷ್ಟು ಬಲಗೊಳ್ಳಲಿದೆ.   

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)  

ZEENEWS TRENDING STORIES

By continuing to use the site, you agree to the use of cookies. You can find out more by Tapping this link