Game Over: ರೋಹಿತ್ ಶರ್ಮಾ T20 ವೃತ್ತಿಜೀವನ ಎಂಡ್‌ ಎಂದ ಚೇತನ್ ಶರ್ಮಾ!

Chetan Sharma Sting Operation : ZEE NEWS ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷ ಚೇತನ್ ಶರ್ಮಾ ಮೇಲೆ ರಹಸ್ಯ ಕಾರ್ಯಾಚರಣೆ ನಡೆಸಿದೆ. ಚೇತನ್ ಶರ್ಮಾ ZEE ಮೀಡಿಯಾದ ಹಿಡನ್ ಕ್ಯಾಮರಾದಲ್ಲಿ ಇಂತಹ ಸತ್ಯಗಳನ್ನು ಬಹಿರಂಗಪಡಿಸಿದ್ದಾರೆ, ಇದು ಎಲ್ಲರಿಗೂ ಆಶ್ಚರ್ಯವನ್ನುಂಟು ಮಾಡುತ್ತದೆ. 

Written by - Chetana Devarmani | Last Updated : Feb 17, 2023, 06:32 PM IST
  • ರೋಹಿತ್ ಶರ್ಮಾ T20 ವೃತ್ತಿಜೀವನ ಎಂಡ್‌
  • ಚೇತನ್ ಶರ್ಮಾ ಮೇಲೆ ಜೀ ನ್ಯೂಸ್‌ ರಹಸ್ಯ ಕಾರ್ಯಾಚರಣೆ
  • ಹಿಡನ್ ಕ್ಯಾಮರಾ ಮುಂದೆ ಚೇತನ್ ಶರ್ಮಾ ಬಿಚ್ಚಿಟ್ರು ಈ ಸತ್ಯ.!
Game Over: ರೋಹಿತ್ ಶರ್ಮಾ T20 ವೃತ್ತಿಜೀವನ ಎಂಡ್‌ ಎಂದ ಚೇತನ್ ಶರ್ಮಾ!  title=
Chetan Sharma Sting Operation

GameOver - Chetan Sharma Sting Operation : ZEE NEWS ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷ ಚೇತನ್ ಶರ್ಮಾ ಮೇಲೆ ರಹಸ್ಯ ಕಾರ್ಯಾಚರಣೆ ನಡೆಸಿದೆ. ಚೇತನ್ ಶರ್ಮಾ ZEE ಮೀಡಿಯಾದ ಹಿಡನ್ ಕ್ಯಾಮರಾದಲ್ಲಿ ಇಂತಹ ಸತ್ಯಗಳನ್ನು ಬಹಿರಂಗಪಡಿಸಿದ್ದಾರೆ, ಇದು ಎಲ್ಲರಿಗೂ ಆಶ್ಚರ್ಯವನ್ನುಂಟು ಮಾಡುತ್ತದೆ. ಈಗ ಟಿ20 ಕ್ರಿಕೆಟ್‌ನಲ್ಲಿ ರೋಹಿತ್ ಶರ್ಮಾ ಭವಿಷ್ಯ ಏನಾಗಬಹುದು ಮತ್ತು ರೋಹಿತ್ ಶರ್ಮಾ ಅವರ ಟಿ20 ನಾಯಕತ್ವದ ಪಯಣ ಈಗ ಮುಗಿದಿದೆಯೇ, ಈ ಎಲ್ಲಾ ಪ್ರಶ್ನೆಗಳಿಗೆ ಚೇತನ್ ಶರ್ಮಾ ಆಘಾತಕಾರಿ ಉತ್ತರ ನೀಡಿದ್ದಾರೆ.

ರೋಹಿತ್ ಶರ್ಮಾ T20 ವೃತ್ತಿಜೀವನ ಎಂಡ್‌?

ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ದೀಪಕ್ ಹೂಡಾ, ಶುಭಮನ್ ಗಿಲ್ ಸೇರಿದಂತೆ 15-20 ಆಟಗಾರರನ್ನು ಟೀಂ ಇಂಡಿಯಾಕ್ಕೆ ಕರೆತಂದಿದ್ದೇನೆ ಎಂದು ಚೇತನ್ ಶರ್ಮಾ ಹೇಳಿದ್ದಾರೆ. ರೋಹಿತ್ ಶರ್ಮಾ ಇನ್ನು ಮುಂದೆ ಟಿ20 ತಂಡದ ಭಾಗವಾಗುವುದಿಲ್ಲ ಎಂದು ಚೇತನ್ ಶರ್ಮಾ ಬಹಿರಂಗಪಡಿಸಿದ್ದಾರೆ. ಚೇತನ್ ಶರ್ಮಾ, 'ರೋಹಿತ್ ಶರ್ಮಾ ಇನ್ನು ಮುಂದೆ ಟಿ20 ತಂಡದ ಭಾಗವಾಗುವುದಿಲ್ಲ ಮತ್ತು ಹಾರ್ದಿಕ್ ಪಾಂಡ್ಯ ನಾಯಕತ್ವವನ್ನು ವಹಿಸಿಕೊಳ್ಳಲಿದ್ದಾರೆ. ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರಂತಹ ಅನುಭವಿ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದ್ದು, ಅಂತಾರಾಷ್ಟ್ರೀಯ ಟಿ20 ಮಾದರಿಯಲ್ಲಿ ಶುಭಮನ್ ಗಿಲ್‌ಗೆ ಅವಕಾಶ ಕಲ್ಪಿಸಲಾಗಿದೆ ಎಂದಿದ್ದಾರೆ. 

