ಏಳು ದಿನಗಳ ಬಳಿಕ ಸೂರ್ಯನಿಂದ ನೀಚ್ ಭಂಗ್ ರಾಜಯೋಗ ನಿರ್ಮಾಣ, ಈ ರಾಶಿಗಳ ಜನರ ಧನ-ಸಂಪತ್ತಿನಲ್ಲಿ ಅಪಾರ ವೃದ್ಧಿ!

Thu, 12 Oct 2023-4:14 pm,

Neechbhang Rajyog In Tula 2023: ವೈದಿಕ ಪಂಚಾಂಗದ ಪ್ರಕಾರ,  ತುಲಾ ರಾಶಿಗೆ ಗ್ರಹಗಳ ರಾಜ ಸೂರ್ಯನ ಗೋಚರ ನೆರವೇರಲಿದ್ದು, ಇದರಿಂದ ತುಲಾ ರಾಶಿಯಲ್ಲಿ ನೀಚ್ ಭಂಗ್ ರಾಜಯೋಗ ನಿರ್ಮಾಣಗೊಳ್ಳಲಿದೆ. ಈ ರಾಜಯೋಗ ಒಟ್ಟು ಮೂರು ರಾಶಿಗಳ ಜನರಿಗೆ ತುಂಬಾ ವಿಶೇಷವಾಗಿರಲಿದೆ. ಬನ್ನಿ ಆ ರಾಶಿಗಳು ಯಾವುವು ತಿಳಿದುಕೊಳ್ಳೋಣ,  Spiritual News In Kannada  

ಕನ್ಯಾ ರಾಶಿ: ನೀಚಭಂಗ್ ರಾಜಯೋಗ ನಿಮ್ಮ ಪಾಲಿಗೆ ಅತ್ಯಂತ ಲಾಭದಾಯಕ ಸಾಬೀತಾಗಲಿದೆ. ಏಕೆಂದರೆ ಸೂರ್ಯ ನಿಮ್ಮ ಗೋಚರ ಜಾತಕದ ಧನಭಾವದಲ್ಲಿ ಈ ಅವಧಿಯಲ್ಲಿ ಸಂಚರಿಸಲಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಆಕಸ್ಮಿಕ ಧನಪ್ರಾಪ್ತಿಯಾಗುವ ಸಾಧ್ಯತೆ ಇದೆ. ಇದರಿಂದ ನಿಮ್ಮ ಆರ್ಥಿಕ ಸ್ಥಿತಿ ಸುಧಾರಿಸಲಿದೆ. ಇದರಿಂದ ನಿಮಗೆ ಅಪಾರ ಹಣ, ಸ್ಥಾನಮಾನ, ಪ್ರತಿಷ್ಠೆ ಪ್ರಾಪ್ತಿಯಾಗಲಿದೆ. ಸಮಾಜದಲ್ಲಿ ಜನರ ಮಧ್ಯೆ ನಿಮ್ಮ ಘನತೆ-ಗೌರವ ಹೆಚ್ಚಾಗಲಿದೆ. ಇದರಿಂದ ಜನರು ನಿಮ್ಮಿಂದ ಪ್ರಭಾವಿತರಗಲಿದ್ದಾರೆ. ವ್ಯಾಪಾರಿಗಳಿಗೆ ಅವರ ಸಿಲುಕಿ ಬಿದ್ದ ಹಣ ಸಿಗಲಿದೆ.   

