ಸರ್ಫರಾಜ್, ಧ್ರುವ್ ಜುರೆಲ್ ಬೆನ್ನಲ್ಲೇ ಟೀಂ ಇಂಡಿಯಾಗೆ ಪದಾರ್ಪಣೆ ಮಾಡಲು ಈ ವೇಗಿ ಸಿದ್ಧ: ಬುಮ್ರಾ ಸ್ಥಾನಕ್ಕೆ ಇವರೇ ಫಿಕ್ಸ್!

Akash Deep Singh: ಇದೀಗ ಬುಮ್ರಾ ಅನುಪಸ್ಥಿತಿಯಲ್ಲಿ ಬಿಹಾರದ ವೇಗದ ಬೌಲರ್ ಆಕಾಶ್ ದೀಪ್ ಸಿಂಗ್ ರಾಂಚಿ ಟೆಸ್ಟ್‌’ಗೆ ಪದಾರ್ಪಣೆ ಮಾಡುವ ಸಾಧ್ಯತೆ ಇದೆ.

Written by - Bhavishya Shetty | Last Updated : Feb 21, 2024, 04:12 PM IST
    • ರಾಂಚಿಯಲ್ಲಿ ನಡೆಯಲಿರುವ ನಾಲ್ಕನೇ ಟೆಸ್ಟ್ ಪಂದ್ಯ
    • ಬುಮ್ರಾ ಮತ್ತು ಕೆಎಲ್ ರಾಹುಲ್ ಮುಂಬರುವ ಪಂದ್ಯದಿಂದ ಹೊರಕ್ಕೆ
    • ಆಕಾಶ್ ದೀಪ್ ಸಿಂಗ್ ರಾಂಚಿ ಟೆಸ್ಟ್‌’ಗೆ ಪದಾರ್ಪಣೆ ಮಾಡುವ ಸಾಧ್ಯತೆ
ಸರ್ಫರಾಜ್, ಧ್ರುವ್ ಜುರೆಲ್ ಬೆನ್ನಲ್ಲೇ ಟೀಂ ಇಂಡಿಯಾಗೆ ಪದಾರ್ಪಣೆ ಮಾಡಲು ಈ ವೇಗಿ ಸಿದ್ಧ: ಬುಮ್ರಾ ಸ್ಥಾನಕ್ಕೆ ಇವರೇ ಫಿಕ್ಸ್!  title=
India England Test

Akash Deep Singh: ರಾಂಚಿಯಲ್ಲಿ ನಡೆಯಲಿರುವ ನಾಲ್ಕನೇ ಟೆಸ್ಟ್ ಪಂದ್ಯಕ್ಕೂ ಮುನ್ನ, ವೇಗದ ಬೌಲರ್‌’ಗಳಾದ ಜಸ್ಪ್ರೀತ್ ಬುಮ್ರಾ ಮತ್ತು ಕೆಎಲ್ ರಾಹುಲ್ ಮುಂಬರುವ ಪಂದ್ಯದಿಂದ ಹೊರಗುಳಿದಿದ್ದಾರೆ ಎಂದು ಬಿಸಿಸಿಐ (ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ) ತಿಳಿಸಿದೆ. ಕೆಲಸದ ಹೊರೆಯಿಂದಾಗಿ ಬುಮ್ರಾಗೆ ವಿಶ್ರಾಂತಿ ನೀಡಲಾಗಿದ್ದು, ಕೆಎಲ್ ರಾಹುಲ್ ಇನ್ನೂ ಸಂಪೂರ್ಣ ಫಿಟ್ ಆಗಿಲ್ಲ.

ಇದೀಗ ಬುಮ್ರಾ ಅನುಪಸ್ಥಿತಿಯಲ್ಲಿ ಬಿಹಾರದ ವೇಗದ ಬೌಲರ್ ಆಕಾಶ್ ದೀಪ್ ಸಿಂಗ್ ರಾಂಚಿ ಟೆಸ್ಟ್‌’ಗೆ ಪದಾರ್ಪಣೆ ಮಾಡುವ ಸಾಧ್ಯತೆ ಇದೆ.

