ದಿನಭವಿಷ್ಯ 28-07-2025: ಶ್ರಾವಣ ಸೋಮವಾರದಂದು ಪರಿಘ ಯೋಗ, ಈ ರಾಶಿಯವರು ಮುಟ್ಟಿದ್ದೆಲ್ಲಾ ಚಿನ್ನ

Today Horoscope 28th July 2025: ಮೊದಲ ಶ್ರಾವಣ ಸೋಮವಾರದ ಈ ದಿನ ಪೂರ್ವಾ ನಕ್ಷತ್ರದಲ್ಲಿ ಪರಿಘ ಯೋಗ ಇರಲಿದೆ. ಇಂದು ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿಯವರ ರಾಶಿಫಲ ಹೇಗಿದೆ ತಿಳಿಯಿರಿ. 

Written by - Yashaswini V | Last Updated : Jul 28, 2025, 07:57 AM IST
  • ಶ್ರಾವಣ ಮಾಸದ ಪ್ರಥಮ ಸೋಮವಾರದಂದು ಚತುರ್ಥಿ ತಿಥಿ
  • ಇಂದು ಪೂರ್ವಾ ನಕ್ಷತ್ರದಲ್ಲಿ ಶುಭಕರ ಪರಿಘ ಯೋಗ
  • ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ.
ದಿನಭವಿಷ್ಯ 28-07-2025: ಶ್ರಾವಣ ಸೋಮವಾರದಂದು ಪರಿಘ ಯೋಗ, ಈ ರಾಶಿಯವರು ಮುಟ್ಟಿದ್ದೆಲ್ಲಾ ಚಿನ್ನ

Somavara Dina Bhavishya In Kannada: ಶ್ರೀ ಶಾಲಿವಾಹನ ಶಕೆ 1947, ವಿಶ್ವಾವಸು ನಾಮ ಸಂವತ್ಸರ, ದಕ್ಷಿಣಾಯನ, ಸೌರ ವರ್ಷಾ ಋತು, ಶ್ರಾವಣ ಶುಕ್ಲ ಪಕ್ಷ ಚತುರ್ಥಿ ತಿಥಿಯ ಈ ದಿನ ಸೋಮವಾರ, ಪೂರ್ವಾ ನಕ್ಷತ್ರ ಪರಿಘ ಯೋಗ, ವಣಿಜ ಕರಣ ಇರಲಿದೆ. ಇಂದು ಯಾವ ರಾಶಿಯವರ ಭವಿಷ್ಯ ಹೇಗಿದೆ ತಿಳಿಯಿರಿ. 

Add Zee News as a Preferred Source

ಮೇಷ ರಾಶಿಯವರ ಭವಿಷ್ಯ (Aries Horoscope):  
ಇಂದು ವೃತ್ತಿ ಸಂಬಂಧಿತ ವ್ಯವಹಾರಗಳಲ್ಲಿ ಆಪ್ತ ಸ್ನೇಹಿತರ ಬೆಂಬಲ ದೊರೆಯಲಿದೆ. ಪ್ರವಾಸ ಮತ್ತು ಮನರಂಜನಾ ಚಟುವಟಿಕೆಗಳಲ್ಲಿ ತೊಡಗುವುದರಿಂದ ಆಹ್ಲಾದಕರ ಅನುಭವವಾಗುತ್ತದೆ. ವ್ಯಾಪಾರ ಜೀವನದಲ್ಲಿ ಲಾಭದ ಅವಕಾಶಗಳು ಹೆಚ್ಚಾಗಲಿವೆ. 

