Farmers Protest: ತಂಡದ ಮೀಟಿಂಗ್ ನಲ್ಲಿ ರೈತರ ಹೋರಾಟದ ಬಗ್ಗೆ ಚರ್ಚಿಸಲಾಗಿದೆ ಎಂದ ಕೊಹ್ಲಿ

ಭಾರತೀಯ ಕ್ರಿಕೆಟ್ ನಾಯಕ ವಿರಾಟ್ ಕೊಹ್ಲಿ ಗುರುವಾರ ಹೊಸ ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ರೈತರ ಪ್ರತಿಭಟನೆ ವಿಚಾರವು ತಮ್ಮ ತಂಡದ ಸಭೆಯಲ್ಲಿ ಚರ್ಚೆಗೆ ಬಂದಿದ್ದು, ಅಲ್ಲಿ ಎಲ್ಲರೂ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ ಎಂದು ಹೇಳಿದ್ದಾರೆ.

Last Updated : Feb 4, 2021, 06:01 PM IST
  • ದೇಶದಲ್ಲಿ ಇರುವ ಯಾವುದೇ ಸಮಸ್ಯೆ, ನಾವು ಅದರ ಬಗ್ಗೆ ಮಾತನಾಡುತ್ತೇವೆ ಮತ್ತು ಪ್ರತಿಯೊಬ್ಬರೂ ಅವರು ಈ ವಿಷಯದ ಬಗ್ಗೆ ಏನು ಹೇಳಬೇಕೆಂದು ವ್ಯಕ್ತಪಡಿಸಿದ್ದಾರೆ.
  • ಭಿನ್ನಾಭಿಪ್ರಾಯಗಳ ಈ ಸಮಯದಲ್ಲಿ ನಾವೆಲ್ಲರೂ ಒಗ್ಗಟ್ಟಾಗಿರಬೇಕು. ರೈತರು ನಮ್ಮ ದೇಶದ ಅವಿಭಾಜ್ಯ ಅಂಗವಾಗಿದ್ದಾರೆ ಮತ್ತು ಶಾಂತಿಯಿಂದ ಒಟ್ಟಾಗಿ ಮುಂದುವರಿದಾಗ ಎಲ್ಲಾ ಪಕ್ಷಗಳ ನಡುವೆ ಸೌಹಾರ್ದಯುತ ಪರಿಹಾರ ಸಿಗುತ್ತದೆ.
Farmers Protest: ತಂಡದ ಮೀಟಿಂಗ್ ನಲ್ಲಿ ರೈತರ ಹೋರಾಟದ ಬಗ್ಗೆ ಚರ್ಚಿಸಲಾಗಿದೆ ಎಂದ ಕೊಹ್ಲಿ title=

ನವದೆಹಲಿ: ಭಾರತೀಯ ಕ್ರಿಕೆಟ್ ನಾಯಕ ವಿರಾಟ್ ಕೊಹ್ಲಿ ಗುರುವಾರ ಹೊಸ ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ರೈತರ ಪ್ರತಿಭಟನೆ ವಿಚಾರವು ತಮ್ಮ ತಂಡದ ಸಭೆಯಲ್ಲಿ ಚರ್ಚೆಗೆ ಬಂದಿದ್ದು, ಅಲ್ಲಿ ಎಲ್ಲರೂ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ ಎಂದು ಹೇಳಿದ್ದಾರೆ.

ಚೆನ್ನೈನಲ್ಲಿ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲು ಮಾಧ್ಯಮಗಳೊಂದಿಗೆ ಆನ್‌ಲೈನ್‌ನಲ್ಲಿ ಮಾತುಕತೆಯಲ್ಲಿ ಈ ವಿಚಾರವನ್ನು ತಿಳಿಸಿದ್ದಾರೆ.ಆದರೆ ಕೊಹ್ಲಿ (Virat Kohli) ಸಂಭಾಷಣೆಯ ವಿವರಗಳನ್ನು ಬಹಿರಂಗಪಡಿಸಿಲ್ಲ.

