Trigrahi Yog 2024: ಮೂವತ್ತು ವರ್ಷಗಳ ಬಳಿಕ ಪರಸ್ಪರ ಹತ್ತಿರಕ್ಕೆ ಮಂಗಳ, ಶುಕ್ರ ಮತ್ತು ಶನಿ, ಈ ಜನರಿಗೆ ಭಾರಿ ಉನ್ನತಿ-ಧನಪ್ರಾಪ್ತಿ ಯೋಗ!

Fri, 16 Feb 2024-2:58 pm,

ಮೇಷ ರಾಶಿ: ಶನಿ-ಶುಕ್ರ ಹಾಗೂ ಮಂಗಳರ ಕುಂಭ ರಾಶಿ ಗೋಚರ ನಿಮ್ಮ ಪಾಲಿಗೆ ವರದಾನ ಸಾಬೀತಾಗಲಿದೆ. ಏಕೆಂದರೆ ಈ ಮೈತ್ರಿ ನಿಮ್ಮ ಗೋಚರ ಜಾತಕದ ಆದಾಯ ಮತ್ತು ಲಾಭದ ಸ್ಥಾನದಲ್ಲಿ ನೆರವೇರುತ್ತಿದೆ. ಇದರಿಂದ ನಿಮ್ಮ ಆದಾಯದಲ್ಲಿ ಅಪಾರ ಹೆಚ್ಚಳ ಸಂಭವಿಸಲಿದ್ದು, ಆದಾಯದ ಮೂಲಗಳು ಹೆಚ್ಚಾಗಲಿವೆ. ಇನ್ನೊಂದೆಡೆ ಈ ಅವಧಿಯಲ್ಲಿ ನಿಮಗೆ ಹೂಡಿಕೆಯಿಂದ ಅಪಾರ ಲಾಭ ಸಿಗಲಿದೆ. ಇದರ ಜೊತೆಗೆ ನೀವು ಅಪಾರ ಹಣ ಉಳಿತಾಯ ಮಾಡುವಲ್ಲಿ ಯಶಸ್ವಿಯಾಗುವಿರಿ. ನೌಕರವರ್ಗದ ಜನರಿಗೂ ಕೂಡ ಹೂಡಿಕೆಯಿಂದ ಲಾಭ ಸಿಗಲಿದೆ. ಒಂದು ವೇಳೆ ನೀವು ಷೇರು ಮಾರುಕಟ್ಟೆಯಲ್ಲಿ ವ್ಯವಹಾರ ನಡೆಸುತ್ತಿದ್ದರೆ, ಈ ಸಮಯ ನಿಮಗೆ ಸಾಕಷ್ಟು ಅನುಕೂಲಕರವಾಗಿದೆ.  

ವೃಷಭ ರಾಶಿ: ಶನಿ, ಮಂಗಳ ಹಾಗೂ ಶುಕ್ರರ ಈ ಸಂಯೋಜನೆ ನಿಮಗೆ ಸಾಕಷ್ಟು ಲಾಭದಾಯಕ ಸಾಬೀತಾಗಲಿದೆ. ಏಕೆಂದರೆ ಈ ಮೈತ್ರಿ ನಿಮ್ಮ ಜಾತಕದ ಕರ್ಮ ಭಾವದಲ್ಲಿ ಸೃಷ್ಟಿಯಾಗುತ್ತಿದೆ. ಇದರಿಂದ ನಿರುದ್ಯೋಗಿಗಳಿವೆ ಹೊಸ ನೌಕರಿಯ ಅವಕಾಶ ನಿರ್ಮಾಣಗೊಳ್ಳುತ್ತಿದೆ. ನೌಕರ ವರ್ಗದ ಜನರಿಗೆ ಕಾರ್ಯಸ್ಥಳದಲ್ಲಿ ಸಹೋದ್ಯೋಗಿಗಳ ಸಂಪೂರ್ಣ ಬೆಂಬಲ ಸಿಗಲಿದೆ. ಆರ್ಥಿಕ ದೃಷ್ಟಿಯಿಂದ ಈ ಯೋಗ ನಿಮಗೆ ಅದ್ಭುತ ಸಾಬೀತಾಗಲಿದೆ. ಪಿತ್ರಾರ್ಜಿತ ಸಂಪತ್ತಿನ ಲಾಭ ನಿಮಗೆ ಸಿಗುವ ನಿರೀಕ್ಷೆ ಇದೆ. ಉದ್ಯಮಿಗಳಿಗೆ ಈ ಅವಧಿಯಲ್ಲಿ ಉತ್ತಮ ಧನಲಾಭ ಸಿಗುವ ನಿರೀಕ್ಷೆ ಇದೆ.   

