ದಿನಭವಿಷ್ಯ 10-10-2025: ಶುಕ್ರವಾರ ಕೃತ್ತಿಕಾ ನಕ್ಷತ್ರದಲ್ಲಿ ಸಿದ್ಧಿಯೋಗ, ಈ ರಾಶಿಯವರಿಗೆ ಇಷ್ಟಾರ್ಥ ಸಿದ್ಧಿ, ಲಕ್ಷ್ಮಿ ಕೃಪೆ

Today Horoscope 10th October 2025: ಅಕ್ಟೋಬರ್ 10, 2025ರ ಈ ದಿನ ಶುಕ್ರವಾರ ಚತುರ್ಥಿ ತಿಥಿ, ಕೃತ್ತಿಕಾ ನಕ್ಷತ್ರದಲ್ಲಿ ಸಿದ್ಧಿ ಯೋಗ ಇರಲಿದೆ. ಇಂದು ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿಯವರ ರಾಶಿಫಲ ಹೇಗಿದೆ ತಿಳಿಯೋಣ..

Written by - Yashaswini V | Last Updated : Oct 10, 2025, 07:49 AM IST
  • ಕೃಷ್ಣ ಪಕ್ಷದ ಶುಕ್ರವಾರ ಚತುರ್ಥಿ ತಿಥಿ
  • ಇಂದು ಕೃತ್ತಿಕಾ ನಕ್ಷತ್ರದಲ್ಲಿ ಶುಭ ಸಿದ್ಧಿ ಯೋಗ ರಚನೆ
  • ಇಂದು ಕೆಲವು ರಾಶಿಯವರಿಗೆ ಸಾಕ್ಷಾತ್ ಲಕ್ಷ್ಮಿ ದಯೆ
ದಿನಭವಿಷ್ಯ 10-10-2025: ಶುಕ್ರವಾರ ಕೃತ್ತಿಕಾ ನಕ್ಷತ್ರದಲ್ಲಿ ಸಿದ್ಧಿಯೋಗ, ಈ ರಾಶಿಯವರಿಗೆ ಇಷ್ಟಾರ್ಥ ಸಿದ್ಧಿ, ಲಕ್ಷ್ಮಿ ಕೃಪೆ

Shukravara Dina Bhavishya In Kannada: ಶ್ರೀ ಶಾಲಿವಾಹನ ಶಕೆ 1947, ವಿಶ್ವಾವಸು ನಾಮ ಸಂವತ್ಸರ, ದಕ್ಷಿಣಾಯನ, ಸೌರ ಶರದ ಋತು, ಆಶ್ವಯುಜ ಮಾಸ, ಕೃಷ್ಣ ಪಕ್ಷ, ಚತುರ್ಥಿ ತಿಥಿ, ಶುಕ್ರವಾರದ ಈ ದಿನ ಕೃತ್ತಿಕಾ ನಕ್ಷತ್ರ, ಸಿದ್ಧಿ ಯೋಗ, ಬವ ಕರಣ ಇರಲಿದೆ. ಇಂದು ಯಾವ ರಾಶಿಯವರಿಗೆ ಲಕ್ಷ್ಮಿ ಕೃಪೆ ಇರಲಿದೆ. ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ. 

Add Zee News as a Preferred Source

ಮೇಷ ರಾಶಿಯವರ ಭವಿಷ್ಯ (Aries Horoscope):  
ಉದ್ಯೋಗ ರಂಗದಲ್ಲಿ ನಿಮ್ಮ ಕಾರ್ಯವೈಖರಿ ಇಂದು ಅಧಿಕಾರಿಗಳ ಮೆಚ್ಚುಗೆ ಗಳಿಸಲಿದೆ. ವೃತ್ತಿಯಲ್ಲಿ ಉತ್ತಮ ಅವಕಾಶಗಳನ್ನು ನೀಡುತ್ತದೆ. ಆರೋಗ್ಯ ಸಮಸ್ಯೆಗಳಿಂದ ಪರಿಹಾರ ಪಡೆಯುವ ಸುದಿನ. ಆಸ್ತಿ ವ್ಯವಹಾರಗಳಲ್ಲಿ ಕೈ ಹಾಕುವ ಮೊದಲು ಸಂಗಾತಿಯೊಂದಿಗೆ ಕುಳಿತು ಚರ್ಚಿಸಿ. 

