keep these things in purse to attract money: ಜ್ಯೋತಿಷ್ಯ ಮತ್ತು ವಾಸ್ತು ಶಾಸ್ತ್ರದಲ್ಲಿ ಆರ್ಥಿಕ ಲಾಭಕ್ಕಾಗಿ ಹಲವು ಪರಿಹಾರಗಳನ್ನು ಸೂಚಿಸಲಾಗಿದೆ. ವಾಸ್ತು ಶಾಸ್ತ್ರದ ಪ್ರಕಾರ, ಕೆಲವು ವಸ್ತುಗಳನ್ನು ಪರ್ಸ್ ಅಥವಾ ಜೇಬಿನಲ್ಲಿ ಇಟ್ಟುಕೊಳ್ಳುವುದರಿಂದ ಲಕ್ಷ್ಮಿ ದೇವಿಯ ಆಶೀರ್ವಾದ ಸಿಗುತ್ತದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಬಿಗ್‌ ಬಾಸ್‌ ಬಿಗ್‌ ಅಪ್‌ಡೇಟ್‌: 14 ಸ್ಪರ್ಧಿಗಳ ಪಟ್ಟಿ ರಿಲೀಸ್‌... ದೊಡ್ಮನೆಗೆ ಸೇರುವವರು ಇವರೇ ನೋಡಿ


ಲಕ್ಷ್ಮಿ ದೇವಿಯ ಆಶೀರ್ವಾದವನ್ನು ಪಡೆಯಲು ಬಯಸಿದರೆ, ಅವರು ತಮ್ಮ ಪರ್ಸ್ ಅಥವಾ ಜೇಬಿನಲ್ಲಿ ಕೆಲವು ವಸ್ತುಗಳನ್ನು ಇಡಲು ಪ್ರಾರಂಭಿಸಬೇಕು. ಹೀಗೆ ಮಾಡುವುದರಿಂದ ಪರ್ಸ್ ಅಥವಾ ಪಾಕೆಟ್ ಎಂದಿಗೂ ಖಾಲಿಯಾಗುವುದಿಲ್ಲ ಎಂದು ಹೇಳಲಾಗುತ್ತದೆ. ಇದಲ್ಲದೆ, ವಾಸ್ತು ಶಾಸ್ತ್ರದ ತಜ್ಞರು 10 ವಸ್ತುಗಳಲ್ಲಿ ಯಾವುದಾದರೂ ಒಂದನ್ನು ನಿಮ್ಮ ಪರ್ಸ್ ಅಥವಾ ಜೇಬಿನಲ್ಲಿ ಇಟ್ಟುಕೊಳ್ಳುವುದು ಲಕ್ಷ್ಮಿ ದೇವಿಯ ಆಶೀರ್ವಾದವನ್ನು ತರುತ್ತದೆ ಎಂದು ಹೇಳುತ್ತಾರೆ.


ವಾಸ್ತು ಶಾಸ್ತ್ರದ ಪ್ರಕಾರ, ಈ ವಸ್ತುಗಳಲ್ಲಿ ಯಾವುದಾದರೂ ಒಂದನ್ನು ಪರ್ಸ್ ಅಥವಾ ಜೇಬಿನಲ್ಲಿ ಇಟ್ಟುಕೊಳ್ಳುವುದು ಲಕ್ಷ್ಮಿ ದೇವಿಯ ಆಶೀರ್ವಾದವನ್ನು ನೀಡುತ್ತದೆ.


ಬೆಳ್ಳಿ ನಾಣ್ಯ
ಲಕ್ಷ್ಮಿಯನ್ನು ಮೆಚ್ಚಿಸಲು ಜ್ಯೋತಿಷ್ಯದಲ್ಲಿ ಹಲವಾರು ಪರಿಹಾರಗಳನ್ನು ನೀಡಲಾಗಿದ್ದರೂ, ವಿಶೇಷ ವಾಸ್ತು ನಿಯಮದ ಪ್ರಕಾರ, ಪರ್ಸ್‌ʼನಲ್ಲಿ ಬೆಳ್ಳಿಯ ನಾಣ್ಯವನ್ನು ಇಟ್ಟುಕೊಳ್ಳುವುದರಿಂದ ಆರ್ಥಿಕ ಸ್ಥಿತಿಯು ಉತ್ತಮಗೊಳ್ಳುತ್ತದೆ. ವಾಸ್ತು ನಿಯಮಗಳ ಪ್ರಕಾರ, ಮೊದಲು ಈ ನಾಣ್ಯವನ್ನು ಲಕ್ಷ್ಮಿ ದೇವಿಗೆ ಅರ್ಪಿಸಿ. ನಂತರ ಅದನ್ನು ನಿಮ್ಮ ಪರ್ಸ್‌ʼನಲ್ಲಿ ಇರಿಸಿ. ಹೀಗೆ ಮಾಡುವುದರಿಂದ ಹಣಕಾಸಿನ ಪರಿಸ್ಥಿತಿಯಲ್ಲಿ ಶೀಘ್ರದಲ್ಲೇ ಸುಧಾರಣೆಯನ್ನು ಕಾಣಲು ಪ್ರಾರಂಭಿಸುತ್ತೀರಿ.


