ನವದೆಹಲಿ: ಟಿ-20 ವಿಶ್ವಕಪ್ ಟೂರ್ನಿಯ ಮಹತ್ವದ ಪಂದ್ಯದಲ್ಲಿ ಟೀಂ ಇಂಡಿಯಾ ಎದುರು ಗೆಲ್ಲುವ ಪಂದ್ಯ ಸೋತ ಬಳಿಕ ಪಾಕಿಸ್ತಾನಕ್ಕೆ ದೊಡ್ಡ ಆಘಾತವಾಗಿದೆ. ಕೆಲವು ಎಡವಟ್ಟು ಮಾಡಿಕೊಂಡು ಆಘಾತಕಾರಿ ಸೋಲು ಕಂಡ ಪಾಕಿಸ್ತಾನ ತಂಡ ಅಭಿಮಾನಿಗಳಿಗೆ ದೊಡ್ಡ ನಿರಾಸೆ ಮೂಡಿಸಿದೆ.


COMMERCIAL BREAK
SCROLL TO CONTINUE READING

ಈ ಸೋಲಿನ ಬೆನ್ನಲ್ಲಿಯೇ ಪಾಕಿಸ್ತಾನದ ಆಲ್‍ರೌಂಡರ್ ಮೊಹಮ್ಮದ್ ಹಫೀಜ್ ಅವರು ಬಾಬರ್ ಅಜಂ ನಾಯಕತ್ವವನ್ನು ಕಟುವಾಗಿ ಟೀಕಿಸಿದ್ದಾರೆ. ಮೆಲ್ಬೋರ್ನ್ ಮೈದಾನದಲ್ಲಿ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ರೋಹಿತ್ ಶರ್ಮಾ ಪಡೆಯ ಅಗ್ರ ಕ್ರಮಾಂಕ ಆಘಾತಕಾರಿ ಕುಸಿತ ಕಂಡರೂ ನಂತರ ಚೇತರಿಸಿಕೊಂಡಿತ್ತು. ಹಾರ್ದಿಕ್ ಪಾಂಡ್ಯ ಮತ್ತು ವಿರಾಟ್ ಕೊಹ್ಲಿ ಸ್ಫೋಟಕ ಬ್ಯಾಟಿಂಗ್ ಮೂಲಕ ತಂಡವನ್ನು ಸೋಲಿನಿಂದ ಪಾರು ಮಾಡಿದರು. ಅದರಲ್ಲೂ ಕೊಹ್ಲಿ ಶ್ರೇಷ್ಠ ಪ್ರದರ್ಶನ ನೀಡುವ ಮೂಲಕ ತಂಡಕ್ಕೆ ಗೆಲುವು ತಂದುಕೊಟ್ಟರು.  


ಇದನ್ನೂ ಓದಿ:  Viral Video: ಸೋತ ಬಳಿಕ ಡ್ರೆಸ್ಸಿಂಗ್ ರೂಂನಲ್ಲಿ ತಲೆ ಮೇಲೆ ಕೈ ಹೊತ್ತು ಕುಳಿತ ಪಾಕ್ ಆಟಗಾರರು!


T20 World Cup 2022: ಅರ್ಷದೀಪ್ ಸಿಂಗ್ ಬೌಲಿಂಗ್ ಮಾಡುವಾಗ ತಾಯಿ ಏನ್ ಮಾಡ್ತಾರೆ ಗೊತ್ತಾ..?


‘ಬಾಬರ್ ಅಜಂ ನಾಯಕತ್ವ ಬೆದರಿದ ಹಸುವಿನಂತಿತ್ತು, ಇದನ್ನು ನಾವು ಟೀಕಿಸಲಾಗದು. ಬಾಬರ್ ನಾಯಕತ್ವದಲ್ಲಿ ದೋಷ ಕಂಡಿರುವುದು ಇದು ಸತತ 3ನೇ ಬಾರಿ. ಆದರೆ 32ನೇ ವರ್ಷದಲ್ಲೂ ಅವರು ಕಲಿಯುತ್ತಾರೆ ಎನ್ನುವುದನ್ನು ಕೇಳಿಸಿಕೊಳ್ಳುತ್ತಲೇ ಬಂದಿದ್ದೇವೆ. ಭಾನುವಾರದ ಪಂದ್ಯದಲ್ಲಿ 7 ರಿಂದ 11ನೇ ಓವರ್‍ವರೆಗೂ ಭಾರತ ಪ್ರತಿ ಓವರ್‍ಗೆ 4 ರನ್ ಗಳಿಸಲೂ ಪರದಾಡುತ್ತಿತ್ತು. ಈ ಅವಧಿಯಲ್ಲಿ ಬಾಬರ್ ಏಕೆ ಸ್ಪಿನ್ ಕೋಟಾವನ್ನು ಮುಗಿಸಲಿಲ್ಲ? ಅಂತಾ ಹಫೀಜ್ ಪ್ರಶ್ನಿಸಿದ್ದಾರೆ.


‘ಅಂತಿಮ ಓವರ್‌ನಲ್ಲಿ ಹಾರ್ದಿಕ್ ಪಾಂಡ್ಯ ಮತ್ತು ದಿನೇಶ್ ಕಾರ್ತಿಕ್ ಅವರ 2 ನಿರ್ಣಾಯಕ ವಿಕೆಟ್‌ಗಳನ್ನು ನವಾಜ್ ಪಡೆದರು. ಆದರೂ ಹೈವೋಲ್ಟೇಜ್ ಪಂದ್ಯದಲ್ಲಿ ಕೊಹ್ಲಿ ಭರ್ಜರಿ ಬ್ಯಾಟಿಂಗ್‍ನಿಂದ ಪಾಕಿಸ್ತಾನ ಸೋಲಬೇಕಾಯಿತು. ಕೊನೆಯ ಓವರ್‍ನಲ್ಲಿ ಭಾರತಕ್ಕಿಂತಲೂ ಪಾಕಿಸ್ತಾನ ತಂಡಕ್ಕೆ ಗೆಲ್ಲುವ ಚಾನ್ಸ್ ಹೆಚ್ಚಿತ್ತು. ಆದರೆ ಈ ಸೋಲು ನಮಗೆ ದೊಡ್ಡ ನಿರಾಸೆ ಮೂಡಿಸಿದೆ’ ಎಂದು ಹಫೀಜ್ ಹೇಳಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