ಬೆಂಗಳೂರು: ಆಚಾರ್ಯ ಚಾಣಕ್ಯರು ಓರ್ವ ಶ್ರೇಷ್ಠ ಶಿಕ್ಷಕ, ವಿದ್ವಾಂಸ, ರಾಜತಾಂತ್ರಿಕ, ಅರ್ಥಶಾಸ್ತ್ರಜ್ಞ ಮತ್ತು ತಂತ್ರಜ್ಞರಾಗಿದ್ದರು. ಯಾವುದೇ ವ್ಯಕ್ತಿ ಆಚಾರ್ಯ ಚಾಣಕ್ಯರ ನೀತಿಗಳನ್ನು ಅನುಸರಿಸಿದರೆ, ಅವನು ಖಂಡಿತವಾಗಿಯೂ ಯಶಸ್ಸನ್ನು ಪಡೆಯುತ್ತಾನೆ. ಆಚಾರ್ಯ ಚಾಣಕ್ಯ ತನ್ನ ಚಾಣಕ್ಯ ನೀತಿಯಲ್ಲಿ ಮಾನವ ಜೀವನದ ಎಲ್ಲಾ ಅಂಶಗಳನ್ನು ಉಲ್ಲೇಖಿಸಿದ್ದಾರೆ. ತಂದೆ, ಮಗ, ಮಗಳು, ಹೆಂಡತಿ ಮತ್ತು ಸ್ನೇಹಿತ ಇತ್ಯಾದಿಗಳು ಹೇಗಿರಬೇಕು ಎಂಬುದನ್ನೂ ಸಹ ಚಾಣಕ್ಯ ನೀತಿಯಲ್ಲಿ ತಿಳಿಸಲಾಗಿದೆ. ಒಬ್ಬ ವ್ಯಕ್ತಿಯು ತನ್ನ ಜೀವನದಲ್ಲಿ ಯಾವ ತಪ್ಪುಗಳನ್ನು ಮಾಡಬಾರದು ಮತ್ತು ಅದು ಅವನ ಇಡೀ ಜೀವನವನ್ನು ಹೇಗೆ ಹಾಳುಮಾಡುತ್ತದೆ ಎಂದು ಚಾಣಕ್ಯ ನೀತಿಯಲ್ಲಿ ಹೇಳಲಾಗಿದೆ. ಚಾಣಕ್ಯ ನೀತಿಯಲ್ಲಿ, ಆಚಾರ್ಯ ಚಾಣಕ್ಯರು ದಾಂಪತ್ಯ ಜೀವನ ಸುಖಮಯವಾಗಿಸಲು ಪತಿ ಪತ್ನಿಯರು ಯಾವ ತಪ್ಪು ಮಾಡಬಾರದು ಎಂದು ಹೇಳಲಾಗಿದೆ ತಿಳಿದುಕೊಳ್ಳೋಣ. (Spiritual News In Kannada)


COMMERCIAL BREAK
SCROLL TO CONTINUE READING

1. ಆಚಾರ್ಯ ಚಾಣಕ್ಯರ ಪ್ರಕಾರ ಪತಿ ಪತ್ನಿಯರು ತಮ್ಮ ಖಾಸಗಿ ವಿಷಯಗಳನ್ನು ಯಾರೊಂದಿಗೂ ಹಂಚಿಕೊಳ್ಳಬಾರದು. ಚಾಣಕ್ಯ ನೀತಿಯ ಪ್ರಕಾರ, ತಮ್ಮ ನಡುವಿನ ವಿಷಯಗಳನ್ನು ಉಭಯರ ಮಟ್ಟಕ್ಕೆ ಸೀಮಿತವಾಗಿರಿಸಿಕೊಳ್ಳುವ ಪತಿ-ಪತ್ನಿಯರು  ಯಾವಾಗಲೂ ಸಂತೋಷವಾಗಿರುತ್ತಾರೆ.

