ದಿನಭವಿಷ್ಯ 30-04-2025: 24ವರ್ಷಗಳ ಬಳಿಕ ಅಕ್ಷಯ ತೃತೀಯ ದಿನವೇ ಅಕ್ಷಯ ಯೋಗ ನಿರ್ಮಾಣ, ಈ ರಾಶಿಯವರ ಅದೃಷ್ಟವೇ ಬದಲು

Today Horoscope 30th April 2025: ಬರೋಬ್ಬರಿ 24ವರ್ಷಗಳ ನಂತರ ಶುಕ್ಲ ಪಕ್ಷ, ತೃತೀಯ ತಿಥಿಯಂದು ಅಕ್ಷಯ ಯೋಗ ನಿರ್ಮಾಣವಾಗಿದೆ. ಇದರ ಪರಿಣಾಮ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿಯವರ ರಾಶಿಫಲ ಹೇಗಿದೆ ತಿಳಿಯಿರಿ. 

Written by - Yashaswini V | Last Updated : Apr 30, 2025, 08:13 AM IST
  • ಏಪ್ರಿಲ್ 30, 2025ರ ಈ ದಿನ ಶುಕ್ಲ ಪಕ್ಷ, ತೃತೀಯ ತಿಥಿ, ಬುಧವಾರ
  • ಇಂದು ದೇಶಾದ್ಯಂತ ಅತ್ಯಂತ ಮಂಗಳಕರ ಅಕ್ಷಯ ತೃತೀಯವನ್ನು ಆಚರಿಸಲಾಗುತ್ತಿದೆ.
  • ಈ ದಿನವೇ ಅಕ್ಷಯ ಮತ್ತು ಶೋಭನದಂತಹ ಶುಭ ಯೋಗಗಳಿದ್ದು ಇದರಿಂದ ಕೆಲವರ ಅದೃಷ್ಟ ಬದಲಾಗಲಿದೆ ಎನ್ನಲಾಗುತ್ತಿದೆ.
ದಿನಭವಿಷ್ಯ 30-04-2025: 24ವರ್ಷಗಳ ಬಳಿಕ ಅಕ್ಷಯ ತೃತೀಯ ದಿನವೇ ಅಕ್ಷಯ ಯೋಗ ನಿರ್ಮಾಣ, ಈ ರಾಶಿಯವರ ಅದೃಷ್ಟವೇ ಬದಲು

Budhvara Dina Bhavishya In Kannada: ಶ್ರೀ ಶಾಲಿವಾಹನ ಶಕೆ 1947, ವಿಶ್ವಾವಸು ನಾಮ ಸಂವತ್ಸರ, ಉತ್ತರಾಯಣ, ಸೌರ ಗ್ರೀಷ್ಮ ಋತು, ವೈಶಾಖ ಮಾಸ, ಶುಕ್ಲ ಪಕ್ಷ, ತೃತೀಯ ತಿಥಿ, ಬುಧವಾರದ ಈ ದಿನ ರೋಹಿಣಿ ನಕ್ಷತ್ರ ಅಕ್ಷಯ ಮತ್ತು ಶೋಭನ ಯೋಗ, ವಣಿಜ ಕರಣ ಇರಲಿದೆ. 24ವರ್ಷಗಳ ಬಳಿಕ ಅಕ್ಷಯ ತೃತೀಯದಂದೇ ಅಕ್ಷಯ ಯೋಗ ನಿರ್ಮಾಣವಾಗುತ್ತಿದ್ದು ಕೆಲವು ರಾಶಿಯವರ ಬಾಳೇ ಬಂಗಾರವಾಗಲಿದೆ. ಇಂದಿನ ನಿಮ್ಮ ಭವಿಷ್ಯ ಹೇಗಿದೆ ತಿಳಿಯಿರಿ.  

