ಸೂರ್ಯನ ರಾಶಿ ಪರಿವರ್ತನೆ: ನಾಳೆಯಿಂದ ಈ ರಾಶಿಯವರ ಅದೃಷ್ಟವೇ ಬದಲಾಗಲಿದೆ

Sun Transit: ನವಗ್ರಹಗಳಲ್ಲಿ ಸೂರ್ಯನನ್ನು ಗ್ರಹಗಳ ರಾಜ ಎಂದು ಪರಿಗಣಿಸಲಾಗಿದೆ. ಸೂರ್ಯನು ನಾಳೆ ಅಂದರೆ ಸೆಪ್ಟೆಂಬರ್ 17 ರಂದು ತನ್ನ ರಾಶಿಯನ್ನು ಬದಲಾಯಿಸುವ ಮೂಲಕ ಕನ್ಯಾರಾಶಿಗೆ ಪ್ರವೇಶಿಸುತ್ತಾನೆ. ಸೂರ್ಯನ ಈ ರಾಶಿ ಬದಲಾವಣೆಯಿಂದಾಗಿ, ಕೆಲವು ರಾಶಿಯವರ ಅದೃಷ್ಟದ ಬಾಗಿಲು ತೆರೆಯಲಿದೆ ಎಂದು ಹೇಳಲಾಗುತ್ತಿದೆ. ಸೂರ್ಯನ ರಾಶಿ ಸಂಚಾರವು ಯಾವ ರಾಶಿಯವರಿಗೆ ಶುಭ ಫಲಗಳನ್ನು ತರಲಿದೆ ತಿಳಿಯೋಣ...

Written by - Yashaswini V | Last Updated : Sep 16, 2022, 08:28 AM IST
  • ಸೂರ್ಯನ ಸಂಚಾರದಿಂದ ಪ್ರಮುಖವಾಗಿ ನಾಲ್ಕು ರಾಶಿಯವರ ಜೀವನದಲ್ಲಿ ಮಹತ್ವದ ಬದಲಾವಣೆ
  • ಸೂರ್ಯನಂತೆ ಹೊಳೆಯಲಿದೆ ಅವರ ಜೀವನ
  • ಆ ಅದೃಷ್ಟದ ರಾಶಿಗಳು ಯಾವುವು ತಿಳಿಯಿರಿ.
ಸೂರ್ಯನ ರಾಶಿ ಪರಿವರ್ತನೆ: ನಾಳೆಯಿಂದ ಈ ರಾಶಿಯವರ ಅದೃಷ್ಟವೇ ಬದಲಾಗಲಿದೆ  title=
Surya Gochar

ಸೂರ್ಯ ರಾಶಿ ಪರಿವರ್ತನೆ ಪರಿಣಾಮ: ಜ್ಯೋತಿಷ್ಯ ಶಾಸ್ತ್ರದಲ್ಲಿ ಗ್ರಹಗಳ ರಾಜ ಸೂರ್ಯನಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತದೆ. ಇತರ ಗ್ರಹಗಳಂತೆ ಸೂರ್ಯನ ಸಂಚಾರವೂ ಸಹ ದ್ವಾದಶ ರಾಶಿಗಳ ಮೇಲೆ ನೇರ ಪರಿಣಾಮವನ್ನು ಉಂಟು ಮಾಡುತ್ತದೆ. ನಾಳೆ ಅಂದರೆ ಸೆಪ್ಟೆಂಬರ್ 17 ರಂದು ಸೂರ್ಯನು ಕನ್ಯಾರಾಶಿಗೆ ಪ್ರವೇಶಿಸಲಿದ್ದಾನೆ. ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಕನ್ಯಾ ರಾಶಿಗೆ ಸೂರ್ಯನ ಪ್ರವೇಶದಿಂದಾಗಿ ಕೆಲವು ರಾಶಿಯವರ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ ಎಂದು ಹೇಳಲಾಗುತ್ತಿದೆ. ಆ ಅದೃಷ್ಟದ ರಾಶಿಗಳು ಯಾವುವು ತಿಳಿಯಿರಿ..

ಸೂರ್ಯನ ಸಂಚಾರದಿಂದ ಪ್ರಮುಖವಾಗಿ ನಾಲ್ಕು ರಾಶಿಯವರ ಜೀವನದಲ್ಲಿ ಮಹತ್ವದ ಬದಲಾವಣೆಗಳು ಸಂಭವಿಸಲಿದೆ. ಅವರ ಜೀವನವು ಸೂರ್ಯನಂತೆ ಹೊಳೆಯಲಿದೆ ಎಂದು ಹೇಳಲಾಗುತ್ತಿದೆ. 
ಮೇಷ ರಾಶಿ: 
ಕನ್ಯಾರಾಶಿಯಲ್ಲಿ ಗ್ರಹಗಳ ರಾಜ ಸೂರ್ಯನ ಪ್ರವೇಶದಿಂದ ಮೇಷ ರಾಶಿಯ ಜನರು ಲಾಭ ಪಡೆಯಲಿದ್ದಾರೆ. ಮೇಷ ರಾಶಿಯ ಜನರು ಉದ್ಯೋಗ ಮತ್ತು ವ್ಯವಹಾರದಲ್ಲಿ ಯಶಸ್ಸನ್ನು ಪಡೆಯಬಹುದು. ಇದೇ ವೇಳೆ ಹಲವು ದಿನಗಳಿಂದ ಸ್ಥಗಿತಗೊಂಡಿದ್ದ ಕಾಮಗಾರಿಯೂ ಪೂರ್ಣಗೊಳ್ಳಲಿದೆ. ಇದರೊಂದಿಗೆ ಕಚೇರಿಯಲ್ಲಿ ಗೌರವ ಹೆಚ್ಚುತ್ತದೆ. ಕೌಟುಂಬಿಕ ಸಮಸ್ಯೆಗಳೂ ಬಗೆಹರಿಯಲಿವೆ. ಆರ್ಥಿಕ ಪ್ರಗತಿ ಇರುತ್ತದೆ ಮತ್ತು ಕೆಲವು ಒಳ್ಳೆಯ ಸುದ್ದಿಗಳನ್ನು ಪಡೆಯಬಹುದು.

