ಬೆಂಗಳೂರು: ವೈದಿಕ ಜ್ಯೋತಿಷ್ಯದಲ್ಲಿ ಅತ್ಯಂತ ಮಂಗಳಕರ ಗ್ರಹ ಎಂದು ಕರೆಯಲ್ಪಡುವ ಶುಕ್ರನು ಪ್ರಸ್ತುತ ಮೀನ ರಾಶಿಯಲ್ಲಿದ್ದು ಮಾರ್ಚ್ 11ರವರೆಗೂ ಇದೇ ರಾಶಿಯಲ್ಲಿ ಸಂಚರಿಸಲಿದ್ದಾನೆ. ಈ ಸಮಯದಲ್ಲಿ ಕೆಲವು ರಾಶಿಯವರಿಗೆ ಸನ್ಮಂಗಳವನ್ನು ಉಂಟು ಮಾಡುವ ಶುಕ್ರನು ಕೆಲವು ರಾಶಿಯವರಿಗೆ ನಾನಾ ರೀತಿಯ ಸಂಕಷ್ಟಗಳನ್ನು ತಂದೊಡ್ಡಲಿದ್ದಾನೆ ಎಂದು ಹೇಳಲಾಗುತ್ತದೆ. 


COMMERCIAL BREAK
SCROLL TO CONTINUE READING

ಹೌದು, ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಮುಂದಿನ 25 ದಿನಗಳ ಕಾಲ ಕೆಲವು ರಾಶಿಯವರು ತುಂಬಾ ತಾಳ್ಮೆಯಿಂದ ಇರಬೇಕು ಎಂದು ಹೇಳಲಾಗುತ್ತಿದೆ. ಈ ಸಮಯದಲ್ಲಿ ಯಾವ ರಾಶಿಯವರು ಜಾಗರೂಕರಾಗಿರಬೇಕು ಎಂದು ತಿಳಿಯೋಣ...


ಶುಕ್ರ ರಾಶಿ ಪರಿವರ್ತನೆ- ಈ ರಾಶಿಯವರು ತುಂಬಾ ಜಾಗರೂಕರಾಗಿರಬೇಕು:-
ಮೇಷ ರಾಶಿ:

ಶುಕ್ರ ರಾಶಿ ಪರಿವರ್ತನೆಯಿಂದ ಈ ರಾಶಿಯವರಿಗೆ ಆರ್ಥಿಕ ಸಂಕಷ್ಟ ಹೆಚ್ಚಾಗಲಿದೆ. ನಿಮ್ಮ ಆದಾಯಕ್ಕಿಂತ ಖರ್ಚು ಹೆಚ್ಚಾಗಲಿದೆ. ಒತ್ತಡ ಪರಿಸ್ಥಿತಿಯಿಂದಾಗಿ ಆರೋಗ್ಯವೂ ಹದಗೆಡಲಿದೆ. ಹಾಗಾಗಿ, ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚು ಗಮನಹರಿಸಿ.


ಇದನ್ನೂ ಓದಿ- ಶಿವರಾತ್ರಿಯಂದು ಕೈಗೊಳ್ಳುವ ಈ ಕ್ರಮಗಳಿಂದ ಶನಿಗೆ ಸಂಬಂಧಿಸಿದ ಎಲ್ಲಾ ಸಮಸ್ಯೆಗಳಿಂದ ಸಿಗುತ್ತೆ ಮುಕ್ತಿ


ಮಿಥುನ ರಾಶಿ: 
ಶುಕ್ರ ಸಂಚಾರವು ಮಿಥುನ ರಾಶಿಯವರ ವೃತ್ತಿ ಜೀವನದಲ್ಲಿ ಸಮಸ್ಯೆಗಳನ್ನು ಹೆಚ್ಚಿಸಲಿದೆ. ಹಾಗಾಗಿ, ಕಚೇರಿಯಲ್ಲಿ ನಿಮ್ಮ ಸಹೋದ್ಯೋಗಿಗಳೊಂದಿಗೆ ವಾದ-ವಿವಾದಗಳನ್ನು ತಪ್ಪಿಸಿ. ನಿಮ್ಮ ವಿರುದ್ಧ ಪಿತೂರಿಗಳು ಹೆಚ್ಚಾಗುವ ಸಂಭವವಿರುವುದರಿಂದ ವಿರೋಧಿಗಳ ಬಗ್ಗೆ ಜಾಗೃತರಾಗಿರಿ.


ತುಲಾ ರಾಶಿ: 
ಈ ಸಮಯದಲ್ಲಿ ತುಲಾ ರಾಶಿಯವರು ನಿಮ್ಮ ಆರೋಗ್ಯದ ಬಗ್ಗೆ ಸ್ವಲ್ಪ ಗಮನಹರಿಸುವುದು ಅಗತ್ಯ. ಯಾವುದೇ ರೀತಿಯ ಆರೋಗ್ಯ ಸಮಸ್ಯೆಗಳಿದ್ದರೆ ತಕ್ಷಣವೇ ವೈದ್ಯರನ್ನು ಸಂಪರ್ಕಿಸಿ ಇಲ್ಲವೇ ಆರೋಗ್ಯ ಹದಗೆಡಬಹುದು. ಅನಗತ್ಯ ವಿಷಯಗಳಿಗೆ ಹಣ ಖರ್ಚು ಮಾಡುವುದನ್ನು ತಪ್ಪಿಸಿ, ಇಲ್ಲವೇ ಮುಂದಿನ ದಿನಗಳಲ್ಲಿ ಆರ್ಥಿಕ ಸಂಕಷ್ಟ ಹೆಚ್ಚಾಗಲಿದೆ.


ಇದನ್ನೂ ಓದಿ- ಈ ತಿಂಗಳಾಂತ್ಯದಿಂದ ಕೆಲವು ರಾಶಿಯವರ ಜೀವನದಲ್ಲಿ ಭಾಗ್ಯೋದಯ ಉಂಟುಮಾಡಲಿದ್ದಾನೆ ಬುಧ


ಕುಂಭ ರಾಶಿ:
ಒಂದೆಡೆ ಕುಂಭ ರಾಶಿಯಲ್ಲಿಯೇ ಸೂರ್ಯ-ಶನಿ ಸಂಯೋಗ, ಇನ್ನೊಂದೆಡೆ ಶುಕ್ರನ ಸಂಚಾರ ಕುಂಭ ರಾಶಿಯವರಿಗೆ ಭಾರೀ ನಷ್ಟವನ್ನು ಉಂಟು ಮಾಡಲಿದ್ದಾನೆ. ಮುಂದಿನ 25 ದಿನಗಳವರೆಗೆ ನೀವು ನಿಮ್ಮ ಹಣಕಾಸಿನ ವ್ಯವಹಾರಗಳ ಬಗ್ಗೆ ತುಂಬಾ ಜಾಗರೂಕರಾಗಿರಬೇಕು. ಇಲ್ಲದಿದ್ದರೆ, ಭಾರೀ ತೊಂದರೆಗೆ ಸಿಲುಕಬಹುದು ಎಚ್ಚರ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