ನ್ಯೂಜಿಲೆಂಡ್ ವಿರುದ್ಧ ಹೀನಾಯ ಸೋಲು.. ಭಾರತ ತಂಡದಿಂದ ಸ್ಟಾರ್ ಕ್ರಿಗೆಟರ್ ಔಟ್!

IND vs NZ: ತವರಿನಲ್ಲಿ ನ್ಯೂಜಿಲೆಂಡ್ ವಿರುದ್ಧದ ಮೊದಲ ಮತ್ತು ಎರಡನೇ ಟೆಸ್ಟ್ ಪಂದ್ಯಗಳನ್ನು ಸೋತ ಟೀಮ್ ಇಂಡಿಯಾ ಸರಣಿಯನ್ನು ಕಳೆದುಕೊಂಡಿದೆ. ಇದೇ ವೇಳೆ ಸ್ಟಾರ್‌ ವೇಗಿಯೊಬ್ಬರು ತಂಡದಿಂದ ಹೊರನಡೆದಿದ್ದಾರೆ.. 

Written by - Savita M B | Last Updated : Oct 28, 2024, 09:28 AM IST
  • ಇದೀಗ ಸರಣಿಯ ಕೊನೆಯ ಟೆಸ್ಟ್ ಪಂದ್ಯ ನವೆಂಬರ್ 1 ರಿಂದ ಮುಂಬೈನಲ್ಲಿ ನಡೆಯಲಿದೆ
  • ಅಲ್ಲದೆ ಈ ಪಂದ್ಯ ಸೋತರೆ ಭಾರತ WTC ಫೈನಲ್ ನಿಂದ ಹೊರಬೀಳಲಿದೆ.
 ನ್ಯೂಜಿಲೆಂಡ್ ವಿರುದ್ಧ ಹೀನಾಯ ಸೋಲು.. ಭಾರತ ತಂಡದಿಂದ ಸ್ಟಾರ್ ಕ್ರಿಗೆಟರ್ ಔಟ್!  title=

IND vs NZ 3rd Test Series: ಇದೀಗ ಸರಣಿಯ ಕೊನೆಯ ಟೆಸ್ಟ್ ಪಂದ್ಯ ನವೆಂಬರ್ 1 ರಿಂದ ಮುಂಬೈನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಗೆಲುವು ಭಾರತಕ್ಕೆ ಬಹಳ ಮುಖ್ಯವಾಗಿದೆ, ಏಕೆಂದರೆ ಸೋತರೆ ಕಿವೀಸ್ ಕೈಯಲ್ಲಿ ಕ್ಲೀನ್ ಸ್ವೀಪ್ ಆಗುತ್ತದೆ. ಇದು ಟೀಮ್ ಇಂಡಿಯಾಗೆ ದೊಡ್ಡ ಅವಮಾನ.. ಅಲ್ಲದೆ ಈ ಪಂದ್ಯ ಸೋತರೆ ಭಾರತ WTC ಫೈನಲ್ ನಿಂದ ಹೊರಬೀಳಲಿದೆ.

ನ್ಯೂಜಿಲೆಂಡ್ ಟೆಸ್ಟ್ ಸರಣಿ ಟೀಂ ಇಂಡಿಯಾ ಕೈಯಿಂದ ಕೈ ತಪ್ಪಿದೆ. ಬೆಂಗಳೂರು ಮತ್ತು ಪುಣೆ ಟೆಸ್ಟ್‌ಗಳನ್ನು ನ್ಯೂಜಿಲೆಂಡ್ ಗೆದ್ದು ಸರಣಿಯನ್ನು ಗೆದ್ದುಕೊಂಡಿತು. ನವೆಂಬರ್ 1 ರಿಂದ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಕೊನೆಯ ಪಂದ್ಯ ನಡೆಯಲಿದೆ. ಈ ಸರಣಿಯಲ್ಲಿ ಟೀಂ ಇಂಡಿಯಾ ಗೌರವ ಉಳಿಸಲು ಇದು ಕೊನೆಯ ಅವಕಾಶವಾಗಿದೆ. ಆದರೆ ಟೀಂ ಇಂಡಿಯಾದ ಸ್ಟಾರ್ ಆಟಗಾರ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅವರಿಗೆ ಈ ಪಂದ್ಯದಿಂದ ವಿಶ್ರಾಂತಿ ನೀಡಬೇಕು ಎಂದು ಮಾಜಿ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ಆಗ್ರಹಿಸಿದ್ದಾರೆ.

