Silver Ring: ಚಿನ್ನ ಅಲ್ಲ, ಬೆಳ್ಳಿ ಉಂಗುರ ಧಾರಣೆಯಿಂದ ಜಾತಕದಲ್ಲಿ ಗ್ರಹ ಬಲ, ಜೀವನದಲ್ಲಿ ಸುಖ-ಸಮೃದ್ಧಿ ವೃದ್ಧಿ

Silver Ring Benefits: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಕೈ ಬೆರಳುಗಳಲ್ಲಿ ಚಿನ್ನದ ಬದಲಿಗೆ ಬೆಳ್ಳಿ ಉಂಗುರ ಧಾರಣೆ ಮಾಡುವುದರಿಂದ ವ್ಯಕ್ತಿಯ ಅದೃಷ್ಟವೇ ಬದಲಾಗುತ್ತದೆ ಎಂದು ಹೇಳಲಾಗುತ್ತದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /7

ವೈದಿಕ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಐಷಾರಾಮಿ ಜೀವನಕಾರಕ ಶುಕ್ರನನ್ನು ಕೈ ಹೆಬ್ಬೆರಳಿಗೆ ಅಂಶವೆಂದು ಪರಿಗಣಿಸಲಾಗುತ್ತದೆ. ಯಾವುದೇ ವ್ಯಕ್ತಿಯ ಜಾತಕದಲ್ಲಿ ಶುಕ್ರ ಅಶುಭ ಸ್ಥಾನದಲ್ಲಿದ್ದರೆ ಬೆಳ್ಳಿ ಉಂಗುರ ಧರಿಸುವುದರಿಂದ ಶುಕ್ರ ಬಲಗೊಳ್ಳುತ್ತಾನೆ ಎನ್ನುವ ನಂಬಿಕೆಯಿದೆ. 

2 /7

ಬೆಳ್ಳಿ ಉಂಗುರವು ವ್ಯಕ್ತಿಯ ಅದೃಷ್ಟವನ್ನು ಬದಲಾಯಿಸುತ್ತದೆ. ಆದರೂ, ಕೈಗೆ ಬೆಳ್ಳಿ ಉಂಗುರ ಧಾರಣೆ ಮಾಡುವ ಮೊದಲು ಕೆಲವು ನಿಯಮಗಳನ್ನು ತೆಗೆದುಕೊಳ್ಳಬೇಕು. 

3 /7

ಬೆಳ್ಳಿ ಉಂಗುರವನ್ನು ಯಾವಾಗಲೂ ಹೆಬ್ಬೆರಳಿನಲ್ಲಿ ಧರಿಸಬೇಕು. ಈ ಉಂಗುರವು ಕೀಲುಗಳಿಲ್ಲದೆ ಇರಬೇಕು. ಹುಡುಗಿಯರು ತಮ್ಮ ಎಡಗೈಯಲ್ಲಿ ಮತ್ತು ಹುಡುಗರು ತಮ್ಮ ಬಲಗೈಯಲ್ಲಿ ಬೆಳ್ಳಿ ಉಂಗುರ ಮಾಡುವುದು ಶ್ರೇಷ್ಠ. 

4 /7

ಯಾವುದೇ ವ್ಯಕ್ತಿಯ ಜಾತಕದಲ್ಲಿ ಚಂದ್ರ, ಶುಕ್ರ, ಶನಿ, ಸೂರ್ಯ, ರಾಹು ಮತ್ತು ಬುಧ ದೋಷವಿದ್ದಾಗ ಜ್ಯೋತಿಷ್ಯರನ್ನು ಸಂಪರ್ಕಿಸಿ ಅವರ ಸಲಹೆ ಮೇರೆಗೆ ಬೆಳ್ಳಿ ಉಂಗುರವನ್ನು ಧಾರಣೆ ಮಾಡಬಹುದು. 

5 /7

ಯಾವುದೇ ವ್ಯಕ್ತಿಯ ಜಾತಕದಲ್ಲಿ ಶುಕ್ರ ದುರ್ಬಲನಿದ್ದಾಗ ಬೆಳ್ಳಿ ಉಂಗುರ ಧಾರ್ನಎ ಮಾಡುವುದರಿಂದ ಜೀವನದಲ್ಲಿ ಸುಖ-ಸಂಪತ್ತು ವೃದ್ಧಿಯಾಗುತ್ತದೆ. ಸೌಕರ್ಯಗಳು ಹೆಚ್ಚಾಗುತ್ತವೆ. 

6 /7

ಕೈಯಲ್ಲಿ ಬೆಳ್ಳಿ ಉಂಗುರ ಧರಿಸುವುದರಿಂದ ಬುಧ ದೋಷವೂ ನಿವಾರಣೆಯಾಗುತ್ತದೆ. ಇದರಿಂದ ವ್ಯಕ್ತಿಯು ಉದ್ಯೋಗ ರಂಗದಲ್ಲಿ ಭಾರೀ ಯಶಸ್ಸನ್ನು ಪಡೆಯುತ್ತಾನೆ ಎಂದು ನಂಬಲಾಗಿದೆ. 

7 /7

ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.