Shukra Gochar 2023: ವೈದಿಕ ಜ್ಯೋತಿಷ್ಯದಲ್ಲಿ ಪ್ರೀತಿ, ಸಂಪತ್ತು, ಐಷಾರಾಮಿ ಜೀವನದ ಅಂಶ ಎಂದು ಪರಿಗಣಿಸಲಾಗಿರುವ ಶುಕ್ರನ ಸ್ಥಾನದಲ್ಲಿನ ಸಣ್ಣ ಬದಲಾವಣೆಯೂ ಸಹ ಎಲ್ಲ ಜೀವರಾಶಿಗಳ ಮೇಲೆ ಮಹತ್ವದ ಪರಿಣಾಮವನ್ನು ಬೀರುತ್ತದೆ. ಯಾವುದೇ ವ್ಯಕ್ತಿಯ ಜಾತಕದಲ್ಲಿ ಶುಕ್ರ ಉಚ್ಚ ಸ್ಥಾನದಲ್ಲಿರುವುದನ್ನು ಅತ್ಯಂತ ಮಂಗಳಕರ ಎಂದು ನಂಬಲಾಗಿದೆ. ಎರಡು ದಿನಗಳ ಹಿಂದೆಯಷ್ಟೆ ಶುಕ್ರನು ಸೂರ್ಯನ ರಾಶಿಗೆ ಪ್ರವೇಶಿಸಿದ್ದಾನೆ. 


COMMERCIAL BREAK
SCROLL TO CONTINUE READING

ಅಕ್ಟೋಬರ್ 02, 2023ರಂದು ಶುಕ್ರನು ಸಿಂಹ ರಾಶಿಗೆ ಪ್ರವೇಶಿಸಿದ್ದು ಮುಂದಿನ ನವೆಂಬರ್ 03, 2023ರವರೆಗೆ ಇದೇ ರಾಶಿಯಲ್ಲಿ ಸಂಚರಿಸಲಿದ್ದಾನೆ. ಶುಕ್ರ ರಾಶಿ ಪರಿವರ್ತನೆಯು ಎಲ್ಲಾ ರಾಶಿಯವರ ಜೀವನದಲ್ಲಿ ಮಹತ್ವದ ಪರಿಣಾಮವನ್ನು ಉಂಟು ಮಾಡುತ್ತದೆ. ಆದರೂ, ಈ ಸಮಯದಲ್ಲಿ ಐದು ರಾಶಿಯವರ ಅದೃಷ್ಟ ಖುಲಾಯಿಸಲಿದೆ ಎಂದು ಹೇಳಲಾಗುತ್ತದೆ. 


ಶುಕ್ರ ರಾಶಿ ಪರಿವರ್ತನೆ: ಐದು ರಾಶಿಯವರಿಗೆ ತಾಯಿ ಮಹಾಲಕ್ಷ್ಮಿ ಕೃಪೆ: 
ವೃಷಭ ರಾಶಿ: 

ವೃಷಭ ರಾಶಿಯವರ ಅಧಿಪತಿ ಗ್ರಹವೂ ಆಗಿರುವ ಶುಕ್ರನ ರಾಶಿ ಬದಲಾವಣೆಯು ಈ ರಾಶಿಯವರ ದೀರ್ಘಕಾಲದಿಂದ ಬಾಕಿ ಉಳಿದಿರುವ ಕೆಲಸಗಳನ್ನು ಶೀಘ್ರದಲ್ಲೇ ಪೂರ್ಣಗೊಳಿಸಲಿದ್ದಾನೆ. ಈ ಸಮಯದಲ್ಲಿ ನಿಮ್ಮ ಹಣಕಾಸಿನ ಸ್ಥಿತಿ ಸುಧಾರಿಸಲಿದ್ದು ಬಾಕಿ ಉಳಿದಿರುವ ಸಾಲಗಳನ್ನು ತೀರಿಸುವಿರಿ. ಇದು ನಿಮ್ಮ ಜೀವನಮಟ್ಟವನ್ನು ಧನಾತ್ಮಕವಾಗಿ ಸುಧಾರಿಸಲಿದೆ. 