"ದೇಶದಲ್ಲಿ ಇರುವ ಯಾವುದೇ ಸಮಸ್ಯೆ, ನಾವು ಅದರ ಬಗ್ಗೆ ಮಾತನಾಡುತ್ತೇವೆ ಮತ್ತು ಪ್ರತಿಯೊಬ್ಬರೂ ಅವರು ಈ ವಿಷಯದ ಬಗ್ಗೆ ಏನು ಹೇಳಬೇಕೆಂದು ವ್ಯಕ್ತಪಡಿಸಿದ್ದಾರೆ.ತಂಡದ ಸಭೆಯಲ್ಲಿ ನಾವು ಅದರ ಬಗ್ಗೆ ಸಂಕ್ಷಿಪ್ತವಾಗಿ ಮಾತನಾಡಿದ್ದೇವೆ ಮತ್ತು ನಂತರ ನಾವು ತಂಡದ ಯೋಜನೆಗಳನ್ನು ಚರ್ಚಿಸುತ್ತಿದ್ದೇವೆ"ಎಂದು ಕೊಹ್ಲಿ ಹೇಳಿದ್ದಾರೆ.

ಅಂತಾರಾಷ್ಟ್ರೀಯ ಪಾಪ್ ತಾರೆ ರಿಹಾನ್ನಾ ಮತ್ತು ಹವಾಮಾನ ಕಾರ್ಯಕರ್ತೆ ಗ್ರೆಟಾ ಥನ್‌ಬರ್ಗ್ ಅವರು ರೈತರ ಪ್ರತಿಭಟನೆ (Farmers Protest) ಮತ್ತು ಅಧಿಕಾರಿಗಳು ನಿಗ್ರಹಿಸುವ ಪ್ರಯತ್ನಗಳನ್ನು ಎತ್ತಿ ತೋರಿಸಿದ ನಂತರ ಸಾಮಾಜಿಕ ಮಾಧ್ಯಮಗಳಲ್ಲಿ ಬುಧವಾರ ಸರ್ಕಾರ ಬೆಂಬಲಿತ ಪುಷ್‌ಬ್ಯಾಕ್‌ಗೆ ಸೇರಿದ ಭಾರತೀಯ ಪ್ರಸಿದ್ಧ ವ್ಯಕ್ತಿಗಳಲ್ಲಿ ವಿರಾಟ್ ಕೊಹ್ಲಿ ಸೇರಿದ್ದಾರೆ.

"ಭಿನ್ನಾಭಿಪ್ರಾಯಗಳ ಈ ಸಮಯದಲ್ಲಿ ನಾವೆಲ್ಲರೂ ಒಗ್ಗಟ್ಟಾಗಿರಬೇಕು. ರೈತರು ನಮ್ಮ ದೇಶದ ಅವಿಭಾಜ್ಯ ಅಂಗವಾಗಿದ್ದಾರೆ ಮತ್ತು ಶಾಂತಿಯಿಂದ ಒಟ್ಟಾಗಿ ಮುಂದುವರಿದಾಗ ಎಲ್ಲಾ ಪಕ್ಷಗಳ ನಡುವೆ ಸೌಹಾರ್ದಯುತ ಪರಿಹಾರ ಸಿಗುತ್ತದೆ ಎಂದು ಅವರು ಬರೆದಿದ್ದರು.

ನೂತನ ಕೃಷಿ ಕಾನೂನುಗಳನ್ನು ರದ್ದುಪಡಿಸಬೇಕೆಂದು ಒತ್ತಾಯಿಸಿ ಸಾವಿರಾರು ರೈತರು, ಹೆಚ್ಚಾಗಿ ಪಂಜಾಬ್, ಹರಿಯಾಣ ಮತ್ತು ಪಶ್ಚಿಮ ಉತ್ತರ ಪ್ರದೇಶದ ಎರಡು ತಿಂಗಳಿನಿಂದ ದೆಹಲಿಯ ಗಡಿಯಲ್ಲಿ ಧರಣಿ ಸತ್ಯಾಗ್ರಹ ನಡೆಸಿದ್ದಾರೆ.

Trending News