ಕಿಡ್ನಿ ಸ್ಟೋನ್ ಇದ್ದರೆ ಮನೆಯಂಗಳದಲ್ಲೇ ಸಿಗುವ ಈ ಎಲೆಯ ರಸ ಕುಡಿಯಿರಿ: ಕಲ್ಲು ಸರಾಗವಾಗಿ ಹೊರಬರುತ್ತೆ! ನೋವು ಕೂಡ ಇರಲ್ಲ

Mon, 06 May 2024-8:48 pm,

ಕಿಡ್ನಿ ಸಮಸ್ಯೆ ಇದ್ದರೆ ಇಲ್ಲಿ ನೀಡಿರುವ ಕೆಲವು ಜ್ಯೂಸ್‌’ಗಳ ಸಹಾಯದಿಂದ ಪರಿಹಾರ ಪಡೆಯಬಹುದು. ಈ ಜ್ಯೂಸ್‌’ಗಳು ಯಾವುವು ಮತ್ತು ಅವುಗಳನ್ನು ಹೇಗೆ ತಯಾರಿಸುವುದು ಎಂದು ನೋಡೋಣ.

ಭಾರತದ ಖ್ಯಾತ ಮೂತ್ರಶಾಸ್ತ್ರಜ್ಞ ಡಾ.ಕುಲದೀಪ್ ಅಗರ್ವಾಲ್ ಅವರು ಮೂತ್ರಪಿಂಡದ ಕಲ್ಲುಗಳಿಂದ ನಿಮಗೆ ತೊಂದರೆಯಾಗಿದ್ದರೆ, ಈ 3 ವಿಧದ ಜ್ಯೂಸ್‌’ಗಳನ್ನು ಕುಡಿಯಲು ಸೂಚಿಸುತ್ತಾರೆ. ಇದರಿಂದ ನೀವು ನೋವು ಸೇರಿದಂತೆ ಅನೇಕ ಸಮಸ್ಯೆಗಳಿಂದ ಮುಕ್ತರಾಗಬಹುದು.

ನಿಂಬೆ ರಸ: ನಿಂಬೆ ಒಳಗೆ ಸಿಟ್ರಿಕ್ ಆಮ್ಲವಿದೆ. ಮೂತ್ರಪಿಂಡದ ಕಲ್ಲುಗಳಿಗೆ ನಿಂಬೆ ರಸವನ್ನು ಸೇವಿಸಿದರೆ, ಪರಿಹಾರ ಪಡೆಯಬಹುದು. ಒಂದು ಬಟ್ಟಲಿನಲ್ಲಿ ಮೊಸರು ತೆಗೆದುಕೊಂಡು ಅದಕ್ಕೆ ಒಂದು ಚಮಚ ನಿಂಬೆ ರಸವನ್ನು ಸೇರಿಸಿ, ಮಿಶ್ರಣ ಮಾಡಿ ಸೇವಿಸಿ.

ಟೊಮೆಟೊ ಜ್ಯೂಸ್: ಮೂತ್ರಪಿಂಡದ ಕಲ್ಲುಗಳನ್ನು ತೆಗೆದುಹಾಕಲು ಟೊಮೆಟೊ ಜ್ಯೂಸ್ ತುಂಬಾ ಉಪಯುಕ್ತ. ಎರಡು ಟೊಮೆಟೊಗಳನ್ನು ಚೆನ್ನಾಗಿ ತೊಳೆದು ಅವುಗಳನ್ನು ಮಿಕ್ಸಿಯಲ್ಲಿ ರುಬ್ಬಿ. ಇದಕ್ಕೆ ಉಪ್ಪು ಮತ್ತು ಕರಿಮೆಣಸಿನ ಪುಡಿಯನ್ನು ಬೆರೆಸಿ ಸೇವಿಸಿ, ಆ ಮಿಶ್ರಣವನ್ನು ಫ್ರಿಡ್ಜ್ ನಲ್ಲಿಟ್ಟು ನಂತರ ಜ್ಯೂಸ್ ರೂಪದಲ್ಲಿ ಸೇವಿಸಬಹುದು.

ತುಳಸಿ ಜ್ಯೂಸ್: ತುಳಸಿಯಿಂದ ತಯಾರಿಸಿದ ಜ್ಯೂಸ್ ಮೂತ್ರಪಿಂಡದ ಕಲ್ಲುಗಳ ಸಮಸ್ಯೆಯನ್ನು ಹೋಗಲಾಡಿಸಲು ಉಪಯುಕ್ತವಾಗಿದೆ. ತುಳಸಿ ಎಲೆಗಳ ರಸವನ್ನು ಹಿಂಡಿ ಅದಕ್ಕೆ ಒಂದು ಚಮಚ ಜೇನುತುಪ್ಪವನ್ನು ಸೇರಿಸಿ. ಈ ಮಿಶ್ರಣವನ್ನು ಬೆಳಿಗ್ಗೆ ಮತ್ತು ಸಂಜೆ ಸೇವಿಸಿದರೆ ಕಿಡ್ನಿ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು.

(ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು, ದಯವಿಟ್ಟು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. ZEE NEWS ಇದನ್ನು ಖಚಿತಪಡಿಸುವುದಿಲ್ಲ.)

ZEENEWS TRENDING STORIES

By continuing to use the site, you agree to the use of cookies. You can find out more by Tapping this link