ಇದನ್ನೂ ಓದಿ : GameOver: ಟೀಮ್ ಇಂಡಿಯಾ ಆಟಗಾರರ ಆಯ್ಕೆ ನಡೆಯೋದು ಹೀಗಾ? ಬೆಚ್ಚಿಬೀಳಿಸುವ ಕರಾಳ ಸತ್ಯ Zee News ರಹಸ್ಯ ಕಾರ್ಯಾಚರಣೆಯಲ್ಲಿ ಬಟಾಬಯಲು.!

ಮುಖ್ಯ ಆಯ್ಕೆಗಾರ ಚೇತನ್ ಶರ್ಮಾ ಬಿಚ್ಚಿಟ್ರು ಶಾಕಿಂಗ್‌ ಸತ್ಯ : 

ಚೇತನ್ ಶರ್ಮಾ ಅವರನ್ನು ಎರಡನೇ ಬಾರಿಗೆ ಆಯ್ಕೆ ಸಮಿತಿಯ ಅಧ್ಯಕ್ಷರನ್ನಾಗಿ ಮಾಡಲಾಗಿದೆ. ಇದಕ್ಕೂ ಮುನ್ನ ಆಸ್ಟ್ರೇಲಿಯಾದಲ್ಲಿ ನಡೆದ ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡದ ಕಳಪೆ ಪ್ರದರ್ಶನದ ಹಿನ್ನೆಲೆಯಲ್ಲಿ ಅವರನ್ನು ಕೈಬಿಡಲಾಗಿತ್ತು. ಚೇತನ್ ಶರ್ಮಾ ಅವರು ವಿರಾಟ್ ಕೊಹ್ಲಿ ಮತ್ತು ಜಸ್ಪ್ರೀತ್ ಬುಮ್ರಾ ಅವರಂತಹ ಆಟಗಾರರ ಬಗ್ಗೆ ಮಾತನಾಡುವುದನ್ನು ಜೀ ನ್ಯೂಸ್ ರಹಸ್ಯ ಕಾರ್ಯಾಚರಣೆಯಲ್ಲಿ ತೋರಿಸಲಾಗಿದೆ. ಕೋಚ್‌ ರಾಹುಲ್ ದ್ರಾವಿಡ್ ಮತ್ತು ವಿರಾಟ್ ಕೊಹ್ಲಿ ಜತೆಗಿನ ಸಂಭಾಷಣೆಯನ್ನೂ ಅವರು ಬಹಿರಂಗಪಡಿಸಿದ್ದಾರೆ. 80 ರಿಂದ 85 ರಷ್ಟು ಫಿಟ್ ಆಗಿದ್ದರೂ, ಸ್ಪರ್ಧಾತ್ಮಕ ಕ್ರಿಕೆಟ್‌ಗೆ ತ್ವರಿತವಾಗಿ ಮರಳಲು ಆಟಗಾರರು ಚುಚ್ಚುಮದ್ದನ್ನು ತೆಗೆದುಕೊಳ್ಳುತ್ತಾರೆ ಎಂದು ಚೇತನ್ ಶರ್ಮಾ ಆರೋಪಿಸಿದ್ದಾರೆ.

ಇದನ್ನೂ ಓದಿ : “ವಿರಾಟ್ ಕೊಹ್ಲಿ ಸುಳ್ಳುಗಾರ”: Zee News ರಹಸ್ಯ ಕಾರ್ಯಾಚರಣೆಯಲ್ಲಿ ಕೊಹ್ಲಿ ಬಗ್ಗೆ ಚೇತನ್ ಬಿಚ್ಚಿಟ್ಟ ಮಹಾರಹಸ್ಯವೇನು!

ಸೆಪ್ಟೆಂಬರ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಟಿ 20 ಐ ಸರಣಿಗೆ ಬುಮ್ರಾ ಮರಳುವ ಬಗ್ಗೆ ತಮ್ಮ ಮತ್ತು ತಂಡದ ಮ್ಯಾನೇಜ್‌ಮೆಂಟ್ ನಡುವೆ ಭಿನ್ನಾಭಿಪ್ರಾಯಗಳಿವೆ ಎಂದು ಚೇತನ್ ಶರ್ಮಾ ಆರೋಪಿಸಿದ್ದಾರೆ. ಬುಮ್ರಾ ಪ್ರಸ್ತುತ ತಂಡದಿಂದ ಹೊರಗಿದ್ದು, ನಾಲ್ಕು ಟೆಸ್ಟ್‌ಗಳ ಬಾರ್ಡರ್ ಗವಾಸ್ಕರ್ ಟ್ರೋಫಿ ಮತ್ತು ಆಸ್ಟ್ರೇಲಿಯ ವಿರುದ್ಧದ ನಂತರದ ಮೂರು ಪಂದ್ಯಗಳ ODI ಸರಣಿಯಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿಲ್ಲ. ಮಾಜಿ ನಾಯಕ ವಿರಾಟ್ ಕೊಹ್ಲಿ ಮತ್ತು ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ ನಡುವೆ ಇಗೋ ಕ್ಲ್ಯಾಶ್‌ ಇದೆ ಎಂದು ಚೇತನ್ ಶರ್ಮಾ ಆರೋಪಿಸಿದ್ದಾರೆ. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News