ವೃಷಭ ರಾಶಿಯವರ ಭವಿಷ್ಯ (Taurus Horoscope):  
ನಿರ್ವಹಣೆಗೆ ಸಂಬಂಧಿಸಿದ ಅಗತ್ಯ ಕೆಲಸಗಳನ್ನು ಚುರುಕುಗೊಳಿಸುವರಿಂದ ಬಂಪರ್ ಆದಾಯವನ್ನು ಕಾಣುವಿರಿ. ಮನೆಯಲ್ಲಿ ಪ್ರೀತಿಪಾತ್ರರ ಜೊತೆ ಗುಣಮಟ್ಟದ ಸಮಯವನ್ನು ಕಳೆಯುವ ಅವಕಾಶವನ್ನು ಪಡೆಯುವಿರಿ. ಇದರಿಂದ ನಿಕಟ ಸಂಬಂಧಗಳಲ್ಲಿ ಸಕಾರಾತ್ಮಕತೆ ಹೆಚ್ಚಾಗುತ್ತದೆ. 

ಮಿಥುನ ರಾಶಿಯವರ ಭವಿಷ್ಯ (Gemini Horoscope):   
ಇಂದು ಬೇರೆಯವರೊಂದಿಗೆ ಅಹಂಕಾರದಿಂದ ಮಾತನಾಡುವುದನ್ನು ತಪ್ಪಿಸಿ. ಪ್ರೀತಿಪಾತ್ರರೊಂದಿಗೆ ಉತ್ತಮ ಸಂಭಾಷಣೆಯನ್ನು ಕಾಯ್ದುಕೊಳ್ಳಿ. ವ್ಯವಹಾರದಲ್ಲಿ ಬುದ್ದಿವಂತಿಕೆಯಿಂದ ಮುಂದುವರೆಯುವುದು ಪ್ರಯೋಜನಕಾರಿ ಆಗಿದೆ. 

ಕರ್ಕಾಟಕ ರಾಶಿಯವರ ಭವಿಷ್ಯ (Cancer Horoscope): 
ಈ ರಾಶಿಯವರಿಗೆ ಇಂದು ವೈಯಕ್ತಿಕ ವಿಷಯಗಳಲ್ಲಿ ಹೆಚ್ಚಿನ ಜಾಗರೂಕತೆ ಅಗತ್ಯವಾಗಿದೆ. ಸಭೆ ಸಮಾರಂಭಗಳಲ್ಲಿ ಘನತೆಯಿಂದ ವರ್ತಿಸಿ. ಸಂಗಾತಿಯೊಂದಿಗೆ ವಿಹಾರಕ್ಕೆ ತೆರಳಬಹುದು. ಮನರಂಜನಾ ಚಟುವಟಿಕೆಗಳಲ್ಲಿ ಭಾಗಿಯಾಗುವ ಅವಕಾಶಗಳು ದೊರೆಯಬಹುದು. 

ಇದನ್ನೂ ಓದಿ- ಶನಿ ಶುಕ್ರ ಸಂಯೋಗದಿಂದ ಕೇಂದ್ರ ಯೋಗ: ಈ ರಾಶಿಯವರಿಗೆ ತೆರೆಯಲಿದೆ ಅದೃಷ್ಟದ ಬಾಗಿಲು, ಹೆಚ್ಚಾಗಲಿದೆ ಬ್ಯಾಂಕ್ ಬ್ಯಾಲೆನ್ಸ್ 

ಸಿಂಹ ರಾಶಿಯವರ ಭವಿಷ್ಯ (Leo Horoscope):  
ಈ ರಾಶಿಯವರಿಗೆ ಇಂದು ಎಲ್ಲೆಡೆ ಯಶಸ್ಸು ದೊರೆಯಲಿದೆ. ಸ್ನೇಹಿತರು ಮತ್ತು ಸಂಬಂಧಿಕರು ನಿಮ್ಮನ್ನು ಬೆಂಬಲಿಸುತ್ತಾರೆ. ಮನೆಗೆ ಅತಿಥಿಗಳ ಆಗಮನದಿಂದ ಆಹ್ಲಾದಕರ ಸಮಯವನ್ನು ಕಳೆಯುವಿರಿ. ಜೀವನದಲ್ಲಿ ಸಕಾರಾತ್ಮಕತೆ ಹೆಚ್ಚಾಗಲಿದ್ದು ಇದರಿಂದ ಪ್ರೇರಿತರಾಗುವಿರಿ. 

