ನವದೆಹಲಿ: ಮ್ಯಾಂಚೆಸ್ಟರ್ ನ ಓಲ್ಡ್ ಟ್ರಾಫೋರ್ಡ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ನೀಡಿದ 240 ರನ್ ಗುರಿ ಬೆನ್ನತ್ತಿದ ಭಾರತ ತಂಡ 5 ರನ್ ಗಳ ಅಂತರದಲ್ಲಿ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.   



COMMERCIAL BREAK
SCROLL TO CONTINUE READING

ಭಾರತದ ಆರಂಭಿಕ ದಾಂಡಿಗರಾದ ರೋಹಿತ್ ಶರ್ಮಾ, ಕೆ.ಎಲ್.ರಾಹುಲ್, ವಿರಾಟ್ ಕೊಹ್ಲಿ ಕ್ರಮವಾಗಿ 1,1,1 ರನ್ ಗಳಿಸಿ ಔಟ್ ಆಗುವ ಮೂಲಕ ಭಾರತ ಈಗ ಆರಂಭಿಕ ಆಘಾತಕ್ಕೆ ಸಿಲುಕಿದೆ. ನ್ಯೂಜಿಲೆಂಡ್ ತಂಡದ ಮ್ಯಾಟ್ ಹೆನ್ರಿ ಎರಡು ವಿಕೆಟ್ ಗಳನ್ನೂ ತೆಗೆದುಕೊಳ್ಳುವ ಮೂಲಕ ಭಾರತದ ಆರಂಭಿಕ ಬ್ಯಾಟಿಂಗ್ ಬೆನ್ನೆಲುಬು ಮುರಿದರು.  


ಈಗ ಬಂದಿರುವ ವರದಿಗಳ ಪ್ರಕಾರ ಭಾರತ 9 ಓವರ್ ಗಳಲ್ಲಿ ಮೂರು ವಿಕೆಟ್ ನಷ್ಟಕ್ಕೆ 19 ರನ್ ಗಳಿಸಿದೆ