ಶ್ರೀ ಗುರು ರಾಘವೇಂದ್ರರರ ವರ್ಧಂತಿ ಮಹೋತ್ಸವ

Sri Guru Raghavendra: ಮಂತ್ರಾಲಯ ರಾಯರ ವರ್ಧಂತಿ ಮಹೋತ್ಸವ ಸಂಭ್ರಮ ಮನೆ ಮಾಡಿತ್ತು ‌ . ಗುರು ರಾಘವೇಂದ್ರರರ ವರ್ಧಂತಿ ಮಹೋತ್ಸವದ ಹಿನ್ನಲೆಯಲ್ಲಿ ಸಾವಿರಾರು ಭಕ್ತರು ಮಂತ್ರಾಲಯಕ್ಕೆ ಹರಿದುಬಂದ ಹಿನ್ನೆಲೆ ಶ್ರೀ ಮಠ ತುಂಬೇಲ್ಲ ಭಕ್ತಸಾಗರ. 

Written by - Yashaswini V | Last Updated : Mar 6, 2025, 03:47 PM IST
  • ಶ್ರೀಮಠದಲ್ಲಿ ರಾಘವೇಂದ್ರ ಸ್ವಾಮಿಗಳ ಮೂಲ ಬೃದಾಂವನಕ್ಕೆ ವಿಶೇಷ ಪೂಜೆ, ಪಂಚಾಮೃತಾಭಿಷೇಕ ಮಾಡಲಾಯಿತು.

    ವರ್ಧಂತೋತ್ಸವ(ಹುಟ್ಟುಹಬ್ಬ) ಮಠದ ಪೀಠಾಧಿಪತಿ ಬೃಂದಾವನಕ್ಕೆ ಅಭಿಷೇಕ ನಂತರ ವಿವಿಧ ಹೂ ಗಳಿಂದ ಅಲಂಕಾರ ಮಾಡಿದ್ದರು.
  • ಮಠದ ಪ್ರಾಂಗಣದಲ್ಲಿ ಸ್ವರ್ಣ ರಥೋತ್ಸವ ನೆರವೇರಿಸಿದರು.
ಶ್ರೀ ಗುರು ರಾಘವೇಂದ್ರರರ ವರ್ಧಂತಿ ಮಹೋತ್ಸವ

Rayara Vardanti Utsava: ಕಲಿಯುಗದ ಕಾಮಧೇನು ಶ್ರೀ ರಾಘವೇಂದ್ರ ಸ್ವಾಮೀಜಿಗಳು ನೆಲೆಸಿರುವ ‌ಪುಣ್ಯ ಭೂಮಿ ಮಂತ್ರಾಲಯದಲ್ಲಿ ‌ಸಡಗರ ಸಂಭ್ರಮದಿಂದ ರಾಯರ 430 ನೇ ವರ್ಧಂತಿ ಮಹೋತ್ಸವ ಸಂಭ್ರಮ ಸಡಗರದಿಂದ ಜರುಗಿದೆ. 

Add Zee News as a Preferred Source

ಬೆಳಗ್ಗೆಯಿಂದಲೇ ‌ಶ್ರೀಮಠದಲ್ಲಿ  ರಾಘವೇಂದ್ರ ಸ್ವಾಮಿಗಳ ಮೂಲ ಬೃದಾಂವನಕ್ಕೆ ವಿಶೇಷ ಪೂಜೆ, ಪಂಚಾಮೃತಾಭಿಷೇಕ ಮಾಡಲಾಯಿತು. ವರ್ಧಂತೋತ್ಸವ(ಹುಟ್ಟುಹಬ್ಬ)  ಮಠದ ಪೀಠಾಧಿಪತಿ ಬೃಂದಾವನಕ್ಕೆ ಅಭಿಷೇಕ ನಂತರ ವಿವಿಧ ಹೂ ಗಳಿಂದ ಅಲಂಕಾರ ಮಾಡಿದ್ದರು. ಮಠದ ಪ್ರಾಂಗಣದಲ್ಲಿ ಸ್ವರ್ಣ ರಥೋತ್ಸವ ನೆರವೇರಿಸಿದರು. ಶ್ರೀ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು, ಸ್ತೋತ್ರ ಪಠಣಗಳನ್ನು ಮಾಡುವ ಮೂಲಕ ಭಕ್ತರಿಗೆ ಆಶಿರ್ವದಿಸಿದರು.