Add Zee News as a Preferred Source

ಮೇಷ ರಾಶಿಯವರ ಭವಿಷ್ಯ (Aries Horoscope):  
ಕುಟುಂಬದಲ್ಲಿನ ಸಮಸ್ಯೆಗಳನ್ನು ಪರಿಹರಿಸಲು ಇಂದು ಪೂರಕವಾದ ದಿನವಾಗಿದೆ. ಮನೆಯಲ್ಲಿ ಸಾಮರಸ್ಯ ಮೇಲುಗೈ ಸಾಧಿಸಲಿದೆ. ಸಂಬಂಧಿಕರೊಂದಿಗೆ ಭಿನ್ನಾಭಿಪ್ರಾಯಗಳು ಸರಿಹೋಗಲಿವೆ. ನಿಮ್ಮ ಮಾತು ಮತ್ತು ನಡವಳಿಕೆ ಪ್ರಭಾವಶಾಲಿಯಾಗಿ ಉಳಿಯಲಿದೆ. 

ವೃಷಭ ರಾಶಿಯವರ ಭವಿಷ್ಯ (Taurus Horoscope):  
ನಿಮ್ಮ ಕೆಲಸಗಳಲ್ಲಿ ಸೃಜನಶೀಲತೆಯನ್ನು ಅಳವಡಿಸಿಕೊಳ್ಳಿ. ಯಾವುದೇ ಕಠಿಣ ಸಂದರ್ಭಗಳನ್ನು ನಿಭಾಯಿಸುವ ನಿಮ್ಮ ಧೈರ್ಯ, ಶೌರ್ಯ ಇತರರಿಗೆ ಸ್ಪೂರ್ತಿದಾಯಕವಾಗಿದೆ. ಭಾವನೆಗಳ ಮೇಲೆ ನಿಯಂತ್ರಣ ಸಾಧಿಸುವುದು ತುಂಬಾ ಅಗತ್ಯ. 

ಮಿಥುನ ರಾಶಿಯವರ ಭವಿಷ್ಯ (Gemini Horoscope):   
ಇಂದು ಪ್ರಮುಖ ಕೆಲಸಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಿರಿ. ಹಣಕಾಸಿನ ವಿಚಾರಗಳಲ್ಲಿ ಸ್ಪಷ್ಟತೆಯನ್ನು ಕಾಪಾಡಿಕೊಳ್ಳಿ. ದೂರದ ಊರಿಗೆ ಪ್ರಯಾಣಿಸುವ ಸಂಭವವಿದೆ. ಸ್ಮಾರ್ಟ್ ಕೆಲಸಗಳಿಂದ ನಿರ್ದಿಷ್ಟ ಗುರಿಯನ್ನು ಸಾಧಿಸುವಿರಿ. 

ಕರ್ಕಾಟಕ ರಾಶಿಯವರ ಭವಿಷ್ಯ (Cancer Horoscope): 
ಆರ್ಥಿಕ ಚಟುವಟಿಕೆಗಳು ಇಂದು ಉತ್ತಮವಾಗಿರಲಿವೆ. ಹೊಸ ವ್ಯವಹಾಗಳಲ್ಲಿ ಕುಟುಂಬ ಸದಸ್ಯರಿಂದ ಬೆಂಬಲ ದೊರೆಯಲಿದೆ. ಕೆಲಸದಲ್ಲಿ ಹೆಚ್ಚಿನ ಸಮಯ ವಿನಿಯೋಗಿಸುವುದರಿಂದ ಲಾಭವಾಗಲಿದೆ. ಉದ್ಯೋಗಸ್ಥರಿಗೆ ಲಾಭದಾಯಕ ದಿನ. 