ಇದನ್ನೂ ಓದಿ: ಬೆಂಗಳೂರು ಅರಮನೆ ಮೈದಾನದಲ್ಲಿ ಫೆ.26-27 ರಂದು ಬೃಹತ್ ಉದ್ಯೋಗ ಮೇಳ

27 ವರ್ಷದ ವೇಗದ ಬೌಲರ್ ಆಕಾಶ್ ದೀಪ್ ಇತ್ತೀಚೆಗೆ ಇಂಗ್ಲೆಂಡ್ ಲಯನ್ಸ್ ವಿರುದ್ಧ ಆಡಿದ ಪಂದ್ಯಗಳಲ್ಲಿ ಅದ್ಭುತ ಪ್ರದರ್ಶನ ನೀಡಿದ್ದರು. ನಂತರ ಭಾರತೀಯ ತಂಡದಲ್ಲಿ ಸ್ಥಾನ ಪಡೆದರು. ಇಂಗ್ಲೆಂಡ್ ಲಯನ್ಸ್ ವಿರುದ್ಧದ ಮೊದಲ ಅನಧಿಕೃತ ಟೆಸ್ಟ್ ಪಂದ್ಯದಲ್ಲಿ 6 ವಿಕೆಟ್ ಪಡೆದಿದ್ದರು. ಅದಾದ ಬಳಿಕ, ಎರಡನೇ ಪಂದ್ಯದಲ್ಲಿ 5 ವಿಕೆಟ್ ಪಡೆದಿದ್ದರು.

ಆಕಾಶ್ ದೀಪ್ ಸಿಂಗ್ ದೇಶೀಯ ಕ್ರಿಕೆಟ್‌’ನಲ್ಲಿ ಉತ್ತಮ ಅಂಕಿಅಂಶಗಳನ್ನು ಹೊಂದಿದ್ದಾರೆ. ಇದುವರೆಗೆ 30 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿರುವ ಅವರು 104 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಅದರಲ್ಲೂ 4 ಬಾರಿ 5 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. 28 ಲಿಸ್ಟ್-ಎ ಪಂದ್ಯಗಳಲ್ಲಿ, ಈ ಬೌಲರ್ 42 ಬ್ಯಾಟ್ಸ್‌ಮನ್‌’ಗಳನ್ನು ಔಟ್ ಮಾಡಿರುವುದು ವಿಶೇಷ.

ಬಿಸಿಸಿಐ ಹೇಳಿಕೆಯಲ್ಲಿ, 'ರಾಂಚಿಯಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್‌ ಪಂದ್ಯದಿಂದ ಜಸ್ಪ್ರೀತ್ ಬುಮ್ರಾ ಅವರನ್ನು ಹೊರಗಿಡಲಾಗಿದೆ. ಸರಣಿಯ ಅವಧಿ ಮತ್ತು ಇತ್ತೀಚಿನ ದಿನಗಳಲ್ಲಿ ಅವರು ಆಡಿದ ಕ್ರಿಕೆಟ್ ಅನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಈ ಮಧ್ಯೆ, ಕೆಎಲ್ ರಾಹುಲ್ ನಾಲ್ಕನೇ ಟೆಸ್ಟ್‌’ನಿಂದ ಹೊರಗುಳಿದಿದ್ದಾರೆ. ಧರ್ಮಶಾಲಾದಲ್ಲಿ ನಡೆಯಲಿರುವ ಅಂತಿಮ ಟೆಸ್ಟ್ ಪಂದ್ಯದಲ್ಲಿ ಅವರು ಭಾಗವಹಿಸುವುದು ಫಿಟ್ನೆಸ್ ಮೇಲೆ ಅವಲಂಬಿತವಾಗಿದೆ” ಎಂದಿದ್ದಾರೆ.

ಇದನ್ನೂ ಓದಿ: ಗವಾಸ್ಕರ್ ದಾಖಲೆ ಮುರಿಯುವ ತವಕದಲ್ಲಿ ಯಶಸ್ವಿ: ಕೊಹ್ಲಿಯಿಂದಲೂ ಅಸಾಧ್ಯವೆನಿಸಿದ ರೆಕಾರ್ಡ್ ಅದು!

ನಾಲ್ಕನೇ ಟೆಸ್ಟ್‌’ಗೆ ಅಪ್ಟೇಟೆಡ್ ಭಾರತ ತಂಡ

ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ರಜತ್ ಪಾಟಿದಾರ್, ಸರ್ಫರಾಜ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ದೇವದತ್ ಪಡಿಕ್ಕಲ್, ಆರ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಆಕಾಶ್ ದೀಪ್ ಸಿಂಗ್,

ಇದನ್ನೂ ಓದಿ: ಬೆಂಗಳೂರು ಅರಮನೆ ಮೈದಾನದಲ್ಲಿ ಫೆ.26-27 ರಂದು ಬೃಹತ್ ಉದ್ಯೋಗ ಮೇಳ

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News