ಕನ್ಯಾ ರಾಶಿಯವರ ಭವಿಷ್ಯ (Virgo Horoscope): 
ಇಂದು ಹಣಕಾಸಿನ ವ್ಯವಹಾರಗಳಲ್ಲಿ ಹೆಚ್ಚಿನ  ಎಚ್ಚರಿಕೆಯಿಂದ ಇರಬೇಕಾಗುತ್ತದೆ. ವ್ಯವಹಾರ ಸಂಬಂಧಿತ ಒಪ್ಪಂದಗಳಲ್ಲಿ ಆತುರತೆಯನ್ನು ತಪ್ಪಿಸಿ. ಸಾಮಾಜಿಕ ವಲಯದಲ್ಲಿರುವವರು ಸೇವಾ ಮನೋಭಾವದಿಂದ ಮುಂದುವರೆಯುವುದರಿಂದ ಪ್ರಯೋಜನವಾಗಲಿದೆ. 

ತುಲಾ ರಾಶಿಯವರ ಭವಿಷ್ಯ (Libra Horoscope): 
ಇಂದು ನಿಮ್ಮ ಮಾತೇ ಬಂಡವಾಳವಾಗಿರಲಿದ್ದು ಇದರಿಂದ ಉತ್ತಮ ಲಾಭವನ್ನು ಗಳಿಸುವ ಅವಕಾಶವನ್ನು ಪಡೆಯುವಿರಿ. ವೃತ್ತಿ ಮತ್ತು ವ್ಯವಹಾರದಲ್ಲಿ ಆವೇಗವನ್ನು ಕಾಯ್ದುಕೊಳ್ಳುತ್ತೀರಿ. ಹಣಕಾಸಿನ ಹರಿವು ಹೆಚ್ಚಾಗುವುದರಿಂದ ಜೀವನ ಮಟ್ಟ ಸುಧಾರಿಸಲಿದೆ. 

ವೃಶ್ಚಿಕ ರಾಶಿಯವರ ಭವಿಷ್ಯ (Scorpio Horoscope):  
ಇಂದು ಹಣಕಾಸು ಚಟುವಟಿಕೆಗಳು ಬಲವಾಗಿರುತ್ತವೆ. ನಿಮ್ಮ ಕಾರ್ಯಕ್ಷಮತೆಯಿಂದಾಗಿ  ಸ್ಥಾನ ಮತ್ತು ಖ್ಯಾತಿಯನ್ನು ಹೆಚ್ಚಿಸುವಲ್ಲಿ ನೀವು ಯಶಸ್ವಿಯಾಗುತ್ತೀರಿ. ನಿಮ್ಮ ಕಲಾತ್ಮಕ ಪ್ರತಿಭೆ ಎಲ್ಲರನ್ನೂ ಮೆಚ್ಚಿಸಲಿದೆ. ಕೆಲಸಕ್ಕೆ ಸಂಬಂಧಿಸಿದಂತೆ ಶುಭ ಸುದ್ದಿಗಳನ್ನು ಸ್ವೀಕರಿಸುವಿರಿ. 

ಇದನ್ನೂ ಓದಿ- ಮಿಥುನ ರಾಶಿಗೆ ಶುಕ್ರದೇವನ ಪ್ರವೇಶ: ಇಂದಿನಿಂದ ಈ ಮೂರು ರಾಶಿಯವರ ಭಾಗ್ಯದ ಬಾಗಿಲು ತೆರೆಯಲಿದೆ!!

