ಶೀಘ್ರದಲ್ಲಿಯೇ ರುಚಕ ರಾಜಯೋಗ ನಿರ್ಮಾಣ, 3 ರಾಶಿಗಳ ಜನರಿಗೆ ಧನ-ಕುಬೇರ ಭಾಗ್ಯ ಪ್ರಾಪ್ತಿ!

Wed, 20 Sep 2023-3:45 pm,

Mars Transit In Vruschik Rashi: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಗ್ರಹಗಳ ಸೇನಾಪತಿ ಮಂಗಳದೇವ ತನ್ನ ಸ್ವರಷಿಯಾಗಿರುವ ವೃಶ್ಚಿಕ ರಾಶಿಗೆ ಪ್ರವೇಶಿಸಲಿದ್ದು, ಇದರಿಂದ ರುಚಕ ರಾಜಯೋಗ ರೂಪುಗೊಳ್ಳುತ್ತಿದೆ. ಈ ರಾಜಯೋಗದಿಂದ ಮೂರು ರಾಶಿಗಳ ಜನರಿಗೆ ಧನ-ಕುಬೇರ ಭಾಗ್ಯ ಪ್ರಾಪ್ತಿಯಾಗಲಿದ್ದು, ಅವರ ಜೀವನದಲ್ಲಿ ಹಣದ ಹೊಳೆಯೇ ಹರಿಸಲಿದ್ದಾನೆ ಮಂಗಳ.  spiritual news in kannada

ವೃಷಭ ರಾಶಿ: ಮಂಗಳ ನಿಮ್ಮ ಗೋಚರ ಜಾತಕದ ಸಪ್ತಮ ಭಾವದಲ್ಲಿ ಸಂಚರಿಸಲಿದ್ದು, ನಿರ್ಮಾಣಗೊಳ್ಳುತ್ತಿರುವ ರುಚಕ ರಾಜಯೋಗ ನಿಮ್ಮ ಪಾಲಿಗೆ ಅತ್ಯಂತ ಲಾಭದಾಯಕ ಸಾಬೀತಾಗಲಿದೆ. ಈ ಅವಧಿಯಲ್ಲಿ ಬಾಳಸಂಗಾತಿಯ ಜೊತೆಗೆ ನಿಮ್ಮ ಸಂಬಂಧಗಳು ಉತ್ತಮವಾಗಿರಲಿವೆ. ಪಾಟ್ನರ್ಶಿಪ್ ವ್ಯವಹಾರದಲ್ಲಿ ನಿಮಗೆ ಉತ್ತಮ ಲಾಭ ಉಂಟಾಗುವ ಸಾಧ್ಯತೆ ಇದೆ. ಮಂಗಳ ನಿಮ್ಮ ಜಾತಕದ ದ್ವಾದಶ ಭಾವಕ್ಕೆ ಅಧಿಪತಿಯಾಗಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನೀವು ಹಣ ಉಳಿತಾಯ ಮಾಡುವಲ್ಲಿ ಯಶಸ್ಸನ್ನು ಸಾಧಿಸುವಿರಿ. ಒಂದು ವೇಳೆ ನೀವು ಬಿಸ್ನೆಸ್ ಮಾಡುತ್ತಿದ್ದರೆ, ಹೊಸ ಯೋಜನೆಗಳನ್ನು ರೂಪಿಸುವಲ್ಲಿ ಯಶಸ್ವಿಯಾಗುವಿರಿ. ಅವಿವಾಹಿತರಿಗೆ ವಿವಾಹ ಭಾಗ್ಯ ಕೂಡಿಬರಲಿದೆ.  

