)
England vs India: ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯ ಜುಲೈ 23ರಿಂದ ಮ್ಯಾಂಚೆಸ್ಟರ್ನ ಓಲ್ಡ್ ಟ್ರಾಫರ್ಡ್ ಮೈದಾನದಲ್ಲಿ ನಡೆಯಲಿದೆ. ಆದರೆ ಈ ಪಂದ್ಯಕ್ಕೂ ಮೊದಲು ಟೀಂ ಇಂಡಿಯಾ ದೊಡ್ಡ ಸಮಸ್ಯೆಯನ್ನು ಎದುರಿಸಿದೆ. ಭಾರತೀಯ ತಂಡದ ಇಬ್ಬರು ಪ್ರಮುಖ ಆಟಗಾರರು ಗಾಯದಿಂದ ಹೊರಗುಳಿದಿದ್ದಾರೆ. ಇದು ಆಡುವ ಹನ್ನೊಂದರ ಕಾರ್ಯತಂತ್ರದ ಮೇಲೂ ಪರಿಣಾಮ ಬೀರಬಹುದು.
ಭಾರತದ ಆಲ್ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಗಾಯದ ಕಾರಣದಿಂದ ಉಳಿದ ಎರಡು ಟೆಸ್ಟ್ ಪಂದ್ಯಗಳಿಂದ ಹೊರಗುಳಿದಿದ್ದಾರೆ. ಅವರು ಭಾರತಕ್ಕೆ ಉದಯೋನ್ಮುಖ ಆಲ್ರೌಂಡ್ ಆಯ್ಕೆಯಾಗಿದ್ದರು, ಅವರು ಬಾಲ್ ಮತ್ತು ಬ್ಯಾಟಿಂಗ್ ಎರಡರಲ್ಲೂ ಕೊಡುಗೆ ನೀಡುವ ಸಾಮರ್ಥ್ಯವನ್ನು ಹೊಂದಿದ್ದಾರೆ. ರೆಡ್ಡಿ ಅವರ ಗಾಯದ ಸಮಸ್ಯೆ ಇದೀಗ ಟೀಂ ಇಂಡಿಯಾದ ಕಾರ್ಯತಂತ್ರದ ಮೇಲೆ ಪರಿಣಾಮ ಬೀರಿದೆ. ವಿಶೇಷವಾಗಿ ಕೆಳ ಕ್ರಮಾಂಕದಲ್ಲಿ ಬ್ಯಾಟಿಂಗ್ ಮತ್ತು ಮಧ್ಯಮ ಓವರ್ಗಳಲ್ಲಿ ಬೌಲಿಂಗ್ಗೆ ಸಂಬಂಧಿಸಿದಂತೆ ಇದು ತಂಡಕ್ಕೆ ದೊಡ್ಡ ಹೊಡೆತವಾದಂತಾಗಿದೆ.
ನಾಲ್ಕನೇ ಟೆಸ್ಟ್ನಿಂದ ಅರ್ಶ್ದೀಪ್ ಸಿಂಗ್ ಔಟ್!
ವೇಗದ ಬೌಲರ್ ಅರ್ಶ್ದೀಪ್ ಸಿಂಗ್ ಕೂಡ ಗಾಯದ ಕಾರಣದಿಂದ ಮ್ಯಾಂಚೆಸ್ಟರ್ ಟೆಸ್ಟ್ನಲ್ಲಿ ಆಡಲು ಸಾಧ್ಯವಾಗುವುದಿಲ್ಲ. ಅರ್ಶ್ದೀಪ್ಗೆ ಈ ಸರಣಿಯಲ್ಲಿ ಇದುವರೆಗೆ ಯಾವುದೇ ಪಂದ್ಯವನ್ನು ಆಡಲು ಅವಕಾಶ ಸಿಕ್ಕಿಲ್ಲ. ಆದರೆ ನಾಲ್ಕನೇ ಟೆಸ್ಟ್ನಲ್ಲಿ ಅವರಿಗೆ ಅವಕಾಶ ಸಿಗುವ ನಿರೀಕ್ಷೆಯಿತ್ತು. ಈಗ ಅವರನ್ನು ಹೊರಗಿಡುವುದು ಟೀಂ ಇಂಡಿಯಾಕ್ಕೆ ದೊಡ್ಡ ಬಿಕ್ಕಟ್ಟನ್ನು ಸೃಷ್ಟಿಸಿದೆ. ಈಗ ನಾಲ್ಕನೇ ಟೆಸ್ಟ್ನಲ್ಲಿ ಇಂಗ್ಲೆಂಡ್ ವಿರುದ್ಧ ಸರಣಿಯನ್ನು ಸಮಬಲಗೊಳಿಸುವ ಸವಾಲು ಭಾರತಕ್ಕೆ ಇದೆ. ಆದರೆ ಬಲಿಷ್ಠ ಮತ್ತು ಸಮತೋಲಿತ ತಂಡವನ್ನು ಕಣಕ್ಕಿಳಿಸುವುದು ತಂಡಕ್ಕೆ ಕಠಿಣ ಪರೀಕ್ಷೆಯಾಗಿದೆ.
