Winter Diet: ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಈ ಹಣ್ಣು ಸೇವಿಸಿದ್ರೆ ಅದ್ಭುತ ಆರೋಗ್ಯ ಪ್ರಯೋಜನಗಳು

ಚಳಿಗಾಲದಲ್ಲಿ ಆರೋಗ್ಯಕರ ಹಣ್ಣುಗಳು: ಚಳಿಗಾಲದಲ್ಲಿ ಅನೇಕರು ಹೊಟ್ಟೆಗೆ ಸಂಬಂಧಿಸಿದಂತೆ ಅನೇಕ ಸಮಸ್ಯೆಗಳನ್ನು ಎದುರಿಸುತ್ತಾರೆ. ಈ ಋತುವಿನಲ್ಲಿ ನೀವು ಆಹಾರದ ಜೊತೆಗೆ ಆರೋಗ್ಯಕರ ಹಣ್ಣುಗಳನ್ನು ಸೇವಿಸಬೇಕು.   

ನವದೆಹಲಿ: ಶೀತ ಹವಾಮಾನ ಶುರುವಾಗಿದ್ದು, ಜನರು ಚಳಿಯ ಹೊಡೆತಕ್ಕೆ ತತ್ತರಿಸಿದ್ದಾರೆ. ಆಸ್ಪತ್ರೆಗಳಲ್ಲಿ ಹೊಟ್ಟೆಗೆ ಸಂಬಂಧಿಸಿದ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳ ಸಂಖ್ಯೆಯಲ್ಲಿ ತೀವ್ರ ಏರಿಕೆಯಾಗುತ್ತಿದೆ. ಈ ಋತುವಿನಲ್ಲಿ ಸಾಂಕ್ರಾಮಿಕ ರೋಗಗಳ ಅಪಾಯವು ಹೆಚ್ಚಾಗುತ್ತದೆ. ಚಳಿಗಾಲದಲ್ಲಿ ತೇವಾಂಶದಿಂದ ಶಿಲೀಂಧ್ರ ಮತ್ತು ಬ್ಯಾಕ್ಟೀರಿಯಾಗಳು ವೇಗವಾಗಿ ಬೆಳೆಯುವುದರಿಂದ ಈ ಸಮಸ್ಯೆ ಉದ್ಭವಿಸುತ್ತದೆ. ಇವುಗಳು ನಮ್ಮ ದೇಹದೊಳಗೆ ದಾಳಿ ಮಾಡುತ್ತವೆ, ಇದರಿಂದ ಅಜೀರ್ಣದ ಸಮಸ್ಯೆ ಪ್ರಾರಂಭವಾಗುತ್ತದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /4

ಬ್ಯಾಕ್ಟೀರಿಯಾಗಳ ದಾಳಿಯಿಂದ ಅನೇಕ ಹೊಟ್ಟೆ ನೋವಿನ ಸಮಸ್ಯೆಗಳು ತಲೆದೋರುತ್ತವೆ. ಹೀಗಾಗಿ ನೀವು ಚಳಿಗಾಲದಲ್ಲಿ ರೋಗಗಳಿಂದ ದೂರವಿರಬೇಕೆಂದರೆ ಉತ್ತಮ ಆಹಾರ ಸೇವಿಸಬೇಕು. ಆಹಾರ ಮಾತ್ರವಲ್ಲದೇ ನೀವು ಋತುಮಾನಕ್ಕೆ ತಕ್ಕಂತೆ ಹಣ್ಣುಗಳನ್ನು ಸೇವಿಸಬೇಕು. ಇವು ನಿಮ್ಮನ್ನು ಹಲವಾರು ರೋಗಗಳಿಂದ ರಕ್ಷಣೆ ನೀಡುತ್ತವೆ. ಚಳಿಗಾಲದಲ್ಲಿ ಯಾವ ಹಣ್ಣುಗಳನ್ನು ಸೇವಿಸಬೇಕು ಅನ್ನೋದರ ಮಾಹಿತಿ ಇಲ್ಲಿದೆ ನೋಡಿ.