ವೃಷಭ ರಾಶಿಯವರ ಭವಿಷ್ಯ (Taurus Horoscope):  
ಇಂದು ನಿಮ್ಮ ಕೆಲಸಕ್ಕೆ ಅಗತ್ಯ ಬೆಂಬಲ ಸಹಕಾರವನ್ನು ಪಡೆಯುವಿರಿ. ವೃತ್ತಿ ಬದುಕಿನ ಒತ್ತಡದ ನಡುವೆ ವೈಯಕ್ತಿಕ ಬದುಕಿಗಾಗಿ ಸಮಯ ಮೀಸಲಿಡಿ. ನಿರುದ್ಯೋಗಿಗಳಿಗೆ ಹೊಸ ಕೆಲಸ ಸಿಗಬಹುದು. ಪ್ರೇಮ ಸಂಬಂಧದಲ್ಲಿರುವವರಿಗೆ ಮದುವೆಗಾಗಿ ಮನೆಯವರ ಒಪ್ಪಿಗೆ ದೊರೆಯಲಿದೆ. 

ಮಿಥುನ ರಾಶಿಯವರ ಭವಿಷ್ಯ (Gemini Horoscope):   
ಇಂದು ಸಾಕ್ಷಾತ್ ಲಕ್ಷ್ಮಿ ದಯೆಯಿಂದ ನಿಮ್ಮ ಕನಸು ನನಸಾಗುವ ಸಮಯ. ಯೋಜಿತ ಕೆಲಸಗಳು ಸಮಯಕ್ಕೂ ಮುಂಚಿತವಾಗಿ ಮುಗಿಯುವುದರಿಂದ ಭಾರೀ ಲಾಭವನ್ನು ಕಾಣಬಹುದು. ವೇತನ, ಭತ್ಯೆ ಹೆಚ್ಚಳ ಸಾಧ್ಯತೆಯೂ ಇದೆ. ಕುಟುಂಬದಲ್ಲಿ ನಿಮ್ಮ ಜವಾಬ್ದಾರಿಗಳು ಹೆಚ್ಚಾಗಬಹುದು. 

ಕರ್ಕಾಟಕ ರಾಶಿಯವರ ಭವಿಷ್ಯ (Cancer Horoscope): 
ಇಂದು ಹಿರಿಯರೊಂದಿಗೆ ಕುಳಿತು ಮಾತನಾಡುವುದರಿಂದ ಹಲವು ಕೌಟುಂಬಿಕ ಸಮಸ್ಯೆಗಳಿಂದ ಹೊರಬರಲು ಸಾಧ್ಯವಾಗಲಿದೆ. ಉದ್ಯೋಗದಲ್ಲಿ ಮೇಲಾಧಿಕಾರಿಗಳ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುವುದನ್ನು ಖಚಿತಪಡಿಸಿಕೊಳ್ಳಿ. ಆರೋಗ್ಯದ ವಿಷಯದಲ್ಲಿ ಎಚ್ಚರ. 

ಇದನ್ನೂ ಓದಿ- ಪ್ರಬಲ ಗ್ರಹಗಳ ವಿಶೇಷ ಸಂಯೋಗ: ಶುಕ್ರಾದಿತ್ಯ ರಾಜಯೋಗದಿಂದ ಈ ರಾಶಿಯವರ ಲಕ್ ಚೇಂಜ್, ರಾಜವೈಭೋಗದ ಜೀವನ

ಸಿಂಹ ರಾಶಿಯವರ ಭವಿಷ್ಯ (Leo Horoscope):  
ವೃತ್ತಿ-ವ್ಯವಹಾರದಲ್ಲಿ ಗಮನಾರ್ಹವಾಗಿ ನಿಮ್ಮ ಜವಾಬ್ದಾರಿಗಳು ಹೆಚ್ಚಾಗಬಹುದು. ಪ್ರಮೋಷನ್ ನಿರೀಕ್ಷೆಯಲ್ಲಿದ್ದವರಿಗೆ ಶುಭ ಸುದ್ದಿ. ವ್ಯವಹಾರದಲ್ಲಿ ದೊಡ್ಡ ಆರ್ಡರ್ ಸಿಗಬಹುದು. ವೈಯಕ್ತಿಕ ಬದುಕಿನಲ್ಲೂ ಲಕ್ಷ್ಮಿ ಕೃಪಾಕಟಾಕ್ಷ ಇರಲಿದ್ದು ಮನೆಯಲ್ಲಿ ಸಂತೋಷದ ವಾತಾವರಣ ಇರಲಿದೆ. 