ಧನು ರಾಶಿಯವರ ಭವಿಷ್ಯ (Sagittarius Horoscope):  
ಇಂದು ನಿಮ್ಮ ವೈಯಕ್ತಿಕ ಸಾಧನೆಗಳು ಬಲಗೊಳ್ಳಲಿದ್ದು ಉತ್ಸಾಹವನ್ನೂ ಹೆಚ್ಚಿಸಲಿವೆ. ನಿರೀಕ್ಷೆಗೂ ಮೀರಿ ಕೆಲಸದಲ್ಲಿ ಕಾರ್ಯಕ್ಷಮತೆ ಸುಧಾರಿಸಲಿದೆ.   ಸ್ನೇಹಿತರಿಂದ ಹೆಚ್ಚಿನ ಬೆಂಬಲವನ್ನು ಪಡೆಯುತ್ತೀರಿ. ವೃತ್ತಿ ಮತ್ತು ವ್ಯವಹಾರದಲ್ಲಿ, ನಿಮ್ಮ ಕೌಶಲ್ಯ ಮತ್ತು ಪ್ರತಿಭೆಗಳಿಗೆ ಮನ್ನಣೆ ದೊರೆಯುತ್ತದೆ. 

ಮಕರ ರಾಶಿಯವರ ಭವಿಷ್ಯ (Capricorn Horoscope):  
ಇಂದು ಆರೋಗ್ಯದ ಬಗ್ಗೆ ತುಂಬಾ ಜಾಗರೂಕರಾಗಿರಿ. ಪ್ರಮುಖ ವಿಷಯಗಳಲ್ಲಿ ಶಿಸ್ತು, ನಿಯಮಗಳನ್ನು ಅನುಸರಿಸುವುದನ್ನು ಖಚಿತಪಡಿಸಿಕೊಳ್ಳಿ.  ವ್ಯವಸ್ಥೆಗಳು ಮತ್ತು ಸಂಘಟನೆಯಲ್ಲಿ ನಂಬಿಕೆಯನ್ನು ಕಾಪಾಡಿಕೊಳ್ಳಿ.  ಸಂಶೋಧನೆ ಆಧಾರಿತ ಚಟುವಟಿಕೆಗಳಲ್ಲಿ ಪ್ರಗತಿ ಕಂಡು ಬರಲಿದೆ. 

ಕುಂಭ ರಾಶಿಯವರ ಭವಿಷ್ಯ (Aquarius Horoscope):  
ಇಂದು ಹೆಚ್ಚಿನ ಲಾಭಾಂಶಗಳನ್ನು ಕಾಣಬಹುದು. ವೃತ್ತಿ-ವ್ಯವಹಾರದಲ್ಲಿ ಇತರರಿಂದ ಬೆಂಬಲ ಪಡೆಯುವಿರಿ. ಮನೆಯಲ್ಲಿ ಅನುಕೂಲಕರ ವಾತಾವರಣ ಇರುತ್ತದೆ. ಪಾಲುದಾರಿಕೆ ಪ್ರಯತ್ನಗಳು ವೇಗಗೊಳ್ಳುತ್ತವೆ. ಪ್ರಮುಖ ವಿಷಯಗಳು ಸಮಯಕ್ಕೆ ಸರಿಯಾಗಿ ಪೂರ್ಣಗೊಳ್ಳುವುದರಿಂದ ಲಾಭ. 

ಮೀನ ರಾಶಿಯವರ ಭವಿಷ್ಯ (Pisces Horoscope): 
ಉದ್ಯೋಗ ಸಂಬಂಧಿತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಿ. ವೃತ್ತಿಪರ ಫಲಿತಾಂಶಗಳು ಸರಾಸರಿಯಾಗಿ ಉಳಿಯಲಿವೆ. ವ್ಯವಹಾರದಲ್ಲಿ ಬುದ್ದಿವಂತಿಕೆಯಿಂದ ಮುಂದುವರೆಯಿರಿ. ಅನಗತ್ಯವಾಗಿ ಬೇರೆಯವರ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದನ್ನು ತಪ್ಪಿಸಿ. 

ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.

About the Author

Yashaswini V

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ...Read More

Trending News