“ಅವ ಇನ್ನೂ ಮಗು… ಮೊದಲು ಕಿತ್ತೊಗೆಯಿರಿ”- MI ನಾಯಕ ಹಾರ್ದಿಕ್ ಪಾಂಡ್ಯ ವಿರುದ್ಧ ಫ್ಯಾನ್ಸ್ ಆಕ್ರೋಶ!

Fans Outrage against Hardik Pandya: ಇದೀಗ ಟೂರ್ನಿಯ ಆರಂಭದಿಂದ ಆಡಿರುವ ಮೂರು ಪಂದ್ಯಗಳಲ್ಲೂ ಮುಂಬೈ ಸೋತಿದೆ. ಈ ಕಾರಣಕ್ಕೆ ಚ. ಸೋಷಿಯಲ್ ಮೀಡಿಯಾದಲ್ಲಿ ಹಲವು ಪೋಸ್ಟ್’ಗಳು ಕೂಡ ವೈರಲ್ ಆಗುತ್ತಿದ್ದು, ಮುಂಬೈ ಇಂಡಿಯನ್ಸ್ ಅಭಿಮಾನಿಗಳು ಹಾರ್ದಿಕ್ ಅವರನ್ನು ನಾಯಕತ್ವದಿಂದ ತೆಗೆದುಹಾಕುವ ಬಗ್ಗೆ ಮಾತನಾಡುತ್ತಿದ್ದಾರೆ.

Written by - Bhavishya Shetty | Last Updated : Apr 2, 2024, 02:54 PM IST
    • ಐಪಿಎಲ್ 2024 ಮುಂಬೈ ಇಂಡಿಯನ್ಸ್‌’ಗೆ ಉತ್ತಮವಾಗಿಲ್ಲ
    • ಆಡಿರುವ ಮೂರು ಪಂದ್ಯಗಳಲ್ಲೂ ಮುಂಬೈ ಸೋತಿದೆ
    • ಹಾರ್ದಿಕ್ ಪಾಂಡ್ಯ ಅಭಿಮಾನಿಗಳು ಕೆಂಗಣ್ಣಿಗೆ ಗುರಿಯಾಗಿದ್ದಾರೆ
“ಅವ ಇನ್ನೂ ಮಗು… ಮೊದಲು ಕಿತ್ತೊಗೆಯಿರಿ”- MI ನಾಯಕ ಹಾರ್ದಿಕ್ ಪಾಂಡ್ಯ ವಿರುದ್ಧ ಫ್ಯಾನ್ಸ್ ಆಕ್ರೋಶ! title=
Hardik Pandya

Fans Outrage against Hardik Pandya: ಐಪಿಎಲ್ 2024 ಮುಂಬೈ ಇಂಡಿಯನ್ಸ್‌’ಗೆ ಉತ್ತಮವಾಗಿಲ್ಲ ಎಂದೇ ಹೇಳಬಹುದು. ಪಂದ್ಯಾವಳಿಯ ಆರಂಭಕ್ಕೂ ಮುನ್ನ ಮ್ಯಾನೇಜ್‌ಮೆಂಟ್ ರೋಹಿತ್ ಶರ್ಮಾ ಅವರ ದಲಾಗಿ, ತಂಡದ ಹೊಸ ನಾಯಕರಾಗಿ ಹಾರ್ದಿಕ್ ಪಾಂಡ್ಯ ಅವರನ್ನು ನೇಮಿಸಿತು. ಈ ಬೆಳವಣಿಗೆ ಅಭಿಮಾನಿಗಳ ಆಕ್ರೋಶಕ್ಕೂ ಕಾರಣವಾಗಿತ್ತು.

ಇದನ್ನೂ ಓದಿ: ಹಾರ್ದಿಕ್ ಪಾಂಡ್ಯ ಐಪಿಎಲ್‌ ಪಯಣ! MI ತಂಡಕ್ಕೆ ಮರಳಿದ ಕ್ರಿಕೇಟಿಗನ ಸಂಭಾವನೆ ಎಷ್ಟು ಗೊತ್ತೇ?

