IND vs ENG: 3 ಟೆಸ್ಟ್ ಪಂದ್ಯಗಳಿಗೆ ಟೀಂ ಇಂಡಿಯಾ ಪ್ರಕಟ: ವಿರಾಟ್ ಜೊತೆ ಈತನೂ ಹೊರಕ್ಕೆ! ಕೊಹ್ಲಿ ಸ್ಥಾನದಲ್ಲಿ ಹೊಸ ಆಟಗಾರನಿಗೆ ಅವಕಾಶ

Team India for Test Series: BCCI ಫೆಬ್ರವರಿ 10 ರಂದು ಸರಣಿಯ ಕೊನೆಯ ಮೂರು ಟೆಸ್ಟ್ ಪಂದ್ಯಗಳಿಗೆ ತಂಡವನ್ನು ಪ್ರಕಟಿಸಿದೆ. ಈ ಅವಧಿಯಲ್ಲಿ ಮೂರು ಟೆಸ್ಟ್ ಪಂದ್ಯಗಳಿಗೆ ಹೊಸ ಆಟಗಾರನನ್ನು ಸೇರಿಸಿಕೊಳ್ಳಲಾಗಿದೆ. ಬಿಹಾರದ ವೇಗದ ಬೌಲರ್ ಆಕಾಶ್ ದೀಪ್ ಮೊದಲ ಬಾರಿಗೆ ಟೀಂ ಇಂಡಿಯಾಕ್ಕೆ ಸೇರ್ಪಡೆಗೊಂಡಿದ್ದಾರೆ.

Written by - Bhavishya Shetty | Last Updated : Feb 10, 2024, 11:57 AM IST
    • ಟೆಸ್ಟ್ ಸರಣಿಯ ಉಳಿದ ಮೂರು ಪಂದ್ಯಗಳಿಗೆ ಟೀಂ ಇಂಡಿಯಾ ಪ್ರಕಟ
    • ವಿರಾಟ್ ಕೊಹ್ಲಿ ಸರಣಿಯ ಎಲ್ಲಾ ಮೂರು ಪಂದ್ಯಗಳಿಂದ ಹೊರಕ್ಕೆ
    • ಗಾಯದಿಂದಾಗಿ ಶ್ರೇಯಸ್ ಅಯ್ಯರ್ ಕೂಡ ಸರಣಿಗೆ ಅಲಭ್ಯ
IND vs ENG: 3 ಟೆಸ್ಟ್ ಪಂದ್ಯಗಳಿಗೆ ಟೀಂ ಇಂಡಿಯಾ ಪ್ರಕಟ: ವಿರಾಟ್ ಜೊತೆ ಈತನೂ ಹೊರಕ್ಕೆ! ಕೊಹ್ಲಿ ಸ್ಥಾನದಲ್ಲಿ ಹೊಸ ಆಟಗಾರನಿಗೆ ಅವಕಾಶ title=
India vs England India Squad

India vs England India Squad Final Three Tests: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಟೆಸ್ಟ್ ಸರಣಿಯ ಉಳಿದ ಮೂರು ಪಂದ್ಯಗಳಿಗೆ ಟೀಂ ಇಂಡಿಯಾವನ್ನು ಪ್ರಕಟಿಸಿದೆ. ವಿರಾಟ್ ಕೊಹ್ಲಿ ಸರಣಿಯ ಎಲ್ಲಾ ಮೂರು ಪಂದ್ಯಗಳಿಂದ ಹೊರಗುಳಿದಿದ್ದಾರೆ. ಇದಲ್ಲದೇ ಮೊದಲ ಪಂದ್ಯದಲ್ಲಿ ಗಾಯಗೊಂಡಿದ್ದ ಕೆಎಲ್ ರಾಹುಲ್ ಹಾಗೂ ರವೀಂದ್ರ ಜಡೇಜಾ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಜೊತೆಗೆ ಗಾಯದಿಂದಾಗಿ ಶ್ರೇಯಸ್ ಅಯ್ಯರ್ ಕೂಡ ಸಂಪೂರ್ಣ ಸರಣಿಯಿಂದ ಹೊರಗುಳಿದಿದ್ದಾರೆ. ಮೂರು ಟೆಸ್ಟ್ ಪಂದ್ಯಗಳಿಗೆ ತಂಡದಲ್ಲಿ ಹೊಸ ಆಟಗಾರನನ್ನು ಸೇರಿಸಿಕೊಳ್ಳಲಾಗಿದೆ.

ಇದನ್ನೂ ಓದಿ: 3 ಟೆಸ್ಟ್ ಪಂದ್ಯಕ್ಕೂ ವಿರಾಟ್ ಅಲಭ್ಯ: ಇದೇ ಕಾರಣಕ್ಕೆ ಹೆಸರು ಹಿಂತೆಗೆದುಕೊಂಡಿದ್ದಾರೆ ಕೊಹ್ಲಿ!