ಕನ್ಯಾ ರಾಶಿಯವರ ಭವಿಷ್ಯ (Virgo Horoscope): 
ಈ ದಿನ ನೀವು ಬೇಡವೆಂದರೂ ಉದ್ಯೋಗ ರಂಗದಲ್ಲಿ ಹೆಚ್ಚಿನ ಜವಾಬ್ದಾರಿಗಳನ್ನು ನಿರ್ವಹಿಸಲೇಬೇಕಾಗುತ್ತದೆ. ಪ್ರತಿಭಾನ್ವಿತ ಜನರಿಗೆ ಉತ್ತಮ ಗೌರವ, ಮನ್ನಣೆ ದೊರೆಯಲಿದೆ. ಆದಾಯದಲ್ಲಿ ಏರಿಕೆಯು ನಿಮ್ಮ ದಿನವನ್ನು ಬೆಳಗಲಿದೆ. 

ತುಲಾ ರಾಶಿಯವರ ಭವಿಷ್ಯ (Libra Horoscope): 
ಉದ್ಯೋಗ ಕ್ಷೇತ್ರದಲ್ಲಿ ಇಂದು ನಿರೀಕ್ಷಿತ ಬದಲಾವಣೆಗಳು ನಿಮ್ಮ ಉತ್ಸಾಹವನ್ನು ಇಮ್ಮಡಿಗೊಳಿಸಲಿದೆ. ಇಂದು ನಿಮ್ಮ ವೈಯಕ್ತಿಕ ಬದುಕಿಗೆ ಸಂಬಂಧಿಸಿದಂತೆ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಬೇಕಾಗಬಹುದು. ಈ ಸಂದರ್ಭದಲ್ಲಿ ಮನಸ್ಸಿನ ಮಾತಿಗಿಂತ ತಾರ್ಕಿಕವಾಗಿ ಯೋಚಿಸಿ ನಿರ್ಧರಿಸುವುದು ಸೂಕ್ತ. 

ವೃಶ್ಚಿಕ ರಾಶಿಯವರ ಭವಿಷ್ಯ (Scorpio Horoscope):  
ಕೆಲಸದಲ್ಲಿ ನಿಮ್ಮ ಸಾಮರ್ಥ್ಯವನ್ನು ಸಾಬೀತುಪದಿಸುವಿರಿ. ಮೇಲಾಧಿಕಾರಿಗಳು ನಿಮ್ಮ ಕಾರ್ಯಕ್ಷಮತೆಯನ್ನು ಮೆಚ್ಚಲಿದ್ದಾರೆ. ವ್ಯವಹಾರಗಳು ಸುಗಮವಾಗಿ ನಡೆಯಲಿದ್ದು ಆದಾಯ ಹೆಚ್ಚಾಗಲಿದೆ. ಆರೋಗ್ಯ ಸಮಸ್ಯೆಗಳಿಂದ ಮುಕ್ತಿ ಹೊಂದುವಿರಿ. 

ಇದನ್ನೂ ಓದಿ- ದೀಪಾವಳಿ ಬೆನ್ನಲ್ಲೇ ಈ ರಾಶಿಯವರಿಗೆ ಬುಧ ಭುಕ್ತಿ: ಹೊಳೆಯಲಿದೆ 4 ರಾಶಿಯವರ ಅದೃಷ್ಟ, ವೃತ್ತಿ-ವ್ಯವಹಾರದಲ್ಲಿ ಸಂಪತ್ತಿನ ಸುಯೋಗ 

