Indian team for South Africa Series Announced: ಭಾರತ ಕ್ರಿಕೆಟ್ ತಂಡ ಡಿಸೆಂಬರ್ 10 ರಿಂದ ದಕ್ಷಿಣ ಆಫ್ರಿಕಾ ವಿರುದ್ಧ ಟಿ20, ಏಕದಿನ ಮತ್ತು ಟೆಸ್ಟ್ ಸರಣಿಗಳನ್ನು ಆಡಲಿದೆ. ಗುರುವಾರ ಸಂಜೆ ಬಿಸಿಸಿಐ ಈ ಸರಣಿಗೆ ಭಾರತ ತಂಡವನ್ನು ಪ್ರಕಟಿಸಿದೆ. ಟೀಂ ಇಂಡಿಯಾ ಸರಣಿಯಲ್ಲಿ ಪ್ರತಿ ಫಾರ್ಮ್ಯಾಟ್‌’ಗೆ ವಿಭಿನ್ನ ಆಟಗಾರರು ನಾಯಕತ್ವ ವಹಿಸಲಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: “ಏಕೆಂದರೆ ನಾನು…”- 53 ವರ್ಷ ವಯಸ್ಸಾದ್ರೂ ಮದುವೆಯಾಗದಿರಲು ಇದೇ ಕಾರಣ ಎಂದ ರಾಹುಲ್ ಗಾಂಧಿ


ಮುಂಬರುವ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಭಾರತ ತಂಡವನ್ನು ಆಯ್ಕೆ ಮಾಡಲು ಪುರುಷರ ಆಯ್ಕೆ ಸಮಿತಿಯು ಗುರುವಾರ ದೆಹಲಿಯಲ್ಲಿ ಸಭೆ ನಡೆಸಿದೆ. 3 ಟಿ20, 3 ಏಕದಿನ ಮತ್ತು 2 ಟೆಸ್ಟ್ ಪಂದ್ಯಗಳು ನಡೆಯಲಿದ್ದು, ಇದಲ್ಲದೆ, ಭಾರತ ಎ ತಂಡವು ದಕ್ಷಿಣ ಆಫ್ರಿಕಾ ಎ ವಿರುದ್ಧ ಎರಡು ನಾಲ್ಕು ದಿನಗಳ ಪಂದ್ಯಗಳು ಮತ್ತು ಒಂದು ಇಂಟರ್-ಸ್ಕ್ವಾಡ್ ಮೂರು ದಿನಗಳ ಪಂದ್ಯವನ್ನು ಸಹ ಆಡಲಿದೆ.


ಪ್ರತಿಯೊಂದು ಸ್ವರೂಪಕ್ಕೂ ವಿಭಿನ್ನ ನಾಯಕ:


ಈ ಪ್ರವಾಸದಲ್ಲಿ ಟೀಂ ಇಂಡಿಯಾ ಪ್ರತಿಯೊಂದು ಮಾದರಿಯಲ್ಲಿ ವಿಭಿನ್ನ ನಾಯಕನೊಂದಿಗೆ ಆಡಲಿದೆ. ರೋಹಿತ್ ಶರ್ಮಾಗೆ ಟಿ20 ಮತ್ತು ಏಕದಿನ ಮಾದರಿಯಲ್ಲಿ ವಿಶ್ರಾಂತಿ ನೀಡಲಾಗಿದ್ದು, ಟೆಸ್ಟ್‌’ನಿಂದ ತಂಡಕ್ಕೆ ಮರಳಲಿದ್ದಾರೆ. ಏಕದಿನ ಸರಣಿಯಲ್ಲಿ ಕೆಎಲ್ ರಾಹುಲ್ ನಾಯಕತ್ವ ವಹಿಸಿದರೆ, ಟಿ20 ಮಾದರಿಯಲ್ಲಿ ಸೂರ್ಯಕುಮಾರ್ ಯಾದವ್ ನಾಯಕತ್ವ ವಹಿಸಲಿದ್ದಾರೆ.