2. ದಾಂಪತ್ಯ ಜೀವನ ಸುಖಮಯವಾಗಿರಲು ಪತಿ-ಪತ್ನಿಯರು ಯಾವತ್ತೂ ಒಬ್ಬರಿಗೊಬ್ಬರು ಅಹಂಕಾರ ತೋರಬಾರದು. ಆಚಾರ್ಯ ಚಾಣಕ್ಯರ ಪ್ರಕಾರ ವೈವಾಹಿಕ ಜೀವನದಲ್ಲಿ ಪತಿ-ಪತಿ ಇಬ್ಬರೂ ಬಂಡಿಯ ಎರಡು ಚಕ್ರಗಳಿದ್ದಂತೆ, ಎರಡೂ ಚಕ್ರಗಳಲ್ಲಿ  ಹೊಂದಾಣಿಕೆ ಇದ್ದಾಗ ಮಾತ್ರ ಗಾಡಿ ಸರಾಗವಾಗಿ ಮುಂದಕ್ಕೆ ಸಾಗುತ್ತದೆ. 

3. ಆಚಾರ್ಯ ಚಾಣಕ್ಯರ ಪ್ರಕಾರ, ಯಾವುದೇ ಸಂಬಂಧದ ಗಟ್ಟಿತನಕ್ಕೆ ಪರಸ್ಪರರನ್ನು ಗೌರವಿಸುವುದು ತುಂಬಾ ಮುಖ್ಯ ಮತ್ತು ಇಬ್ಬರ ನಡುವೆ ಪ್ರೀತಿ ಮತ್ತು ಗೌರವ ಇದ್ದಾಗ ಮಾತ್ರ ಪತಿ-ಪತ್ನಿಯರ ನಡುವಿನ ಸಂಬಂಧವೂ ಗಟ್ಟಿಯಾಗುತ್ತದೆ. ಹೀಗಾಗಿ ಇಬ್ಬರೂ ಪರಸ್ಪರ ಎಂದಿಗೂ ಅಗೌರವ ತೋರಬಾರದು.


ಇದನ್ನೂ ಓದಿ-ನಾಳೆ ಧನತ್ರಯೋದಶಿ, ಹಸ್ತಾ ನಕ್ಷತ್ರದ ಶುಭ ಸಂಯೋಜನೆ, ಈ 5 ರಾಶಿಗಳ ಜನರ ಮೇಲಿರಲಿದೆ ತಾಯಿ ಲಕ್ಷ್ಮಿಯ ವಿಶೇಷ ಕೃಪೆ!

4. ಪತಿ ಪತ್ನಿಯರು ಜೀವನದಲ್ಲಿ ಎಂದಿಗೂ ಕೂಡ ತಾಳ್ಮೆ ಕಳೆದುಕೊಳ್ಳುವ ಕೆಲಸ ಮಾಡಬಾರದು, ಚಾಣಕ್ಯ ನೀತಿಯ ಪ್ರಕಾರ, ಜನರು ಜೀವನದಲ್ಲಿ ಅನೇಕ ಸಂದರ್ಭಗಳು ಎದುರಾಗುತ್ತವೆ, ಆದರೆ ಎಲ್ಲಾ ಸಂದರ್ಭಗಳಲ್ಲಿ ತಾಳ್ಮೆಯಿಂದ ಕೆಲಸ ಮಾಡುವವರ ಜೀವನವು ಯಶಸ್ವಿಯಾಗುತ್ತದೆ. 


ಇದನ್ನೂ ಓದಿ-Diwali 2023 ಬಳಿಕ ಧನ-ಐಶ್ವರ್ಯದಾತ ಶುಕ್ರನಿಂದ ಮಾಲವ್ಯ ರಾಜಯೋಗ ರಚನೆ, ಅದೃಷ್ಟ ಲಕ್ಷ್ಮಿಯ ಕೃಪೆಯಿಂದ ಈ ಜನರಿಗೆ ಕುಬೇರ ನಿಧಿ ಪಾಪ್ತಿ ಯೋಗ!



(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)


ಇದನ್ನೂ ನೋಡಿ-


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