ಇದೀಗ ಟೂರ್ನಿಯ ಆರಂಭದಿಂದ ಆಡಿರುವ ಮೂರು ಪಂದ್ಯಗಳಲ್ಲೂ ಮುಂಬೈ ಸೋತಿದೆ. ಈ ಕಾರಣಕ್ಕೆ ಚ. ಸೋಷಿಯಲ್ ಮೀಡಿಯಾದಲ್ಲಿ ಹಲವು ಪೋಸ್ಟ್’ಗಳು ಕೂಡ ವೈರಲ್ ಆಗುತ್ತಿದ್ದು, ಮುಂಬೈ ಇಂಡಿಯನ್ಸ್ ಅಭಿಮಾನಿಗಳು ಹಾರ್ದಿಕ್ ಅವರನ್ನು ನಾಯಕತ್ವದಿಂದ ತೆಗೆದುಹಾಕುವ ಬಗ್ಗೆ ಮಾತನಾಡುತ್ತಿದ್ದಾರೆ.

ಮುಂಬೈ ಇಂಡಿಯನ್ಸ್ ಕಳಪೆ ಪ್ರದರ್ಶನ

ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಮುಂಬೈ ಇಂಡಿಯನ್ಸ್ ಕಳಪೆ ಪ್ರದರ್ಶನ ತೋರುತ್ತಿದೆ. ತಂಡವು ಇಲ್ಲಿಯವರೆಗೆ ಆಡಿದ 3 ಪಂದ್ಯಗಳಲ್ಲಿ ಮೂರನ್ನೂ ಸೋತಿದ್ದು, 0 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ ನಿಗದಿತ 20 ಓವರ್‌’ಗಳಲ್ಲಿ ಕೇವಲ 125 ರನ್ ಗಳಿಸಿತ್ತು. ಇದಾದ ನಂತರ ಹಾರ್ದಿಕ್ ಪಾಂಡ್ಯ ಬಗ್ಗೆ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಐಪಿಎಲ್ 2024 ರ ಮೊದಲ ಪಂದ್ಯದಿಂದಲೂ ಹಾರ್ದಿಕ್ ಪಾಂಡ್ಯ ತೀವ್ರ ಟೀಕೆಗೆ ಗುರಿಯಾಗಿದ್ದಾರೆ. ಅಹಮದಾಬಾದ್‌ನಲ್ಲಿ ನಡೆದ ಗುಜರಾತ್ ವಿರುದ್ಧದ ಮೊದಲ ಪಂದ್ಯದಲ್ಲಿ ಟಾಸ್ ವೇಳೆ ಅವರ ವಿರುದ್ಧ ಭಾರೀ ಸದ್ದು ಕೇಳಿಬಂದಿತ್ತು. ಅದರ ನಂತರದ ಪಂದ್ಯದ ಸಂದರ್ಭದಲ್ಲೂ ಇದೇ ರೀತಿಯ ಬೆಳವಣಿಗೆ ನೋಡಲಾಯಿತು. ಇದೀಗ ರಾಜಸ್ಥಾನ ವಿರುದ್ಧದ ಸೋಲಿನ ಬಳಿಕ ಅಭಿಮಾನಿಗಳು ಹಾರ್ದಿಕ್ ಮೇಲೆ ಕೋಪಗೊಂಡಿದ್ದಾರೆ.

ಇದನ್ನೂ ಓದಿ: Watch: ಮ್ಯಾಚ್ ವಿನ್ನಿಂಗ್ ಪ್ರದರ್ಶನ ತೋರಿದ ಮಗ ರಿಯಾನ್ ಪರಾಗ್ ಮೇಲೆ ತಾಯಿಯ ಪ್ರೀತಿಯ ಸುರಿಮಳೆ

ಸೋಲಿನ ಬಗ್ಗೆ ಹಾರ್ದಿಕ್ ಹೇಳಿದ್ದೇನು?

ಪಂದ್ಯದ ನಂತರ ಮಾತನಾಡಿದ ಹಾರ್ದಿಕ್, “ನಾವು ಬಯಸಿದ ರೀತಿಯಲ್ಲಿ ಪ್ರಾರಂಭಿಸಲಿಲ್ಲ. 150 ಅಥವಾ 160 ತಲುಪಬಹುದು ಎಂದು ಭಾವಿಸಿದ್ದೆ. ಆದರೆ ನನ್ನ ವಿಕೆಟ್ ಪಂದ್ಯದ ಸ್ಥಿತಿಯನ್ನೇ ಬದಲಾಯಿಸಿತು” ಎಂದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News