ಇದು ಸಂಪೂರ್ಣ ವೇಳಾಪಟ್ಟಿ


ಭಾರತ ತಂಡ ಡಿಸೆಂಬರ್ 10 ರಿಂದ ಡರ್ಬನ್‌’ನಲ್ಲಿ ಟಿ20 ಸರಣಿಯನ್ನು ಆಡಲಿದೆ. ಎರಡನೇ ಟಿ20 ಪಂದ್ಯ ಡಿಸೆಂಬರ್ 12 ರಂದು ಜಿಕೆಬರ್ಹಾದಲ್ಲಿ ನಡೆಯಲಿದ್ದು, ಮೂರನೇ ಟಿ20 ಪಂದ್ಯ ಡಿಸೆಂಬರ್ 14 ರಂದು ಜೋಹಾನ್ಸ್‌ಬರ್ಗ್‌ನಲ್ಲಿ ನಡೆಯಲಿದೆ. ಇದರ ನಂತರ, ಮೊದಲ ಏಕದಿನ ಪಂದ್ಯ ಡಿಸೆಂಬರ್ 17 ರಂದು ಜೋಹಾನ್ಸ್‌ಬರ್ಗ್‌’ನಲ್ಲಿ ನಡೆಯಲಿದೆ. ಎರಡನೇ ಏಕದಿನ ಪಂದ್ಯ 19 ರಂದು ಗ್ಕೆಬರ್ಹಾದಲ್ಲಿ ನಡೆಯಲಿದ್ದು, ಸರಣಿಯ ಅಂತಿಮ ಏಕದಿನ ಡಿಸೆಂಬರ್ 21 ರಂದು ಪಾರ್ಲ್‌’ನಲ್ಲಿ ನಡೆಯಲಿದೆ. ಸರಣಿಯ ಮೊದಲ ಟೆಸ್ಟ್ ಪಂದ್ಯ ಡಿಸೆಂಬರ್ 26 ರಿಂದ ಸೆಂಚುರಿಯನ್‌’ನಲ್ಲಿ ನಡೆಯಲಿದೆ. ಎರಡನೇ ಟೆಸ್ಟ್ ಪಂದ್ಯ ಜನವರಿ 3 ರಿಂದ ಕೇಪ್ ಟೌನ್ ನಲ್ಲಿ ಆರಂಭವಾಗಲಿದೆ.


ಟೆಸ್ಟ್‌’ಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್ (WK), ಕೆಎಲ್ ರಾಹುಲ್ (WK), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ (ಉಪನಾಯಕ) ಮತ್ತು ಪ್ರಸಿದ್ಧ್ ಕೃಷ್ಣ.


ಟಿ20ಗೆ ಭಾರತ ತಂಡ: ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ರುತುರಾಜ್ ಗಾಯಕ್ವಾಡ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (WK), ಜಿತೇಶ್ ಶರ್ಮಾ (WK), ರವೀಂದ್ರ ಜಡೇಜಾ (ಉಪನಾಯಕ) , ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಕುಲದೀಪ್ ಯಾದವ್, ಅರ್ಶ್ದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್ ಮತ್ತು ದೀಪಕ್ ಚಾಹರ್.


ಏಕದಿನಕ್ಕೆ ಭಾರತ ತಂಡ: ರುತುರಾಜ್ ಗಾಯಕ್ವಾಡ್, ಸಾಯಿ ಸುದರ್ಶನ್, ತಿಲಕ್ ವರ್ಮಾ, ರಜತ್ ಪಾಟಿದಾರ್, ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (WK), ಸಂಜು ಸ್ಯಾಮ್ಸನ್ (WK), ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಮುಖೇಶ್ ಕುಮಾರ್ ಅವೇಶ್ ಖಾನ್, ಅರ್ಷದೀಪ್ ಸಿಂಗ್ ಮತ್ತು ದೀಪಕ್ ಚಹಾರ್.


ಇದನ್ನೂ ಓದಿ: ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಅವರಿಂದಲೇ ಆಶೀರ್ವಾದ ಪಡೆದಿದ್ದ ಈಕೆ ಕನ್ನಡದ ಪ್ರಖ್ಯಾತ ಕಿರುತೆರೆ ನಟಿ! ಯಾರೆಂದು ಗೆಸ್ ಮಾಡಿ ನೋಡೋಣ..


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