2 /4

ಬೆಳಗ್ಗೆ ದೇಹಕ್ಕೆ ಉತ್ತಮ ಆಹಾರ ಬೇಕು. ದೇಹದ ಶಕ್ತಿಯ ಮಟ್ಟವನ್ನು ಕಾಪಾಡಿಕೊಳ್ಳಬೇಕಾಗುತ್ತದೆ. ಈ ಶಕ್ತಿಯ ಮಟ್ಟವನ್ನು ಕಾಪಾಡಿಕೊಳ್ಳಲು, ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಕಲ್ಲಂಗಡಿ ತಿನ್ನಿರಿ. ಇದು ನಿಮ್ಮ ಕರುಳನ್ನು ಶುದ್ಧೀಕರಿಸುತ್ತದೆ ಮತ್ತು ದೇಹದ ಚಯಾಪಚಯವನ್ನು ಹೆಚ್ಚಿಸುತ್ತದೆ. ಇದರ ಬಳಕೆಯಿಂದ ದೇಹದ ವಿದ್ಯುದ್ವಿಚ್ಛೇದ್ಯಗಳ ಸಮತೋಲನ ಕಾಯ್ದುಕೊಳ್ಳಬೇಕು. ಕಲ್ಲಂಗಡಿ ದೇಹವನ್ನು ಹೈಡ್ರೇಟ್ ಮಾಡಲು ಸಹಾಯ ಮಾಡುತ್ತದೆ.

3 /4

ನೀವು ಬೆಳಗ್ಗೆ ಎದ್ದ ಕೂಡಲೇ ತೆಂಗಿನ ನೀರು ಅಥವಾ ಜೀರಿಗೆ ನೀರನ್ನು ಕುಡಿಯಿರಿ. ಜೀರಿಗೆ ನೀರು ದೇಹದ ಚಯಾಪಚಯವನ್ನು ಹೆಚ್ಚಿಸುತ್ತದೆ. ತೆಂಗಿನ ನೀರು ಹೊಟ್ಟೆಯ ಶಾಖವನ್ನು ಕಡಿಮೆ ಮಾಡುತ್ತದೆ. ಇದಲ್ಲದೆ ನೀವು ಜೇನುತುಪ್ಪವನ್ನು ನೀರಿಗೆ ಸೇರಿಸಿ ಸೇವಿಸಬಹುದು, ಇದು ನಿಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಕೆಲಸ ಮಾಡುತ್ತದೆ. ಜೇನು ನೀರು ಸಹ ಚಯಾಪಚಯವನ್ನು ಹೆಚ್ಚಿಸುತ್ತದೆ.

4 /4

ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಪಪ್ಪಾಯಿಯನ್ನು ತಿನ್ನುವುದರಿಂದ ದೇಹವು ಸಂಪೂರ್ಣವಾಗಿ ನಿರ್ವಿಶೀಕರಣಗೊಳ್ಳುತ್ತದೆ. ಇದರೊಂದಿಗೆ ಪಪ್ಪಾಯಿಯು ನಿಮ್ಮನ್ನು ದಿನವಿಡೀ ಚೈತನ್ಯದಿಂದ ಇಡುತ್ತದೆ. ಫೈಬರ್ ಇದರಲ್ಲಿ ಸಾಕಷ್ಟು ಪ್ರಮಾಣದಲ್ಲಿ ಕಂಡುಬರುತ್ತದೆ. ಇದರೊಂದಿಗೆ ಹೊಟ್ಟೆಯ ಸಮಸ್ಯೆಗಳು ಅಂದರೆ ಮಲಬದ್ಧತೆ, ಅಜೀರ್ಣ, ಗ್ಯಾಸ್ ಮತ್ತು ಕರುಳಿನ ಊತ ದೂರ ಹೋಗುತ್ತವೆ.