ಶ್ರೀ ಯಂತ್ರ:
ಶ್ರೀ ಯಂತ್ರವನ್ನು ತಾಯಿ ಲಕ್ಷ್ಮಿಯ ಸಂಕೇತವೆಂದು ಪರಿಗಣಿಸಲಾಗಿದೆ. ಶ್ರೀ ಯಂತ್ರವನ್ನು ಪರ್ಸ್‌ʼನಲ್ಲಿ ಇಟ್ಟುಕೊಳ್ಳುವುದರಿಂದ ಜೀವನದಲ್ಲಿ ಧನಾತ್ಮಕ ಶಕ್ತಿಯನ್ನು ತರುತ್ತದೆ ಎಂದು ನಂಬಲಾಗಿದೆ. ಶ್ರೀಯಂತ್ರದ ಈ ಪರಿಹಾರವು ಆರ್ಥಿಕ ಪ್ರಗತಿಗೂ ಕಾರಣವಾಗುತ್ತದೆ ಎಂದು ಹೇಳಲಾಗುತ್ತದೆ.


ಗೋಮತಿ ಚಕ್ರ:
ಗೋಮತಿ ಚಕ್ರವನ್ನು ಲಕ್ಷ್ಮಿ ದೇವಿಯ ನೆಚ್ಚಿನ ವಸ್ತುಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ. ಜ್ಯೋತಿಷ್ಯ ಮತ್ತು ವಾಸ್ತು ಶಾಸ್ತ್ರದ ಪ್ರಕಾರ, ಗೋಮತಿ ಚಕ್ರವನ್ನು ಪರ್ಸ್‌ನಲ್ಲಿ ಇಡುವುದರಿಂದ ಆರ್ಥಿಕ ಸ್ಥಿತಿ ಸುಧಾರಿಸುತ್ತದೆ. ಜೊತೆಗೆ ಸಾಲದಿಂದ ಮುಕ್ತರಾಗುತ್ತಾರೆ.


ಒಂದು ರೂಪಾಯಿ:
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿಯೊಬ್ಬ ವ್ಯಕ್ತಿಯೂ ಒಂದು ರೂಪಾಯಿಯ ನೋಟನ್ನು ಪರ್ಸ್‌ʼನಲ್ಲಿ ಇಟ್ಟುಕೊಳ್ಳಬೇಕು. ಅಲ್ಲದೆ ಅದನ್ನು ಎಂದಿಗೂ ಖರ್ಚು ಮಾಡಬಾರದು. ಹೀಗೆ ಮಾಡುವುದರಿಂದ ಹಣದ ಆಕರ್ಷಣೆ ಹೆಚ್ಚುತ್ತದೆ ಎಂಬ ನಂಬಿಕೆ ಇದೆ.


ಅಶ್ವತ್ಥ ಎಲೆ:
ಸನಾತನ ಧರ್ಮದ ನಂಬಿಕೆಗಳ ಪ್ರಕಾರ, ಅಶ್ವತ್ಥ ಮರದಲ್ಲಿ ನೆಲೆಸಿರುತ್ತಾರೆ. ಇದೇ ಕಾರಣಕ್ಕೆ ಜನರು ಆ ಮರವನ್ನು ಭಕ್ತಿಯಿಂದ ಪೂಜಿಸುತ್ತಾರೆ. ಇನ್ನು ಈ ಮರದ ಎಲೆಯನ್ನು ಪರ್ಸ್‌ʼನಲ್ಲಿಟ್ಟುಕೊಳ್ಳುವುದರಿಂದ ಆರ್ಥಿಕ ಸ್ಥಿತಿ ಸುಧಾರಿಸುತ್ತದೆ ಎಂದು ಹೇಳಲಾಗುತ್ತದೆ. ಅಲ್ಲದೆ ದೇವ-ದೇವತೆಗಳ ಆಶೀರ್ವಾದವೂ ಸಿಗುತ್ತದೆ.


ಇದನ್ನೂ ಓದಿ: Weight Loss: ಪ್ರತಿದಿನ ಒಂದು ಲೋಟ ಈ ನೀರು ಕುಡಿದ್ರೆ ಬೆಣ್ಣೆಯಂತೆ ಕರಗುತ್ತೆ ಬೊಜ್ಜು!


ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಜ್ಯೋತಿಷ್ಯವನ್ನು ಆಧರಿಸಿದೆ ಮತ್ತು ಮಾಹಿತಿಗಾಗಿ ಮಾತ್ರ ನೀಡಲಾಗುತ್ತಿದೆ. ಜೀ ಕನ್ನಡ ನ್ಯೂಸ್ ಇದನ್ನು ಖಚಿತಪಡಿಸುವುದಿಲ್ಲ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.