ಬಿಸಿಸಿಐ ಹೇಳಿಕೆ
ನಿತೀಶ್ ಕುಮಾರ್ ರೆಡ್ಡಿ ಮತ್ತು ಅರ್ಶ್ದೀಪ್ ಸಿಂಗ್ ಅವರನ್ನು ಕೈಬಿಟ್ಟಿರುವ ಬಗ್ಗೆ ಬಿಸಿಸಿಐ ಹೇಳಿಕೆ ನೀಡಿದ್ದು, ಆಲ್ ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಅವರ ಎಡ ಮೊಣಕಾಲಿನಲ್ಲಿ ಗಾಯವಾಗಿದೆ. ಈ ಕಾರಣದಿಂದ ಅವರು ಉಳಿದ ಎರಡು ಟೆಸ್ಟ್ ಪಂದ್ಯಗಳಿಂದ ಹೊರಗುಳಿದಿದ್ದಾರೆ. ನಿತೀಶ್ ಶೀಘ್ರದಲ್ಲೇ ಭಾರತಕ್ಕೆ ಮರಳುವ ನಿರೀಕ್ಷೆಯಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ: ಭಾರತ-ಇಂಗ್ಲೆಂಡ್ ನಡುವೇ 5ನೇ ಟೆಸ್ಟ್ ಪಂದ್ಯ
ಮ್ಯಾಂಚೆಸ್ಟರ್ನಲ್ಲಿ ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಿಂದ ಅರ್ಶ್ದೀಪ್ ಸಿಂಗ್ ಅವರನ್ನು ಹೊರಗಿಡಲಾಗಿದೆ. ಬೆಕೆನ್ಹ್ಯಾಮ್ನಲ್ಲಿ ತರಬೇತಿ ಅವಧಿಯಲ್ಲಿ ನೆಟ್ಸ್ನಲ್ಲಿ ಬೌಲಿಂಗ್ ಮಾಡುವಾಗ ಅವರ ಎಡಗೈ ಹೆಬ್ಬೆರಳಿಗೆ ಗಾಯವಾಗಿದೆ. ಬಿಸಿಸಿಐ ವೈದ್ಯಕೀಯ ತಂಡವು ಅವರ ಫಿಟ್ನೆಸ್ ಅನ್ನು ಮೇಲ್ವಿಚಾರಣೆ ಮಾಡುತ್ತಿದೆ. ಇಬ್ಬರು ಆಟಗಾರರ ಗಾಯದಿಂದ ಅನ್ಶುಲ್ ಕಾಂಬೋಜ್ ಅವರನ್ನು ತಂಡದಲ್ಲಿ ಸೇರಿಸಲಾಗಿದೆ. ಕಾಂಬೋಜ್ ಮ್ಯಾಂಚೆಸ್ಟರ್ನಲ್ಲಿ ತಂಡವನ್ನು ಸೇರಿಕೊಂಡಿದ್ದಾರೆ. ನಾಲ್ಕನೇ ಟೆಸ್ಟ್ ಪಂದ್ಯವು ಜುಲೈ 23, 2025ರಂದು ಪ್ರಾರಂಭವಾಗಲಿದೆ.
ನಾಲ್ಕನೇ ಟೆಸ್ಟ್ಗೆ ಟೀ ಇಂಡಿಯಾ ಸ್ಕ್ವಾಡ್ ಈ ರೀತಿ ಇದೆ: ಶುಭಮನ್ ಗಿಲ್ (ನಾಯಕ), ರಿಷಭ್ ಪಂತ್ (ಉಪನಾಯಕ ಮತ್ತು ವಿಕೆಟ್ಕೀಪರ್), ಯಶಸ್ವಿ ಜೈಸ್ವಾಲ್, ಕೆ.ಎಲ್.ರಾಹುಲ್, ಸಾಯಿ ಸುದರ್ಶನ್, ಅಭಿಮನ್ಯು ಈಶ್ವರನ್, ಕರುಣ್ ನಾಯರ್, ರವೀಂದ್ರ ಜಡೇಜಾ, ಧ್ರುವ ಜುರೆಲ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಆಕಾಶ್ ದೀಪ್, ಕುಲದೀಪ್ ಯಾದವ್, ಅಂಶುಲ್ ಕಾಂಬೋಜ್.