Morning Vastu Tips: ದಿನದ ಆರಂಭ ಚೆನ್ನಾಗಿದ್ದರೆ ದಿನದಲ್ಲಿ ನಾವು ಮಾಡುವ ಎಲ್ಲಾ ಕೆಲಸಗಳೂ ಯಶಸ್ವಿಯಾಗುತ್ತವೆ  ಎಂದು ಹೇಳಲಾಗುತ್ತದೆ. ಬೆಳಗ್ಗೆ ತಿಳಿದೋ ಅಥವಾ ತಿಳಿಯದೆಯೋ, ನಾವು ಹಲವು ಬಾರಿ ಕೆಲ ತಪ್ಪುಗಳನ್ನು ಮಾಡಿಬಿಡುತ್ತೇವೆ. ಈ ತಪ್ಪುಗಳು ನಮ್ಮ ಕೆಲಸ ಮತ್ತು ಆರೋಗ್ಯದ ಮೇಲೆ ಪರಿಣಾಮ ಬೀರುತ್ತವೆ.  ಇಂತಹುದೇ ಕೆಲ ಕೆಲಸಗಳನ್ನು ಶಾಸ್ತ್ರಗಳಲ್ಲಿ ಉಲ್ಲೇಖಿಸಲಾಗಿದ್ದು, ಅವುಗಳನ್ನು ಬೆಳಗ್ಗೆ ಎದ್ದ ತಕ್ಷಣ ಮಾಡಬಾರದು, ಏಕೆಂದರೆ ಅದೃಷ್ಟದ ಬದಲಿಗೆ, ದುರಾದೃಷ್ಟವು ನೆರಳಿನಂತೆ ನಮ್ಮನ್ನು ಹಿಂಬಾಲಿಸುತ್ತದೆ ಎನ್ನಲಾಗಿದೆ. ವಾಸ್ತು ಶಾಸ್ತ್ರದ ಪ್ರಕಾರ ಮುಂಜಾನೆ ಯಾವ 5 ಕೆಲಸಗಳನ್ನು ಮಾಡುವುದು ಅಶುಭ ಎಂದು ಪರಿಗಣಿಸಲಾಗಿದೆ ತಿಳಿದುಕೊಳ್ಳೋಣ ಬನ್ನಿ


COMMERCIAL BREAK
SCROLL TO CONTINUE READING

ಕನ್ನಡಿಯಲ್ಲಿ ನೋಡುವುದು
ಸಾಮಾನ್ಯವಾಗಿ ಜನರು ಬೆಳಗ್ಗೆ ಎದ್ದ ತಕ್ಷಣ ಕನ್ನಡಿಯಲ್ಲಿ ತಮ್ಮನ್ನು ತಾವು ನೋಡಿಕೊಳ್ಳುತ್ತಾರೆ, ಇದನ್ನು ವಾಸ್ತು ಶಾಸ್ತ್ರದ ಪ್ರಕಾರ ಶುಭ ಪರಿಗಣಿಸಲಾಗುವುದಿಲ್ಲ. ಬೆಳಗ್ಗೆ ಎದ್ದ ತಕ್ಷಣ ಮೊದಲು ದೇವರ ದರ್ಶನ ಮಾಡಬೇಕು. ಹೀಗೆ ಮಾಡುವುದರಿಂದ ದಿನದ ಆರಂಭ ಉತ್ತಮವಾಗುತ್ತದೆ ಮತ್ತು ಇಡೀ ದಿನ ಸಂತಸದಿಂದ ಕಳೆದುಹೋಗುತ್ತದೆ.


ನಿಂತು ಹೋದ ಗಡಿಯಾರ ನೋಡುವುದು
ವ್ಯಕ್ತಿಯ ಭವಿಷ್ಯವು ಗಡಿಯಾರದೊಂದಿಗೆ ಸಂಬಂಧಿಸಿದೆ. ಮನೆಯಲ್ಲಿ ನಿಂತುಹೋದ ಗಡಿಯಾರವು ಕೆಟ್ಟ ಸಮಯವನ್ನು ಸೂಚಿಸುತ್ತದೆ. ಧರ್ಮಗ್ರಂಥಗಳ ಪ್ರಕಾರ, ನಿಂತುಹೋದ ಗಡಿಯಾರವನ್ನು ನೋಡುವುದು ಮನೆಯಲ್ಲಿ ವಿವಾದಕ್ಕೆ ಕಾರಣವಾಗಬಹುದು. ಪ್ರತಿದಿನದ ಕೆಲಸದಲ್ಲಿ ಅಡೆತಡೆಗಳನ್ನು ಉಂಟುಮಾಡಬಹುದು.


