ಎಷ್ಟೇ ಪ್ರಯತ್ನಪಟ್ಟರೂ ಮದುವೆ ಭಾಗ್ಯ ಕೂಡಿ ಬರುತ್ತಿಲ್ಲವೇ? ಮಂಗಳವಾರ ಈ ಕೆಲಸ ಮಾಡಿ !

ಕೆಲವರಿಗೆ ಎಷ್ಟೇ ಪ್ರಯತ್ನ ಪಟ್ಟರೂ ಸರಿಯಾದ ವಯಸ್ಸಿನಲ್ಲಿ ಮದುವೆಯಾಗುವುದಿಲ್ಲ. ಅಂಥವರು ಮಂಗಳವಾರ ಇದೊಂದು ಕೆಲಸ ಮಾಡಿದರೆ ಕಂಕಣ ಭಾಗ್ಯ ಕುಡಿ ಬರುವುದು. 

Written by - Ranjitha R K | Last Updated : May 7, 2025, 03:46 PM IST
  • ಪ್ರತಿ ದಿನವನ್ನೂ ಯಾವುದದರೂ ಒಂದು ದೇವರಿಗೆ ಸಮರ್ಪಿಸಲಾಗಿರುತ್ತದೆ.
  • ಅದೇ ರೀತಿ ಮಂಗಳವಾರ ಆಂಜನೇಯನಿಗೆ ಅರ್ಪಣೆ
  • 9 ಗ್ರಹಗಳಲ್ಲಿ ಒಂದಾದ ಮಂಗಳ ಗ್ರಹಕ್ಕೂ ಮಂಗಳವಾರಕ್ಕೂ ಸಂಬಂಧವಿದೆ.
ಎಷ್ಟೇ ಪ್ರಯತ್ನಪಟ್ಟರೂ ಮದುವೆ ಭಾಗ್ಯ ಕೂಡಿ ಬರುತ್ತಿಲ್ಲವೇ? ಮಂಗಳವಾರ ಈ ಕೆಲಸ ಮಾಡಿ !

ಬೆಂಗಳೂರು : ಹಿಂದೂ ಧರ್ಮದಲ್ಲಿ, ವಾರದ ಪ್ರತಿ ದಿನವೂ ತನ್ನದೇ ಆದ ಮಹತ್ವವನ್ನು ಹೊಂದಿದೆ. ಪ್ರತಿ ದಿನವನ್ನೂ ಯಾವುದದರೂ ಒಂದು ದೇವರಿಗೆ ಸಮರ್ಪಿಸಲಾಗಿರುತ್ತದೆ. ಅದೇ ರೀತಿ ಮಂಗಳವಾರ ಆಂಜನೇಯನಿಗೆ ಅರ್ಪಣೆ.  ಹನುಮಂತನ ಆಶೀರ್ವಾದಕ್ಕಾಗಿ ಮಂಗಳವಾರ ಅತ್ಯುತ್ತಮ ದಿನ. 9 ಗ್ರಹಗಳಲ್ಲಿ ಒಂದಾದ ಮಂಗಳ ಗ್ರಹಕ್ಕೂ ಮಂಗಳವಾರಕ್ಕೂ ಸಂಬಂಧವಿದೆ. 

