Former Team India fielding coach R Sridhar: ರೋಹಿತ್ ಶರ್ಮಾ ನಂತರ ಟೀಂ ಇಂಡಿಯಾದ ಏಕದಿನ ಮತ್ತು ಟೆಸ್ಟ್ ನಾಯಕ ಯಾರು ಎಂಬುದೇ ದೊಡ್ಡ ಪ್ರಶ್ನೆಯಾಗಿದೆ. ಈ ಪ್ರಶ್ನೆಗೆ ಟೀಂ ಇಂಡಿಯಾದ ಮಾಜಿ ಫೀಲ್ಡಿಂಗ್ ಕೋಚ್ ಆರ್ ಶ್ರೀಧರ್ ಹೇಳಿಕೆ ನೀಡಿದ್ದಾರೆ. ಶುಭ್ಮನ್ ಗಿಲ್ ಟೀಂ ಇಂಡಿಯಾದ ಮುಂದಿನ ನಾಯಕರಾಗಲಿದ್ದಾರೆ ಎಂದು ಶ್ರೀಧರ್ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಕೊಹ್ಲಿ ಜೊತೆಗಿನ ಮದುವೆಗೂ ಮುನ್ನ ನಾನು ತಾಯಿಯಾಗಿದ್ದೆ...‌ ಇದಕ್ಕೆಲ್ಲಾ ಕಾರಣವಾಗಿದ್ದು ಆ ನಟ! ಅನುಷ್ಕಾ ಶರ್ಮಾ ಸೆನ್ಸೇಷನಲ್‌ ಹೇಳಿಕೆ ವೈರಲ್


ಅವರ ಪ್ರಕಾರ, ರೋಹಿತ್ ನಿವೃತ್ತಿಯ ನಂತರ, ಶುಭಮನ್ ಗಿಲ್‌ʼಗೆ ಏಕದಿನ ಮತ್ತು ಟೆಸ್ಟ್ ತಂಡದ ನಾಯಕತ್ವವನ್ನು ನೀಡಲಾಗುವುದು. ಇದರ ಹಿಂದಿನ ಕಾರಣವನ್ನೂ ಶ್ರೀಧರ್ ನೀಡಿದ್ದಾರೆ.


ಆರ್ ಶ್ರೀಧರ್ ಹಿಂದೂಸ್ತಾನ್ ಟೈಮ್ಸ್ ಜೊತೆ ಮಾತನಾಡುತ್ತಾ, "ಶುಭ್ಮನ್ ಗಿಲ್ ಎಲ್ಲಾ ಫಾರ್ಮ್ಯಾಟ್‌;ಗಳ ಆಟಗಾರ ಮತ್ತು ಅವರು ರೋಹಿತ್ ಶರ್ಮಾ ಉತ್ತರಾಧಿಕಾರಿಯಾಗುತ್ತಾರೆ. 2027ರ ವಿಶ್ವಕಪ್ ಬಳಿಕ ಶುಭಮನ್ ಗಿಲ್ ಟೀಂ ಇಂಡಿಯಾದ ಎಲ್ಲಾ ಮೂರು ಸ್ವರೂಪಗಳ ನಾಯಕರಾಗಲಿದ್ದಾರೆ" ಎಂದು ಶ್ರೀಧರ್ ಭರವಸೆ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ರಾತ್ರಿ ಮಲಗುವಾಗ ಮೊಬೈಲ್‌ ಎಷ್ಟು ದೂರ ಇಟ್ಟುಕೊಳ್ಳಬೇಕು? ದಿಂಬಿನ ಬಳಿ ಇಟ್ಟರೆ ಆಗುವ ಸಮಸ್ಯೆಗಳೇನು?


ಟೀಂ ಇಂಡಿಯಾ ಈಗಾಗಲೇ ಒಂದು ರೀತಿಯಲ್ಲಿ ಶುಭ್ಮನ್ ಗಿಲ್ ಅವರನ್ನು ಉತ್ತರಾಧಿಕಾರಿ ಎಂದು ಘೋಷಿಸಿದೆ. ಶ್ರೀಲಂಕಾ ಸರಣಿಗೂ ಮುನ್ನ ಗಿಲ್ ಅವರನ್ನು ಟೀಂ ಇಂಡಿಯಾದ ಏಕದಿನ ಮತ್ತು ಟಿ20 ಉಪನಾಯಕರನ್ನಾಗಿ ಮಾಡಲಾಗಿತ್ತು. ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅವರನ್ನು ಉಪನಾಯಕನನ್ನಾಗಿ ಮಾಡುವ ವರದಿಗಳೂ ಇವೆ. ಮುಂದೇನಾಗುತ್ತದೋ ಕಾದು ನೋಡಬೇಕಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