ಧನು ರಾಶಿ: ನೀಚಭಂಗ್ ರಾಜಯೋಗ ನಿರ್ಮಾಣ ನಿಮ್ಮ ಪಾಲಿಗೆ ಸಾಕಷ್ಟು ಅನುಕೂಲಕರ ಸಾಬೀತಾಗಲಿದೆ. ಏಕೆಂದರೆ ಈ ಅವಧಿಯಲ್ಲಿ ಸೂರ್ಯ ನಿಮ್ಮ ಗೋಚರ ಜಾತಕದ ಆದಾಯ ಭಾವಲ್ಲಿ ಸಂಚರಿಸಲಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಆದಾಯದ ಹೊಸ ಮೂಲಗಳು ತೆರೆದುಕೊಳ್ಳಲಿವೆ. ಇದರಿಂದ ನಿಮ್ಮ ಆದಾಯದಲ್ಲಿ ಅಪಾರ ಹೆಚ್ಚಳ ಸಂಭವಿಸಿ, ಧನವೃದ್ಧಿಯಾಗಲಿದೆ ಹಾಗೂ ಅದೃಷ್ಟದ ಸಂಪೂರ್ಣ ಬೆಂಬಲ ಸಿಗಲಿದೆ. ನೌಕರಿ ಮತ್ತು ವ್ಯಾಪಾರದಲ್ಲಿ ನಿಮಗಾಗಿ ಅಳವು ಅದ್ಭುತ ಅವಕಾಶಗಳು ಒದಗಿಬರಲಿದ್ದು, ವೈಯಕ್ತಿಕ ಜೀವನದಲ್ಲಿ ನೆಮ್ಮದಿ ಇರಲಿದೆ. ಇನ್ನೊಂದೆಡೆ ಸೂರ್ಯದೇವ ನಿಮ್ಮ ಜಾತಕದ ನವಮ ಭಾವಕ್ಕೆ ಅಧಿಪತಿಯಾಗಿದ್ದಾನೆ. ಹೀಗಾಗಿ ಕೆಲಸದ ನಿಮಿತ್ತ ಸಣ್ಣಪುಟ್ಟ ಯಾತ್ರೆಗಳು ಸಂಭವಿಸುವ ಸಾಧ್ಯತೆ ಇದೆ ಮತ್ತು ಈ ಯಾತ್ರೆಗಳು ನಿಮ್ಮ ಪಾಲಿಗೆ ಸಾಕಷ್ಟು ಶುಭ ಸಾಬೀತಾಗಲಿವೆ.   

ಮಕರ ರಾಶಿ: ನೀಚಭಂಗ್ ರಾಜಯೋಗ ನಿಮ್ಮ ಪಾಲಿಗೂ ಕೂಡ ವರದಾನ ಸಾಬೀತಾಗಲಿದೆ. ಏಕೆಂದರೆ ಈ ಅವಧಿಯಲ್ಲಿ ಸೂರ್ಯದೇವ ನಿಮ್ಮ ಕರ್ಮ ಭಾವದಲ್ಲಿ ಸಂಚರಿಸಲಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಕೆಲಸ ಕಾರ್ಯಗಳಲ್ಲಿ ಅಪಾರ ಯಶಸ್ಸು ಪ್ರಾಪ್ತಿಯಾಗಲಿದೆ. ನಿರುದ್ಯೋಗಿಗಳಿಗೆ ಹೊಸ ನೌಕರಿ ಸಿಗುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ನಿಮ್ಮ ಆತ್ಮವಿಶ್ವಾಸದಲ್ಲಿ ಅಪಾರ ಹೆಚ್ಚಳ ಸಂಭವಿಸುವ ಸಾಧ್ಯತೆ ಇದೆ. ನಿಮಗೆ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ. ಜೀವನದ ಪ್ರತಿಯೊಂದು ಕ್ಷೇತ್ರದಲ್ಲಿ ನಿಮಗೆ ಅತ್ಯುತ್ತಮ ಲಾಭ ನಿಮ್ಮದಾಗಲಿದೆ. ನೌಕರವರ್ಗದ ಜನರಿಗೆ ಕಾರ್ಯಸ್ಥಳದಲ್ಲಿ ಹೊಸ ಜವಾಬ್ದಾರಿ ಸಿಗುವ ಸಾಧ್ಯತೆ ಇದೆ. ವ್ಯಾಪಾರಿಗಳಿಗೆ ಈ ಅವಧಿಯಲ್ಲಿ ಅಪಾರ ಧನಲಾಭ ಸಂಭವಿಸುವ ಸಾಧ್ಯತೆ ಇದೆ.   

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)  

ZEENEWS TRENDING STORIES

By continuing to use the site, you agree to the use of cookies. You can find out more by Tapping this link