Add Zee News as a Preferred Source

ಮಂಗಳ ಗ್ರಹವು ಧೈರ್ಯ, ಶೌರ್ಯ, ಭೂಮಿ, ಸಹೋದರ ಮತ್ತು ವಿವಾಹದ ಅಂಶವಾಗಿದೆ. ಜಾತಕದಲ್ಲಿ ಮಂಗಳ ಗ್ರಹವು ದುರ್ಬಲವಾಗಿದ್ದರೆ ಅಥವಾ ಅಶುಭವಾಗಿದ್ದರೆ, ಮದುವೆಯಲ್ಲಿ ಹಲವು ಸಮಸ್ಯೆಗಳು ಎದುರಾಗುತ್ತವೆ. ಸಂಬಂಧವು ಮತ್ತೆ ಮತ್ತೆ ಮುರಿದು ಬೀಳುತ್ತದೆ.ಒಂದು ವೇಳೆ ಮದುವೆಯಾದರೂ ಆ ಸಂಬಂಧ ಕೂಡಾ ಸರಿಯಾಗು ಮುಂದುವರೆಯುವುದಿಲ್ಲ. ಆದ್ದರಿಂದ, ವೈವಾಹಿಕ ಜೀವನದ ಸಂತೋಷಕ್ಕಾಗಿ ಮಂಗಳ ಗ್ರಹದ ಸ್ಥಾನ ಬಲಶಾಲಿಯಾಗಿರುವುದು ಮುಖ್ಯ. ಹಾಗೆಯೇ ಮದುವೆಗೆ ಎದುರಾಗಿರುವ ಸಮಸ್ಯೆಗಳ ನಿವಾರಣೆಗೆ ಮತ್ತು ಉದ್ಯೋಗ ಅಥವಾ ವ್ಯವಹಾರದಲ್ಲಿನ ಸಮಸ್ಯೆಗಳನ್ನು ಪರಿಹರಿಸಲು ಮಂಗಳವಾರ ಕೆಲವು ಕ್ರಮಗಳನ್ನು ಅನುಸರಿಸಬೇಕು. 

ಇದನ್ನೂ ಓದಿ : ಈ ರಾಶಿಯವರಿಗೆ ಕೋಟ್ಯಾಧಿಪತಿ ಯೋಗ!ಮಣ್ಣು ಕೂಡಾ ಹೊನ್ನಾಗುವ ಕಾಲ !ಉಕ್ಕಿ ಬರುವುದು ಅಷ್ಟೈಶ್ವರ್ಯ!ಪ್ರಾಪ್ತಿಯಾಗುವುದು ಜೀವನದ ಸರ್ವ ಸುಖ

 ಶೀಘ್ರ ವಿವಾಹವಾಗಬೇಕಾದರೆ ಪರಿಹಾರಗಳು : 
- ಮದುವೆಯಲ್ಲಿ ಪದೇ ಪದೇ ಅಡೆತಡೆಗಳು ಎದುರಾಗುತ್ತಿದ್ದರೆ ಅಥವಾ ನಿಮಗೆ ಸೂಕ್ತ ಜೀವನ ಸಂಗಾತಿ ಸಿಗದಿದ್ದರೆ, ಮಂಗಳವಾರ ಹನುಮಾನ್ ದೇವಸ್ಥಾನದಲ್ಲಿ ಸಿಂಧೂರವನ್ನು ಅರ್ಪಿಸಿ ಮಲ್ಲಿಗೆ ಎಣ್ಣೆಯ ದೀಪವನ್ನು ಬೆಳಗಿಸಿ. ಇದಾದ ನಂತರ ಹನುಮಾನ್ ಚಾಲೀಸಾ ಪಠಿಸಿ.

- ಮಂಗಳವಾರ ಬಡ ಹುಡುಗಿಗೆ ಕೆಂಪು ಬಟ್ಟೆ ಮತ್ತು ಸಿಹಿತಿಂಡಿಗಳನ್ನು ದಾನ ಮಾಡುವುದರಿಂದ ಸರಿಯಾದ ವಯಸ್ಸಿನಲ್ಲಿ ಕಂಕಣ ಭಾಗ್ಯ ಕೂಡಿ ಬರುವುದು. 

- ಮಂಗಳ ದೋಷವನ್ನು ತೊಡೆದುಹಾಕಲು, ಮಂಗಳವಾರ ಕೆಂಪು ಬೇಳೆ ಮತ್ತು ಬೆಲ್ಲವನ್ನು ದಾನ ಮಾಡಿ. ಇದರಿಂದಾಗಿ, ಮಂಗಳ ಗ್ರಹವು ಶುಭ ಫಲಿತಾಂಶಗಳನ್ನು ನೀಡಲು ಪ್ರಾರಂಭಿಸುತ್ತದೆ.

ಇದನ್ನೂ ಓದಿ:ಮಿಥುನ ರಾಶಿಗೆ ಗುರುವಿನ ಪ್ರವೇಶ: ಈ ಮೂರು ರಾಶಿಗಳಿಗೆ ಆರೋಗ್ಯ ಸಮಸ್ಯೆ, ಆರ್ಥಿಕ ಸಂಕಷ್ಟ!!