ಇದನ್ನೂ ಓದಿ- Bhadra Yoga: ಬುಧ ಸಂಚಾರದಿಂದ ಭದ್ರ ಯೋಗ, ಮೂರು ರಾಶಿಯವರಿಗೆ ಖುಲಾಯಿಸಲಿದೆ ಅದೃಷ್ಟ


ಮಿಥುನ ರಾಶಿ: 
ಶುಕ್ರ ರಾಶಿ ಪರಿವರ್ತನೆಯು ಮಿಥುನ ರಾಶಿಯವರಿಗೂ ಕೂಡ ಬಂಗಾರದ ಸಮಯವನ್ನು ತಂದಿದೆ. ಈ ಸಮಯದಲ್ಲಿ ನಿಮ್ಮ ವೃತ್ತಿ ವ್ಯವಹಾರಗಳಿಗೆ ಸಂಬಂಧಿಸಿದಂತೆ ನೀವು ತೆಗೆದುಕೊಳ್ಳುವ ನಿರ್ಧಾರಗಳು ಭವಿಷ್ಯದಲ್ಲಿ ತುಂಬಾ ಪ್ರಯೋಜನಕಾರಿ ಎಂದು ಸಾಬೀತುಪಡಿಸಲಿದೆ. 


ಕನ್ಯಾ ರಾಶಿ: 
ಶುಕ್ರ ರಾಶಿ ಬದಲಾವಣೆಯು ಕನ್ಯಾ ರಾಶಿಯವರ ಜೀವನದಲ್ಲಿ ಹೊಸ ಹೊಸ ಅವಕಾಶಗಳನ್ನು ತೆರೆಯಲಿವೆ. ನಿಮ್ಮ ಹಿರಿಯರ ಆಶೀರ್ವಾದದಿಂದ ನೀವು ಕೈ ಹಾಕಿದ ಕೆಲಸಗಳಲ್ಲಿ ಕಾರ್ಯ ಸಿದ್ಧಿಯೋಗವೂ ಇದೇ. ಒಟ್ಟಾರೆಯಾಗಿ ಶುಕ್ರ ಸಂಚಾರವು ನಿಮ್ಮ ಅದೃಷ್ಟವನ್ನೇ ಬದಲಾಯಿಸಲಿದೆ. 


ಧನು ರಾಶಿ: 
ಶುಕ್ರ ರಾಶಿ ಪರಿವರ್ತನೆಯು ಧನು ರಾಶಿಯವರಿಗೆ ಬಂಪರ್ ಧನ ಲಾಭವನ್ನು ತರಲಿದೆ. ಈ ಸಮಯದಲ್ಲಿ ನಿಮ್ಮ ಬ್ಯಾಂಕ್ ಬಾಲನ್ಸ್ ಹೆಚ್ಚಾಗಲಿದ್ದು ಭವಿಷ್ಯಕ್ಕಾಗಿಯೂ ಹಣವನ್ನು ಕೂಡಿಡುವಿರಿ. ವೃತ್ತಿ ಸಂಬಂಧಿತ ಪ್ರಯಾಣಗಳು ಲಾಭದಾಯಕವಾಗಿರಲಿವೆ. 


ಇದನ್ನೂ ಓದಿ- Rahu-Ketu Transit: ಒಂದೂವರೆ ವರ್ಷಗಳ ಬಳಿಕ ಈ 5 ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದ್ದಾರೆ ರಾಹು-ಕೇತು


ಕುಂಭ ರಾಶಿ: 
ಅಕ್ಟೋಬರ್ ತಿಂಗಳಿನಲ್ಲಿ ಶುಕ್ರ ಸಂಚಾರವು ಕುಂಭ ರಾಶಿಯವರಿಗೆ ಭಾಗ್ಯೋದಯದ ಸಮಯವಾಗಿದೆ. ಈ ಸಮಯದಲ್ಲಿ ನಿಮ್ಮ ಬಹು ದಿನದ ಕನಸುಗಳು ನನಸಾಗಲಿದ್ದು ಮಕ್ಕಳಿಂದ ನೆಮ್ಮದಿಯ ಸುದ್ದಿಯನ್ನು ಸ್ವೀಕರಿಸುವಿರಿ. ವೃತ್ತಿ ಬದುಕಿನಲ್ಲೂ ಉತ್ತಮ ಯಶಸ್ಸನ್ನು ಗಳಿಸುವಿರಿ. ತಾಯಿ ಲಕ್ಷ್ಮಿ ಆಶೀರ್ವಾದದಿಂದ ಹಣಕಾಸಿನ ಹರಿವು ಹೆಚ್ಚಾಗಲಿದ್ದು ನಿಮ್ಮ ಬಹುತೇಕ ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.