ರಾಯರು ಸಂಗೀತ ಪ್ರಿಯರಾಗಿದ್ರು.. ರಾಯರ ವರ್ಧಂತಿ ಮಹೋತ್ಸವ ಪ್ರಯುಕ್ತ ‌ಪ್ರತಿ ವರ್ಷದಂತೆ ಈ ವರ್ಷವೂ ಸಹ ಚೆನ್ನೈ ಮೂಲದ ವಿವಿಧ ತಂಡಗಳ ಮೂಲಕ ನಾದಾಹಾರ ಕಾರ್ಯಕ್ರಮ ‌ನಡೆಸಲಾಯಿತು.. ರಾಯರ ಸನ್ನಿಧಿಯಲ್ಲಿ ಕಳೆದ ಸುಮಾರು ವರ್ಷಗಳಿಂದ ಸಂಗೀತ ಸೇವೆ ಮಾಡಲು ನಮಗೆ ಅವಕಾಶ ಸಿಕ್ಕಿದೆ ಅಂತ ಸಂಗೀತಗಾರರು ಸಂತಸಪಟ್ಟರು. 

150ಕ್ಕೂ ಹೆಚ್ಚು ಜನರು ಏಕಕಾಲಕ್ಕೆ ರಾಯರಿಗೆ ಹಾಡಿ ನಾದಹಾರ ಸಲ್ಲಿಸಿ ಹಳೆ ಸಂಪ್ರದಾಯಕ್ಕೆ ಹೊಸ ಮೆರುಗು ನೀಡಿದರು. ಶ್ರೀ ಮಠದಲ್ಲಿ  ನಡೆದ ವಾದ್ಯ-ಮೇಳಗಳ ಮಾಧುರ್ಯಕ್ಕೆ ಭಕ್ತರ ದಂಡು ತಲೆದೂಗಿ ರಾಯರ ಜಪ ಮಾಡಿದರು. ಆರು ದಿನಗಳಿಂದ ನಡೆಯುತ್ತಿರೊ ಗುರು ವೈಭವೋತ್ಸವ ಸಂಭ್ರಮದಲ್ಲಿ ‌ನಾಡಿನ ನಾನಾ ಕಡೆಗಳಿಂದ ಆಗಮಿಸಿ ರಾಯರ ಕೃಪೆಗೆ ಪಾತ್ರರಾದರು. ಕೊನೆಗೆ ರಾಮದೇವರ ಪೂಜೆ, ರಾಯರ ಮೂಲಬೃಂದಾವನಕ್ಕೆ ವಿವಿಧ ವಸ್ತುಗಳು, ಭಕ್ಷಗಳನ್ನ ಅರ್ಪಿಸುವ ಮೂಲಕ ಶ್ರೀಗಳು ವಿಶೇಷ ಪೂಜೆ ಕೈಂಕರ್ಯಗಳನ್ನ ನೆರವೇರಿಸಿದರು. ಈ ವೇಳೆ ಭಕ್ತರು ರಥೋತ್ಸವದಲ್ಲಿ ಭಾಗವಹಿಸಿ ರಾಯರ ದರ್ಶನ ಪಡೆದರು. 

ಒಟ್ಟಿನಲ್ಲಿ ಭಕ್ತರ ಪಾಲಿನ ಕಾಮಧೇನು ರಾಘವೇಂದ್ರ ಸ್ವಾಮಿಗಳ ಮಠದಲ್ಲಿ 6 ದಿನಗಳಿಂದ ನಡೆದ ಗುರು ವೈಭವೋತ್ಸವ, ರಾಯರ ಪಟ್ಟಾಭಿಷೇಕ ಹಾಗೂ ವರ್ಧಂತಿ‌ ಮಹೋತ್ಸವಕ್ಕೆ ಇಂದು ತೆರೆ ಬಿದ್ದಿದೆ. ಸಹಸ್ರಾರು ಭಕ್ತರು ಪ್ರತಿವರ್ಷದಂತೆ ಈ ವರ್ಷವೂ ರಾಯರ ಉತ್ಸವದಲ್ಲಿ ಭಾಗಿಯಾಗಿ ಪುನೀತರಾಗಿದ್ದಂತು ಸುಳ್ಳಳ್ಳ ..

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

About the Author

Yashaswini V

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ...Read More

Trending News