ಕರ್ಕ ರಾಶಿ: ರುಚಕ ರಾಜಯೋಗ ಕರ್ಕ ರಾಶಿಯ ಜಾತಕದವರಿಗೆ ಸಾಕಷ್ಟು ಅನುಕೂಲಕರ ಸಿದ್ಧ ಸಾಬೀತಾಗಲಿದೆ. ಏಕೆಂದರೆ ಈ ಅವಧಿಯಲ್ಲಿ ಮಂಗಳ ಗ್ರಹ ನಿಮ್ಮ ಗೋಚರ ಜಾತಕದ ಪಂಚಮ ಭಾವದಲ್ಲಿ ಸಂಚರಿಸಲಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ಮಕ್ಕಳ ವತಿಯಿಂದ ನಿಮಗೆ ಸಂತಸದ ಸಮಾಚಾರ ಸಿಗುವ ಸಾಧ್ಯತೆ ಇದೆ. ಅವರ ಉನ್ನತಿ ನೆರವೇರಲಿದೆ. ಇನ್ನೊಂದೆಡೆ ನಿಮಗೆ ಆಕಸ್ಮಿಕ ಧನಲಾಭ ಉಂಟಾಗುವ ಎಲ್ಲಾ ಸಾಧ್ಯತೆಗಳಿವೆ. ನೌಕರ ವರ್ಗದ ಜನರಿಗೆ ಕಚೇರಿಯಲ್ಲಿ ಕೆಲಸದ ಉತ್ತಮ ವಾತಾವರಣವಿರಲಿದೆ. ಹೊಸ ನೌಕರಿ ಹುಡುಕಾಟದಲ್ಲಿರುವವರ ಹುಡುಕಾಟ ಅಂತ್ಯವಾಗಲಿದೆ. ಮಂಗಳ ನಿಮ್ಮ ಜಾತಕದ ಕರ್ಮ ಭಾವಕ್ಕೆ ಅಧಿಪತಿಯಾದ ಕಾರಣ ನಿರುದ್ಯೋಗಿಗಳಿಗೆ ಹೊಸ ನೌಕರಿ ಸಿಗುವ ಸಾಧ್ಯತೆ ಇದೆ.   

ತುಲಾ ರಾಶಿ: ರುಚಕ ರಾಜಯೋಗದ ಅವಧಿಯಲ್ಲಿ ಮಂಗಳ ನಿಮ್ಮ ಗೋಚರ ಜಾತಕದ ಧನಭಾವದಲ್ಲಿ ಸಂಚರಿಸಲಿದ್ದಾನೆ. ಹೀಗಾಗಿ ಈ ಯೋಗ ನಿಮ್ಮ ಪಾಲಿಗೆ ಅತ್ಯಂತ ಶುಭ ಫಲಗಳನ್ನು ನೀಡಲಿದೆ. ಈ ಅವಧಿಯಲ್ಲಿ ನಿಮಗೆ ಆಕಸ್ಮಿಕ ಧನಲಾಭ ಉಂಟಾಗಲಿದೆ. ಜೊತೆಗೆ ಸಿಲುಕಿಕೊಂಡಿರುವ ನಿಮ್ಮ ಹಣ ನಿಮ್ಮತ್ತ ಮರಳಲಿದೆ. ಹೂಡಿಕೆಯ ದೃಷ್ಟಿಯಿಂದ ಈ ಸಮಯ ಸಾಕಷ್ಟು ಅದ್ಭುತವಾಗಿದೆ. ನಿಮ್ಮ ಹೂಡಿಕೆಗೆ ಉತ್ತಮ ಆದಾಯ ಸಿಗಲಿದೆ. ವ್ಯಾಪಾರದಲ್ಲಿ ಹೊಸ ರಣತಂತ್ರಗಳನ್ನು ರೂಪಿಸುವುದರಿಂದ ನಿಮಗೆ ಲಾಭ ಉಂಟಾಗಲಿದ್ದು, ನಿಮ್ಮ ಐಡಿಯಾ ವರ್ಕ್ ಔಟ್ ಆಗುವುದನ್ನು ನೀವು ನೋಡುವಿರಿ. ಮಾಧ್ಯಮ, ಚಲನಚಿತ್ರರಂಗ, ಆಟೋಟ, ಮಾರ್ಕೆಟಿಂಗ್, ಪೊಲೀಸ್, ಸೇನೆಗೆ ಸಂಬಂಧಿಸಿದ ಜನರಿಗೆ ಈ ಸಮಯ ವಿಶೇಷ ಯಶಸ್ಸನ್ನು ಕರುಣಿಸಲಿದೆ.  

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)   

ZEENEWS TRENDING STORIES

By continuing to use the site, you agree to the use of cookies. You can find out more by Tapping this link