kuldeep yadav statement on his marriage: ಭಾರತದ ಸ್ಟಾರ್ ಎಡಗೈ ಸ್ಪಿನ್ನರ್ ಕುಲದೀಪ್ ಯಾದವ್ ಸದ್ಯ ಮದುವೆ ವಿಷುಯದಲ್ಲಿ ಸುದ್ದಿಯಲ್ಲಿದ್ದಾರೆ. ಟೀಂ ಇಂಡಿಯಾ T20 ವಿಶ್ವಕಪ್ ಗೆದ್ದ ಬಳಿಕ. ಕುಲದೀಪ್ ಯಾದವ್ ನಿರಂತರವಾಗಿ ಅನೇಕ ಗಣ್ಯರನ್ನು ಭೇಟಿಯಾಗುತ್ತಿದ್ದು, ಎಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಹೊಸ ಕ್ಯಾಪ್ಟನ್ ಹಾರ್ದಿಕ್ ಅಲ್ಲ! ರೋಹಿತ್ ಶರ್ಮಾ ಮನಗೆದ್ದಿದ್ದ ಈ ಬ್ಯಾಟ್ಸ್’ಮನ್’ಗೆ ನಾಯಕನ ಪಟ್ಟ!


ಜೂನ್ 29 ರಂದು ಬಾರ್ಬಡೋಸ್‌’ನ ಕಿಂಗ್‌ಸ್ಟನ್ ಓವಲ್ ಕ್ರೀಡಾಂಗಣದಲ್ಲಿ ನಡೆದ ರೋಚಕ ಫೈನಲ್‌’ನಲ್ಲಿ ದಕ್ಷಿಣ ಆಫ್ರಿಕಾವನ್ನು 7 ರನ್‌ಗಳಿಂದ ಸೋಲಿಸುವ ಮೂಲಕ ಭಾರತ 17 ವರ್ಷಗಳ ಬಳಿಕ ಟಿ20 ವಿಶ್ವಕಪ್ ಟ್ರೋಫಿ ಎತ್ತಿಹಿಡಿದಿತ್ತು.


ಇತ್ತೀಚಿನ ಸಂದರ್ಶನವೊಂದರಲ್ಲಿ, ಕುಲ್ದೀಪ್ ಅವರು ತಮ್ಮ ಮದುವೆಯ ಬಗ್ಗೆ ಮಾತನಾಡಿದ್ದಾರೆ. “ಶೀಘ್ರದಲ್ಲೇ ಸಂತೋಷದ ಸುದ್ದಿಯನ್ನು ನೀಡುತ್ತೇನೆ. ಆದರೆ ಆಕೆ ಬಾಲಿವುಡ್ ನಟಿಯಲ್ಲ. ನನ್ನನ್ನು ಮತ್ತು ನನ್ನ ಕುಟುಂಬವನ್ನು ಚೆನ್ನಾಗಿ ನೋಡಿಕೊಳ್ಳುವವಳು” ಎಂದು ಹೇಳಿದ್ದಾರೆ.


ಇದನ್ನೂ ಓದಿ:  ಮನೆಯಂಗಳದಲ್ಲಿ ಈ ಹೂವಿನ ಗಿಡ ಅಪ್ಪಿತಪ್ಪಿಯೂ ಬೆಳೆಸಬೇಡಿ… ಹಾವುಗಳು ಬರುತ್ತೆ!


ಅಂದಹಾಗೆ ಕುಲ್ದೀಪ್ ಇತ್ತೀಚೆಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಲಕ್ನೋದ ಅವರ ಅಧಿಕೃತ ನಿವಾಸದಲ್ಲಿ ಭೇಟಿಯಾಗಿದ್ದರು. ಈ ಬಗ್ಗೆ ಎಕ್ಸ್‌’ನಲ್ಲಿ ಪೋಸ್ಟ್‌ ಶೇರ್ ಮಾಡಿಕೊಂಡಿರುವ ಸಿಎಂ ಆದಿತ್ಯನಾಥ್, "ಇಂದು ಟಿ20 ವಿಶ್ವಕಪ್ ಗೆದ್ದ ಭಾರತ ಕ್ರಿಕೆಟ್ ತಂಡದ ಸದಸ್ಯ ಕುಲ್ದೀಪ್ ಯಾದವ್ ಅವರನ್ನು ಸೌಜನ್ಯಯುತವಾಗಿ ಭೇಟಿ ಮಾಡಿದ್ದೇವೆ" ಎಂದು ಹೇಳಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