ಇದನ್ನೂ ಓದಿ-ನಟಿ ಖುಷ್ಬೂ ಸುಂದರ್‌ ಮಗಳನ್ನು ಎಂದಾದರೂ ನೋಡಿದ್ದೀರಾ..? ತಾಯಿಯ ಸೌಂದರ್ಯವನ್ನೇ ಬೀಟ್‌ ಮಾಡುವಂತಿದ್ದಾಳೆ ಈ ಬ್ಯೂಟಿ..!

 ಈ ಕುರಿತು ಮಾತನಾಡಿದ ಕಾರ್ತಿಕ್, ಬುಮ್ರಾಗೆ ಸಾಕಷ್ಟು ವಿಶ್ರಾಂತಿಯ ಅಗತ್ಯವಿದೆ. ಹೀಗಾಗಿ ಅವರು ವಿಶ್ರಾಂತಿ ಪಡೆಯುತ್ತಾರೆ.. ಬುಮ್ರಾ ಬದಲಿಗೆ ಮೊಹಮ್ಮದ್ ಸಿರಾಜ್ ಪ್ಲೇಯಿಂಗ್ XI ಗೆ ಮರಳಲಿದ್ದಾರೆ ಎಂದು ಕಾರ್ತಿಕ್ ಭರವಸೆ ವ್ಯಕ್ತಪಡಿಸಿದರು. ಆದರೆ ಅಂತಿಮ ಟೆಸ್ಟ್‌ಗೆ ತಂಡದಲ್ಲಿ ಇನ್ನು ಯಾವುದೇ ಬದಲಾವಣೆ ಇಲ್ಲದಿರಬಹುದು ಎಂದು ಹೇಳಿದ್ದಾರೆ.

ನ್ಯೂಜಿಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಬಳಿಕ ಟೀಂ ಇಂಡಿಯಾ ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿದೆ. ಅಲ್ಲಿ 5 ಟೆಸ್ಟ್ ಪಂದ್ಯಗಳು ನಡೆಯಲಿವೆ. ಆಸ್ಟ್ರೇಲಿಯದಲ್ಲಿ ಮೊಹಮ್ಮದ್ ಶಮಿ ಕೂಡ ಈ ಬಾರಿ ಗೈರುಹಾಜರಾಗಿರುವುದರಿಂದ ಬುಮ್ರಾ ಅವರ ಮೇಲೆ ದೊಡ್ಡ ಜವಾಬ್ದಾರಿ ಇದೆ... ಹಾಗಾಗಿ ಬುಮ್ರಾನೆ ಅಲ್ಲಿ 5 ಪಂದ್ಯಗಳನ್ನು ಆಡಬೇಕಿದೆ. ಈ ಸಂದರ್ಭದಲ್ಲಿ ಅನೇಕ ಕ್ರಿಕೆಟ್ ಅಭಿಮಾನಿಗಳು ಬುಮ್ರಾ ಟೆಸ್ಟ್‌ಗೆ ರಿಸ್ಕ್ ತೆಗೆದುಕೊಳ್ಳದೇ ವಿಶ್ರಾಂತಿ ಪಡೆಯಲಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಕಾಮೆಂಟ್ ಮಾಡುತ್ತಿದ್ದಾರೆ.

ಇದನ್ನೂ ಓದಿ-ಬಿಗ್ ಬಾಸ್ ಸ್ಪರ್ಧಿ ವಿರುದ್ಧ ಕೇಸ್ ದಾಖಲು..! ವೈಲ್ಡ್‌ ಕಾರ್ಡ್‌ ಮೂಲಕ ದೊಡ್ಮನೆ ಸೇರಿದ್ದ ಸ್ಪರ್ಧಿ ಜೈಲಿಗೆ..?

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News