ಆಕಾಶ್ ದೀಪ್’ಗೆ ಅವಕಾಶ:

BCCI ಫೆಬ್ರವರಿ 10 ರಂದು ಸರಣಿಯ ಕೊನೆಯ ಮೂರು ಟೆಸ್ಟ್ ಪಂದ್ಯಗಳಿಗೆ ತಂಡವನ್ನು ಪ್ರಕಟಿಸಿದೆ. ಈ ಅವಧಿಯಲ್ಲಿ ಮೂರು ಟೆಸ್ಟ್ ಪಂದ್ಯಗಳಿಗೆ ಹೊಸ ಆಟಗಾರನನ್ನು ಸೇರಿಸಿಕೊಳ್ಳಲಾಗಿದೆ. ಬಿಹಾರದ ವೇಗದ ಬೌಲರ್ ಆಕಾಶ್ ದೀಪ್ ಮೊದಲ ಬಾರಿಗೆ ಟೀಂ ಇಂಡಿಯಾಕ್ಕೆ ಸೇರ್ಪಡೆಗೊಂಡಿದ್ದಾರೆ. ಇದಕ್ಕೂ ಮುನ್ನ ಆಕಾಶ್ ದೀಪ್ ಇಂಗ್ಲೆಂಡ್ ಲಯನ್ಸ್ ವಿರುದ್ಧ ಆಡುತ್ತಿದ್ದರು. ಇದೀಗ ಆಕಾಶ್ ಟೀಮ್ ಇಂಡಿಯಾದಲ್ಲಿ ಬ್ಯಾಕಪ್ ವೇಗದ ಬೌಲರ್ ಆಗಿ ಸೇರ್ಪಡೆಗೊಂಡಿದ್ದಾರೆ.

ಮೂರು ಟೆಸ್ಟ್ ಪಂದ್ಯಗಳಿಗೆ ಟೀಂ ಇಂಡಿಯಾ ಹೀಗಿದೆ:

ರೋಹಿತ್ ಶರ್ಮಾ (ನಾಯಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ಕೆಎಲ್ ರಾಹುಲ್, ರಜತ್ ಪಾಟಿದಾರ್, ಸರ್ಫರಾಜ್ ಖಾನ್, ಧ್ರುವ್ ಜುರೆಲ್ (WK), ಕೆಎಸ್ ಭರತ್ (WK), ಆರ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಆಕಾಶ್ ದೀಪ್.

ಸಂಪೂರ್ಣ ಟೆಸ್ಟ್ ಸರಣಿಯಿಂದ ವಿರಾಟ್ ಕೊಹ್ಲಿ ಔಟ್:

ವೈಯಕ್ತಿಕ ಕಾರಣಗಳಿಂದ ವಿರಾಟ್ ಕೊಹ್ಲಿ ಸರಣಿಯ ಉಳಿದ ಮೂರು ಪಂದ್ಯಗಳಿಂದ ಹೊರಗುಳಿಯಲಿದ್ದಾರೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ತಿಳಿಸಿದೆ. ವಿರಾಟ್ ಕೊಹ್ಲಿ ನಿರ್ಧಾರವನ್ನು ಬಿಸಿಸಿಐ ಸಂಪೂರ್ಣವಾಗಿ ಗೌರವಿಸುತ್ತದೆ. ಇದಲ್ಲದೇ ಕೆಎಲ್ ರಾಹುಲ್ ಮತ್ತು ರವೀಂದ್ರ ಜಡೇಜಾ ಪಾಲ್ಗೊಳ್ಳುವಿಕೆ ಕೂಡ ಬಿಸಿಸಿಐ ವೈದ್ಯಕೀಯ ತಂಡಕ್ಕೆ ಒಳಪಟ್ಟಿದೆ ಎಂದು ಹೇಳಿದೆ.

ಇದನ್ನೂ ಓದಿ: Darshan: ವಿವಾದಗಳ ಬಳಿಕ ಪತ್ನಿ ಮತ್ತು ಪುತ್ರನೊಂದಿಗೆ ಕಾಳಹಸ್ತಕ್ಕೆ ದರ್ಶನ್‌ ಭೇಟಿ!

ಹೈದರಾಬಾದ್ ಟೆಸ್ಟ್ ಪಂದ್ಯದ ವೇಳೆ ಕೆಎಲ್ ರಾಹುಲ್ ಮತ್ತು ರವೀಂದ್ರ ಜಡೇಜಾ ಗಾಯಗೊಂಡಿದ್ದರು. ಇದಾದ ನಂತರ ಈ ಇಬ್ಬರೂ ಆಟಗಾರರು ಎರಡನೇ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದರು. ಬಳಿಕ ಸರ್ಫರಾಜ್ ಖಾನ್ ಮತ್ತು ವಿಕೆಟ್ ಕೀಪರ್ ಬ್ಯಾಟ್ಸ್‌’ಮನ್ ಧ್ರುವ್ ಜುರೆಲ್ ಅವರನ್ನು ಎರಡನೇ ಟೆಸ್ಟ್ ಪಂದ್ಯಕ್ಕೆ ತಂಡದಲ್ಲಿ ಸೇರಿಸಲಾಯಿತು. ಇದೀಗ ಮುಂದಿನ ಮೂರು ಪಂದ್ಯಗಳಿಗೆ ಸರ್ಫರಾಜ್ ಮತ್ತು ಧ್ರುವ್ ಕೂಡ ತಂಡಕ್ಕೆ ಸೇರ್ಪಡೆಗೊಂಡಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News