ಕುಂಭ ರಾಶಿ: ಶನಿ ಮಂಗಳ ಹಾಗೂ ಶುಕ್ರರ ಈ ಸಂಯೋಜನೆ ನಿಮಗೆ ಭಾರಿ ಲಾಭವನ್ನು ತಂದುಕೊಡಲಿದೆ. ಏಕೆಂದರೆ ಈ ಯೋಗ ನಿಮ್ಮ ಜಾತಕದ ಲಗ್ನ ಭಾವದಲ್ಲಿ ರಚನೆಯಾಗುತ್ತಿದೆ. ಹೀಗಾಗಿ ಈ ಅವಧಿಯಲ್ಲಿ ನಿಮ್ಮ ಆತ್ಮ ವಿಶ್ವಾಸದಲ್ಲಿ ಅಪಾರ ಹೆಚ್ಚಳ ಸಂಭವಿಸಲಿದೆ. ಆರ್ಥಿಕ ವೇದಿಕೆಯ ಕುರಿತು ಹೇಳುವುದಾದರೆ, ಈ ಅವಧಿಯಲ್ಲಿ ನಿಮಗೆ ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ. ನಿಮ್ಮ ವ್ಯಕ್ತಿತ್ವದಲ್ಲಿ ಹೊಸ ಹೊಳಪು ಕಾಣಲು ನಿಮಗೆ ಸಿಗಲಿದೆ. ಈ ಅವಧಿಯಲ್ಲಿ ನಿಮಗೆ ನಿಮ್ಮ ಸಂಗಾತಿಯ ಬೆಂಬಲ ಸಿಗಲಿದೆ. ಆದಾಯದಲ್ಲಿ ಜಬರ್ದಸ್ತ ಹೆಚ್ಚಳ ಸಂಭವಿಸಲಿದ್ದು, ಅವಿವಾಹಿತರಿಗೆ ಕಂಕಣ ಭಾಗ್ಯ ಪ್ರಾಪ್ತಿಯಾಗುವ ಸಾಧ್ಯತೆ ಇದೆ.   

ಮಿಥುನ ರಾಶಿ: ನಿಮ್ಮ ಗೋಚರ ಜಾತಕದ ನವಮ ಭಾವದಲ್ಲಿ ಈ ಯೋಗ ರಚನೆಯಾಗುತ್ತಿದ್ದು. ಹೆಜ್ಜೆ ಹೆಜ್ಜೆಗೂ ನಿಮಗೆ ಅಪಾರ ಲಾಭ ನೀಡಲಿದೆ. ದೂರದ ಪ್ರಯಾಣ ಜರುಗುವ ಸಾಧ್ಯತೆ ಇದೆ. ಅಪಾರ ಧನ-ಸಂಪತ್ತು ಕೂಡ ಪ್ರಾಪ್ತಿಯಾಗಲಿದೆ. ಭಾಗ್ಯದ ಸಂಪೂರ್ಣ ಬೆಂಬಲ ಇರುವುದರಿಂದ ಪ್ರತಿಯೊಂದು ಕ್ಷೇತ್ರದಲ್ಲಿ ನಿಮಗೆ ಯಶಸ್ಸು ಸಿಗಲಿದೆ. ನೌಕರಿಯಲ್ಲಿ ಹೊಸ ಅವಕಾಶಗಳು ಸಿಗಲಿದ್ದು, ಪ್ರಮೋಷನ್ ಸೇರಿದಂತೆ ಇತರೆ ಲಾಭಗಳು ನಿಮ್ಮದಾಗಲಿವೆ. ಉನ್ನತ ನೌಕರಿ ಪಡೆದುಕೊಳ್ಳುವ ನಿಮ್ಮ ಆಸೆ ಈಡೇರಲಿದೆ. ವ್ಯಾಪಾರದ ಕುರಿತು ಹೇಳುವುದಾದರೆ, ಉತ್ತಮ ಲಾಭಾಂಶ ನಿಮ್ಮದಾಗಲಿದೆ. ವಿದೇಶದಲ್ಲಿ ವ್ಯಾಪಾರ ಮಾಡುವವರಿಗೆ ಉತ್ತಮ ಲಾಭ ಸಿಗಲಿದೆ, ಆರ್ಥಿಕ ಸ್ಥಿತಿ ಕೂಡ ಸಾಕಷ್ಟು ಬಲಗೊಳ್ಳಲಿದೆ.     

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)  

ZEENEWS TRENDING STORIES

By continuing to use the site, you agree to the use of cookies. You can find out more by Tapping this link