ಧನು ರಾಶಿಯವರ ಭವಿಷ್ಯ (Sagittarius Horoscope):  
ವೃತ್ತಯಲ್ಲಿ ಸ್ಥಿರತೆ ಮುಂದುವರೆಯಲಿದೆ. ಸರ್ಕಾರಿ ನೌಕರಿಯಲ್ಲಿರುವವರಿಗೆ ಭತ್ಯೆ ಕೈ ಸೇರಲಿದೆ. ವ್ಯವಹಾರದಲ್ಲಿ ಹಣಕಾಸಿನ ಸ್ಥಿತಿ ಉತ್ತಮಗೊಳ್ಳಲಿದೆ. ಸಂಜೆ ವೇಳೆಗೆ ಮನೆಗೆ ಅತಿಥಿಗಳ ಆಗಮನವು ನಿಮ್ಮ ಉತ್ಸಾಹವನ್ನು ಹೆಚ್ಚಿಸಲಿದೆ. ಹಠಾತ್ ಧನ ಲಾಭ ಸಾಧ್ಯತೆಯೂ ಇದೆ. 

ಮಕರ ರಾಶಿಯವರ ಭವಿಷ್ಯ (Capricorn Horoscope):  
ಇಂದು ವ್ಯವಹಾರದಲ್ಲಿ ನಿರೀಕ್ಷಿತ ಲಾಭ ಗಳಿಸುವಿರಿ. ವೈಯಕ್ತಿಕ ಸಮಸ್ಯೆಗಳಿಂದ ಪರಿಹಾರ ಪಡೆಯಲು ಹಿರಿಯರ ಮಾರ್ಗದರ್ಶನವನ್ನು ಅನುಸರಿಸಿ. ನಿಮ್ಮ ಆರ್ಥಿಕ ಪರಿಸ್ಥಿತಿ ಹದಗೆಡುವುದನ್ನು ತಪ್ಪಿಸಲು ಖರ್ಚುಗಳನ್ನು ನಿಯಂತ್ರಿಸಿ. 

ಕುಂಭ ರಾಶಿಯವರ ಭವಿಷ್ಯ (Aquarius Horoscope):  
ಉದ್ಯೋಗದಲ್ಲಿ ಆಶಾದಾಯಕವಾಗಿ ಮುಂದುವರೆಯುವುದರಿಂದ ನಿಮ್ಮ ಯಶಸ್ಸನ್ನು ತಡೆಯಲು ಯಾರಿಗೂ ಸಾಧ್ಯವಾಗುವುದಿಲ್ಲ. ಅನಿರೀಕ್ಷಿತ ಲಾಭಗಳೊಂದಿಗೆ ಶುಭ ಸುದ್ದಿಯೊಂದು ನಿಮ್ಮ ದಿನವನ್ನು ಉತ್ಸಾಹಭರಿತವಾಗಿಸಲಿದೆ. ಆರೋಗ್ಯ ಉತ್ತಮವಾಗಿರುತ್ತದೆ. 

ಮೀನ ರಾಶಿಯವರ ಭವಿಷ್ಯ (Pisces Horoscope): 
ಉದ್ಯೋಗ ಕ್ಷೇತ್ರದಲ್ಲಿ ಇಂದು ನಿಮ್ಮ ಪ್ರಭಾವ ಹೆಚ್ಚಾಗಲಿದೆ. ಸುತ್ತಮುತ್ತಲಿನವರು ನಿಮ್ಮ ಮಾತಿನಿಂದ ಆಕರ್ಷಿತರಾಗುತ್ತಾರೆ. ಹೆಚ್ಚುವರಿ ಆದಾಯ ಗಳಿಸುವ ನಿಮ್ಮ ಪ್ರಯತ್ನಕ್ಕೆ ಉತ್ತಮ ಫಲ ದೊರೆಯಲಿದೆ. ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ ಸಿಗಬಹುದು. 

ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.

About the Author

Yashaswini V

Yashaswini V

ಯಶಸ್ವಿನಿ ವಿ. Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017ರಿಂದ Zee ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ರಾಜಕೀಯ, ಎಂಟರ್ಟೈನ್ಮೆಂಟ್, ಬ್ಯುಸಿನೆಸ್, ಲೈಫ್ ಸ್ಟೈಲ್, ವರ್ಲ್ಡ್, ಸೈನ್ಸ್ ಅಂಡ್ ಟೆಕ್ನಾಲಜಿ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಅನುಭವ ಹೊಂದಿದ್ದಾರೆ. ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿರುವ ಇವರು ಸದ್ಯ ಅಸಿಸ್ಟೆಂಟ್ ನ್ಯೂಸ್ ಎಡಿಟರ್ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದಾರೆ.

...Read More

Trending News