ರಾಮನಗರ : ರಾಮನಗರ ವಿಧಾನಸಭಾ ಕ್ಷೇತ್ರದ ಹಾರೋಹಳ್ಳಿ ನೂತನ ತಾಲೂಕು ಕೇಂದ್ರವಾಗಿ ಇಂದು ಲೋಕಾರ್ಪಣೆ ಮಾಡಲಾಗುತ್ತಿದೆ.  


COMMERCIAL BREAK
SCROLL TO CONTINUE READING

ಇಂದು ಹಾರೋಹಳ್ಳಿ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕಂದಾಯ ಸಚಿವ ಆರ್. ಆಶೋಕ್ ಅವರು ಲೋಕಾರ್ಪಣೆ ಮಾಡಲಿದ್ದಾರೆ. 


ಇದನ್ನೂ ಓದಿ : ಶಿಸ್ತು ಕಾಪಾಡಿಕೊಳ್ಳುತ್ತೇವೆ ಎಂದ ರೋಹಿಣಿ, ರೂಪಾ..! ನಿಲ್ಲುತ್ತಾ ಐಎಎಸ್‌ ಐಪಿಎಸ್‌ ವಾರ್‌..?


ರಾಮನಗರ ಕ್ಷೇತ್ರದ ಶಾಸಕಿ ಅನಿತಾ ಕುಮಾರಸ್ವಾಮಿ ಅವರು ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಳ್ಳಲಿದ್ದಾರೆ. ಮಾಜಿ ಸಿಎಂ ಹೆಚ್‌ ಡಿ ಕುಮಾರಸ್ವಾಮಿ ಅವರು ಸಿಎಂ ಆಗಿದ್ದ ವೇಳೆ ಹಾರೋಹಳ್ಳಿಯನ್ನು ತಾಲೂಕು ಕೇಂದ್ರವಾಗಿ ಘೋಷಣೆ ಮಾಡಿದ್ದರು. ಅದಾದ ಬಳಿಕ ಅದು ತಾಲೂಕು ಕೇಂದ್ರದ ರಚನೆ ನೆನೆಗುದಿಗೆ ಬಿದ್ದಿತ್ತು. ಅನಿತಾ ಕುಮಾರಸ್ವಾಮಿ ಸತತ ಪರಿಶ್ರಮದ ಫಲವಾಗಿ ಇಂದು ಹಾರೋಹಳ್ಳಿ ನೂತನ ತಾಲೂಕು ಕೇಂದ್ರವಾಗಿ ಲೋಕಾರ್ಪಣೆಗೊಳ್ಳಲಿದೆ. 


ಬಜೆಟ್  ಅಧಿವೇಶನ ವೇಳೆ ಅನಿತಾ ಕುಮಾರಸ್ವಾಮಿ ಸದನದಲ್ಲೂ ಈ ಬಗ್ಗೆ ಧ್ವನಿ ಎತ್ತಿ, ತಾಲೂಕು ರಚನೆಯ ಅಂತಿಮ ಅಧಿಸೂಚನೆ ಹೊರಡಿಸಲು ವಿಳಂಬವಾಗುತ್ತಿದೆ ಎಂದು ಗುಡುಗಿ ಸರ್ಕಾರದ ಗಮನ ಸೆಳೆದಿದ್ದರು.


ಈಗ ಕನಕಪುರ ತಾಲೂಕಿನಿಂದ ಬೇರ್ಪಟ್ಟು ಹಾರೋಹಳ್ಳಿ ತಾಲೂಕು ಅಸ್ತಿತ್ವಕ್ಕೆ ತರಲಾಗಿದೆ. 


ಇದನ್ನೂ ಓದಿ : ಐಎಎಸ್ ಅಧಿಕಾರಿ ʼಆʼ ಫೋಟೋಸ್‌ ಕಳಿಸಬಹುದಾ...! ಆ ʼನಂಬರ್ʼ ಅವ್ರದ್ದೇ ತಾನೆ 


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.