ಮುಸುರಿ ಪಾತ್ರೆಗಳನ್ನು ನೋಡುವುದು
ಬೆಳಗ್ಗೆ ಎದ್ದ ತಕ್ಷಣ ಮುಸುರಿ ಪಾತ್ರೆಗಳನ್ನು ನೋಡುವುದರಿಂದ ದೇಹದಲ್ಲಿ ಧನಾತ್ಮಕ ಶಕ್ತಿಯ ಸಂಚಾರ ಕಡಿಮೆಯಾಗುತ್ತದೆ. ಶಾಸ್ತ್ರಗಳ ಪ್ರಕಾರ ರಾತ್ರಿ ಅಡುಗೆ ಮನೆಯನ್ನು ಸ್ವಚ್ಛಗೊಳಿಸಿದ ನಂತರ ಮಲಗಬೇಕು. ಮುಸುರಿ ಪಾತ್ರೆಗಳನ್ನು ಹಾಗೆಯೇ ಇಡುವುದರಿಂದ ಮನೆಯಲ್ಲಿ ಬಡತನ ಬರುತ್ತದೆ.


ನೆರಳು ನೋಡುವುದು
ಬೆಳಗ್ಗೆ ಎದ್ದ ತಕ್ಷಣ ನಮ್ಮ ಮೊದಲ ದೃಷ್ಟಿ ನಮ್ಮ ಅಥವಾ ಇತರರ ನೆರಳಿನ ಮೇಲೆ ಬೀಳುವುದು ಒಳ್ಳೆಯ ಸಂಕೇತವಲ್ಲ ಎಂದು ಶಾಸ್ತ್ರದಲ್ಲಿ ಉಲ್ಲೇಖಿಸಲಾಗಿದೆ. ನೆರಳು ಕಣ್ಣಿಗೆ ಬೀಳುವುದು ರಾಹುವಿನ ಸಂಕೇತ ಎಂದು ಪರಿಗಣಿಸಲಾಗುತ್ತದೆ. ನೆರಳನ್ನು ನೋಡುವುದು ವ್ಯಕ್ತಿಯಲ್ಲಿ ಉದ್ವೇಗ ಮತ್ತು ಭಯದ ವಾತಾವರಣವನ್ನು ಸೃಷ್ಟಿಸುತ್ತದೆ. ದಿನವಿಡೀ ಕೆಲಸದಲ್ಲಿ ತೊಂದರೆಗಳು ಎದುರಾಗುತ್ತವೆ ಮತ್ತು ಇದು ಏಕಾಗ್ರತೆಗೆ ಭಂಗ ತರುತ್ತದೆ.


ಇದನ್ನೂ ಓದಿ-Vastu Tips: ಜಾತಕದಲ್ಲಿನ ರಾಹು, ಕೇತು ಹಾಗೂ ಶನಿ ದೋಷದಿಂದ ಮುಕ್ತಿ ಪಡೆಯಲು ಈ ಉಪಾಯ ಅನುಸರಿಸಿ


ಕ್ರೂರ ಪ್ರಾಣಿಗಳ ಫೋಟೋ ನೋಡುವುದು
ಬೆಳಗ್ಗೆ ಎದ್ದ ತಕ್ಷಣ ಹಸು ಕಂಡರೆ ಅದು ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗುತ್ತದೆ. ಆದರೆ ಶಾಸ್ತ್ರಗಳ ಪ್ರಕಾರ ಮುಂಜಾನೆಯ ಮೊದಲ ದೃಷ್ಟಿ ಕ್ರೂರ ಪ್ರಾಣಿಗಳ ಮೇಲೆ ಅಥವಾ ಪ್ರಾಣಿಗಳ ಚಿತ್ರದ ಮೇಲೆ ಬೀಳಬಾರದು ಎಂದು ಹೇಳಲಾಗಿದೆ. ಇದು ಸಂಬಂಧಗಳಲ್ಲಿ ವಿರಸಕ್ಕೆ ಕಾರಣವಾಗುತ್ತದೆ ಎಂದು ನಂಬಲಾಗಿದೆ. ಕೆಲಸದ ಸ್ಥಳದಲ್ಲಿ ಕೂಡ ಇದರಿಂದ ವಿವಾದ ಉಂಟಾಗಬಹುದು.


ಇದನ್ನೂ ಓದಿ -Lucky Zodiac Sign:ಈ ರಾಶಿಗಳ ಜನರ ಮೇಲಿರುತ್ತದೆ ಕುಬೇರನ ವಿಶೇಷ ಕೃಪೆ, ಹಣಕಾಸಿನ ವಿಷಯದಲ್ಲಿ ತುಂಬಾ ಭಾಗ್ಯಶಾಲಿಗಳಾಗಿರುತ್ತಾರೆ

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಪುಷ್ಠಿಕರಿಸುವುದಿಲ್ಲ)


ಇದನ್ನೂ ನೋಡಿ-


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.