ಇದನ್ನೂ ಓದಿ- ಅಕ್ಷಯ ತೃತೀಯದಲ್ಲಿ ಶುಭಕರ ಪಂಚಮಹಾಯೋಗಗಳ ನಿರ್ಮಾಣ: ಈ ರಾಶಿಯವರಿಗೆ ಸಾಕ್ಷಾತ್ ಲಕ್ಷ್ಮಿ ದಯೆ, ಕುಬೇರ ಖಜಾನೆ ಪ್ರಾಪ್ತಿ 

ಸಿಂಹ ರಾಶಿಯವರ ಭವಿಷ್ಯ (Leo Horoscope):  
ನಿರ್ವಹಣಾ ಪ್ರಯತ್ನಗಳಲ್ಲಿ ನಿರೀಕ್ಷೆಗಿಂತ ಉತ್ತಮ ಫಲ ದೊರೆಯಲಿದೆ. ಉದ್ಯೋಗಸ್ಥರು ಉನ್ನತ ಸ್ಥಾನ, ಪ್ರತಿಷ್ಠೆಗಳಿಸುವರು. ಕೆಲಸ ಮತ್ತು ವ್ಯವಹಾರದಲ್ಲಿ ವೇಗವನ್ನು ಕಾಯ್ದುಕೊಳ್ಳುವಿರಿ. ಆತ್ಮವಿಶ್ವಾಸ ಹೆಚ್ಚಾಗಲಿದೆ. ಹೊಸ ಆರ್ಥಿಕ ಮೂಲಗಳು ಸೃಷ್ಟಿಯಾಗಲಿವೆ. 

ಕನ್ಯಾ ರಾಶಿಯವರ ಭವಿಷ್ಯ (Virgo Horoscope): 
ವೃತ್ತಿಪರವಾಗಿ ಉತ್ತಮವಾಗಿ ಕಾರ್ಯನಿರ್ವಹಿಸುವಿರಿ. ಪೂರ್ವಜರ ಅಲಾಭವಾಗಲಿದೆ. ಉನ್ನತ ಶಿಕ್ಷಣಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ಶುಭ ಸುದ್ದಿಯನ್ನು ನಿರೀಕ್ಷಿಸಬಹುದು. ಶುಭ ಕಾರ್ಯಗಳನ್ನು ಆರಂಭಿಸಲು ಶುಭ ಸಮಯ. 

ತುಲಾ ರಾಶಿಯವರ ಭವಿಷ್ಯ (Libra Horoscope): 
ಪ್ರಮುಖ ವಿಚಾರಗಳಲ್ಲಿ ನಿರ್ಲಕ್ಷ್ಯವನ್ನು ತಪ್ಪಿಸಿ. ಆರೋಗ್ಯದ ಬಗ್ಗೆ ಜಾಗರೂಕರಾಗಿರಿ. ವಿರೋಧಿಗಳು ನಿಮ್ಮ ವಿರುದ್ಧ ಸಕ್ರಿಯರಾಗಿರುವವರು ಈ ಬಗ್ಗೆ ಜಾಗರೂಕರಾಗಿರಿ. ಅಪರಿಚಿತರೊಂದಿಗೆ ಯಾವುದೇ ವ್ಯವಹಾರವನ್ನು ತಪ್ಪಿಸಿ. 

ವೃಶ್ಚಿಕ ರಾಶಿಯವರ ಭವಿಷ್ಯ (Scorpio Horoscope):  
ಆರ್ಥಿಕ ಚಟುವಟಿಕೆಗಳು ಮತ್ತು ವ್ಯವಹಾರ ಸಂಬಂಧಿತ ಪ್ರಯತ್ನಗಳಲ್ಲಿ ಧನಾತ್ಮಕ ಫಲಗಳು ದೊರೆಯಲಿವೆ. ಇತ್ತೀಚಿಗೆ ಆರಂಭಿಸಿರುವ ವ್ಯವಹಾರದಲ್ಲಿ ಭರ್ಜರಿ ಲಾಭವಾಗಲಿದೆ. ವೃತ್ತಿಯಲ್ಲಿ ಸಂಪರ್ಕಗಳನ್ನು ಕಾಪಾಡಿಕೊಳ್ಳುವಿರಿ. ಸ್ನೇಹ ಬಲಗೊಳ್ಳಲಿದೆ.

ಇದನ್ನೂ ಓದಿ- Kitchen Vastu: ಮನೆಯಲ್ಲಿ ಸುಖ-ಸಂಪತ್ತು ನೆಲೆಸಬೇಕೆಂದರೆ ದೋಸೆ ತವಾಗೆ ಸಂಬಂಧಿಸಿದ ಈ 2 ತಪ್ಪನ್ನು ಎಂದಿಗೂ ಮಾಡಬೇಡಿ! 