ಪ್ರಗತಿಯ ಹಾದಿಯಲ್ಲಿರುವ ಅಡೆತಡೆಗಳನ್ನು ತೆಗೆದುಹಾಕಲು ಕ್ರಮಗಳು : 
ಉದ್ಯೋಗ ಅಥವಾ ವ್ಯವಹಾರದಲ್ಲಿ ಪ್ರಗತಿ ಸಾಧಿಸುವಲ್ಲಿ ಅಡೆತಡೆಗಳನ್ನು ಎದುರಿಸುತ್ತಿದ್ದರೆ ಮಂಗಳವಾರ ಕೆಲವು ಕ್ರಮಗಳನ್ನು ತೆಗೆದುಕೊಳ್ಳಿ.

- ನೀವು ಬಯಸಿದ ಕೆಲಸ ಸಿಗದಿದ್ದರೆ, ಮಂಗಳವಾರ ಹನುಮಾನ್ ದೇವಸ್ಥಾನಕ್ಕೆ ಹೋಗಿ ಹನುಮಂತನಿಗೆ ವೀಳ್ಯದೆಲೆ ಅರ್ಪಿಸಿ. ನಂತರ ಹನುಮಾನ್ ಅಷ್ಟಕವನ್ನು ಪಠಿಸಿ.
- ಸರ್ಕಾರಿ ಕೆಲಸ ಪಡೆಯಲು ಶ್ರಮಿಸುವುದರ ಜೊತೆಗೆ, ಪ್ರತಿ ಮಂಗಳವಾರ ಹನುಮಾನ್ ಚಾಲೀಸಾ ಓದಿದ ನಂತರ ಬಜರಂಗಬಲಿಗೆ ಬೂಂದಿ ಅರ್ಪಿಸಿ.
- ಮಂಗಳವಾರ ಬಡವರಿಗೆ ಮತ್ತು ನಿರ್ಗತಿಕರಿಗೆ ಆಹಾರವನ್ನು ನೀಡುವುದರಿಂದ ಕೆಲಸದಲ್ಲಿನ ಅಡೆತಡೆಗಳು ನಿವಾರಣೆಯಾಗುತ್ತವೆ.
- ಯಾವುದೇ ದೊಡ್ಡ ಸಮಸ್ಯೆ ಎದುರಾದರೆ ಭಜರಂಗಬಾಣವನ್ನು ಕ್ರಮಬದ್ಧವಾಗಿ ಪಠಿಸಿ.

ಮಂಗಳವಾರದಂದು ತಪ್ಪಿಯೂ ಮಾಂಸ ಮತ್ತು ಮದ್ಯ ಸೇವಿಸಬಾರದು ಎನ್ನುವುದು ನೆನಪಿರಲಿ. 

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

 

(ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ದೃಢೀಕರಿಸುವುದಿಲ್ಲ.)

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ

About the Author

Ranjitha R K

ರಂಜಿತಾ ಆರ್.ಕೆ ಪ್ರಸ್ತುತ `ಜೀ ಕನ್ನಡ ನ್ಯೂಸ್‌' ವೆಬ್‌ನಲ್ಲಿ ಚೀಫ್ ಸಬ್ ಎಡಿಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ 19 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿರುವ ಇವರು 2020 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕೀಯ, ಬ್ಯುಸಿನೆಸ್, ಟೆಕ್ನಾಲಜಿ, ಹೆಲ್ತ್ ಅಂಡ್ ಲೈಫ್ ಸ್ಟೈಲ್, ಸ್ಪಿರಿಚ್ಯುವಲ್ ವಿಭಾಗಗಲ್ಲಿ ಆಸಕ್ತಿಕರ ಲೇಖನಗಳನ್ನು ಒದಗಿಸುವ ಅನುಭವವನ್ನು ಹೊಂದಿರುತ್ತಾರೆ. 2006ರಲ್ಲಿ ʼರಾಮೋಜಿ ಗ್ರೂಪ್‌ʼನ ಈಟಿವಿ  ಕನ್ನಡ ವಾಹಿನಿಯಿಂದ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು, ನಂತರ ಜನಶ್ರೀ, ಸಮಯ, ಸುವರ್ಣ ವಾಹಿನಿಗಳಲ್ಲಿಯೂ ಕಾರ್ಯ ನಿರ್ವಹಿಸಿದ್ದಾರೆ. ...Read More

Trending News