ಇದನ್ನೂ ಓದಿ- Shukra Asta Effects: ಈ ಜನರ ಅದೃಷ್ಟವನ್ನು ಬೆಳಗಿಸಲಿದ್ದಾನೆ ಅಸ್ತ ಶುಕ್ರ

ಸಿಂಹ ರಾಶಿ:
ಸಿಂಹ ಸೂರ್ಯನ ಚಿಹ್ನೆ. ಕನ್ಯಾ ರಾಶಿಯಲ್ಲಿ ಸೂರ್ಯನ ಸಂಚಾರವು ಸಿಂಹ ರಾಶಿಯವರಿಗೆ ತುಂಬಾ ಶುಭಕರವಾಗಿರುತ್ತದೆ. ಈ ಸಮಯದಲ್ಲಿ, ಈ ರಾಶಿಚಕ್ರದ ಜನರು ವೃತ್ತಿ ಮತ್ತು ವ್ಯವಹಾರದಲ್ಲಿ ಹೊಸ ಯಶಸ್ಸನ್ನು ಪಡೆಯುತ್ತಾರೆ. ಹೊಸ ಉದ್ಯಮ ಆರಂಭಿಸುವ ಸಾಧ್ಯತೆಯೂ ಇದೆ. ಬೇರೆಡೆ ಸಿಲುಕಿರುವ ನಿಮ್ಮ ಹಣವು ಈಗ ನಿಮ್ಮ ಕೈಸೇರಲಿದೆ.

ವೃಶ್ಚಿಕ ರಾಶಿ:
ಸೂರ್ಯನ ಸಂಚಾರದಿಂದ ವೃಶ್ಚಿಕ ರಾಶಿಯ ಜನರ ಭವಿಷ್ಯ ಬದಲಾಗಲಿದೆ. ಈ ಸಮಯದಲ್ಲಿ, ವೃಶ್ಚಿಕ ರಾಶಿಯ ಜನರು ಆರ್ಥಿಕ ಲಾಭವನ್ನು ಪಡೆಯುತ್ತಾರೆ. ವ್ಯಾಪಾರ ಮತ್ತು ಉದ್ಯೋಗದಲ್ಲಿ ಪ್ರಗತಿ ಇರುತ್ತದೆ. ಇದರೊಂದಿಗೆ, ಹೊಸ ಆದಾಯದ ಹೊಸ ಮೂಲಗಳು ಸೃಷ್ಟಿಯಾಗುತ್ತವೆ. ಈ ಅವಧಿಯಲ್ಲಿ ನೀವು ಯಾವುದೇ ಆಸ್ತಿಯಲ್ಲಿ ಹೂಡಿಕೆ ಮಾಡಿದರೆ, ಅದು ತುಂಬಾ ಲಾಭದಾಯಕವಾಗಿರುತ್ತದೆ.

ಇದನ್ನೂ ಓದಿ- Chanakya Niti: ಪ್ರತಿನಿತ್ಯ ಈ 3 ಕೆಲಸ ಮಾಡುವ ಮನೆಯಲ್ಲಿ ಸದಾ ನೆಲೆಸುತ್ತಾಳೆ ತಾಯಿ ಲಕ್ಷ್ಮಿ

ಧನು ರಾಶಿ:
ಈ ಸೂರ್ಯ ಸಂಚಾರವನ್ನು ಧನು ರಾಶಿಯವರಿಗೆ ತುಂಬಾ ಮಂಗಳಕರವೆಂದು ಪರಿಗಣಿಸಲಾಗಿದೆ. ಈ ಸಮಯದಲ್ಲಿ, ಧನು ರಾಶಿಯ ಜನರ ಅದೃಷ್ಟದ ಬಾಗಿಲು ತೆರೆಯಲಿದೆ. ಉದ್ಯೋಗ ಮತ್ತು ವ್ಯವಹಾರದಲ್ಲಿ ಯಶಸ್ಸು ಸಿಗಲಿದೆ. ಹಳೆಯ ನ್ಯಾಯಾಲಯದ ಪ್ರಕರಣಗಳಲ್ಲಿ ಪರಿಹಾರ ದೊರೆಯಲಿದೆ. ಸ್ಥಳ ಬದಲಾವಣೆಗೆ ಅವಕಾಶವಿರುತ್ತದೆ. ಈ ಸಮಯದಲ್ಲಿ ಹೊಸ ಉದ್ಯೋಗ ಪಡೆಯುವ ಅವಕಾಶವೂ ಇದೆ. 

ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ZEE ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News