ಧನು ರಾಶಿಯವರ ಭವಿಷ್ಯ (Sagittarius Horoscope):  
ಯಾವುದೇ ವ್ಯಕ್ತಿಯನ್ನು ಬೇಗನೆ ನಂಬುವುದನ್ನು ತಪ್ಪಿಸಿ. ವ್ಯವಹಾರಗಳಲ್ಲಿ ವಿವೇಚನೆ ಮತ್ತು ಜಾಗರೂಕತೆಯಿಂದ ವರ್ತಿಸಿ. ವಿರೋಧಿಗಳ ಬಗ್ಗೆ ಜಾಗರೂಕರಾಗಿರಿ. ಸೇವಾ-ಆಧಾರಿತ ಕಾರ್ಯಗಳಲ್ಲಿ ಪ್ರಗತಿ ಕಂಡು ಬರಲಿದೆ. 

ಮಕರ ರಾಶಿಯವರ ಭವಿಷ್ಯ (Capricorn Horoscope):  
ಇಂದು ಬಂಪರ್ ಆದಾಯವನ್ನು ಗಳಿಸುವ ದಿನ. ನಿಮ್ಮ ದಿನಚರಿಯಲ್ಲಿ ಹಣಕಾಸಿನ ಪ್ರಗತಿಯನ್ನು ಕಾಣುವಿರಿ. ಸಾಮಾಜಿಕ ಸಂವಾಹನಗಳಲ್ಲಿ ನಿರಾಳವಾಗಿರುತ್ತೀರಿ. ಉತ್ಸಾಹ ಮತ್ತು ಮನೋಸ್ಥೈರ್ಯದಿಂದ ಕೆಲಸ ಮಾಡುವುದರಿಂದ ಯಶಸ್ಸು. 

ಕುಂಭ ರಾಶಿಯವರ ಭವಿಷ್ಯ (Aquarius Horoscope):  
ತ್ವರಿತ ಪ್ರತಿಕ್ರಿಯೆಯನ್ನು ತಪ್ಪಿಸಿ. ಗುರಿಗಳ ಮೇಲೆ ಗಮನ ಕೇಂದ್ರೀಕರಿಸಿ. ವೈಯಕ್ತಿಕ ವಿಚಾರಗಳಲ್ಲಿ ಜಾಗರೂಕರಾಗಿರಿ. ಭೌತಿಕ ವಸ್ತುಗಳಿಗಾಗಿ ಹಣ ವಿನಿಯೋಗಿಸುವಿರಿ. ಕೆಲಸದಲ್ಲಿ ನಿಮ್ಮ ಪ್ರಯತ್ನವನ್ನು ಮುಂದುವರಿಸಿ. ಸಂಕುಚಿತ ಮನೋಭಾವವನ್ನು ಬಿಟ್ಟು ಮುಂದೆ ಸಾಗಿ. 

ಮೀನ ರಾಶಿಯವರ ಭವಿಷ್ಯ (Pisces Horoscope): 
ಇಂದು ನಿಮ್ಮ ಶಕ್ತಿಯು ಉನ್ನತ ಮಟ್ಟದಲ್ಲಿರುತ್ತದೆ. ಸಾಮಾಜಿಕ ಚಟುವಟಿಕೆಗಳಲ್ಲಿ ಯಶಸ್ಸನ್ನು ಕಾಣುವಿರಿ. ಸಹೋದರತ್ವ ಸಂಬಂಧಗಳು ಬಲಗೊಳ್ಳುತ್ತವೆ. ವೃತ್ತಿ-ವ್ಯವಹಾರದಲ್ಲಿ ಸಕ್ರಿಯರಾಗಿರುವಿರಿ. ಅನಾವಶ್ಯಕ ವಾದ-ವಿವಾದಗಳಿಂದ ದೂರವಿರಿ. 

ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Yashaswini V

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ...Read More

Trending News