ವಿಂಡೀಸ್ ವಿರುದ್ಧದ ಟೆಸ್ಟ್’ಗೆ ಆಯ್ಕೆಯಾದ್ರೂ Team Indiaದ ಈ 3 ಆಟಗಾರರಿಗೆ ಆಡುವ ಚ್ಯಾನ್ಸ್ ಸಿಗೋದು ಡೌಟ್!

cricket news: ವೆಸ್ಟ್ ಇಂಡೀಸ್‌ ನಲ್ಲಿ ಭಾರತ ತಂಡ 2 ಟೆಸ್ಟ್, 3 ODI ಮತ್ತು 5 T20 ಅಂತರಾಷ್ಟ್ರೀಯ ಪಂದ್ಯಗಳನ್ನು ಆಡಬೇಕಾಗಿದೆ. ಆದರೆ ಈ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಮೂವರು ಆಟಗಾರರಿಗೆ ಆಡುವ ಅವಕಾಶ ಸಿಗುವುದು ಅನುಮಾನವಾಗಿದೆ.

Written by - Bhavishya Shetty | Last Updated : Jul 10, 2023, 09:55 AM IST
    • ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿ
    • ಟೆಸ್ಟ್ ಸರಣಿಯನ್ನು ಗೆಲ್ಲುವುದು ಭಾರತಕ್ಕೆ ಬಹಳ ಮುಖ್ಯ
    • ಭಾರತ ತಂಡ 2 ಟೆಸ್ಟ್, 3 ODI ಮತ್ತು 5 T20 ಅಂತರಾಷ್ಟ್ರೀಯ ಪಂದ್ಯಗಳನ್ನು ಆಡಬೇಕಾಗಿದೆ
ವಿಂಡೀಸ್ ವಿರುದ್ಧದ ಟೆಸ್ಟ್’ಗೆ ಆಯ್ಕೆಯಾದ್ರೂ Team Indiaದ ಈ 3 ಆಟಗಾರರಿಗೆ ಆಡುವ ಚ್ಯಾನ್ಸ್ ಸಿಗೋದು ಡೌಟ್!  title=
test cricket

IND vs WI Test Cricket: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿಯು ಜುಲೈ 12 ರಿಂದ ಡೊಮಿನಿಕಾದಲ್ಲಿ ಪ್ರಾರಂಭವಾಗಲಿದೆ. ವೆಸ್ಟ್ ಇಂಡೀಸ್ ವಿರುದ್ಧದ ಈ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಗೆಲ್ಲುವುದು ಭಾರತಕ್ಕೆ ಬಹಳ ಮುಖ್ಯವಾಗಿದೆ, ಏಕೆಂದರೆ ಇದು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಚಕ್ರದ 2023-2025 ಭಾಗವಾಗಿದೆ.

ಇದನ್ನೂ ಓದಿ: 20 ವರ್ಷಗಳ ಬಳಿಕ ಈ ರಾಶಿಗೆ ಕೋಟ್ಯಾಧಿಪತಿ ಯೋಗ: ಉದ್ಯೋಗಿಗಳಿಗೆ ಬಡ್ತಿ- ಹೆಜ್ಜೆಹೆಜ್ಜೆಗೂ ಧನಲಕ್ಷ್ಮೀ ಜೊತೆ ನಿಲ್ಲುವಳು!

ವೆಸ್ಟ್ ಇಂಡೀಸ್‌ ನಲ್ಲಿ ಭಾರತ ತಂಡ 2 ಟೆಸ್ಟ್, 3 ODI ಮತ್ತು 5 T20 ಅಂತರಾಷ್ಟ್ರೀಯ ಪಂದ್ಯಗಳನ್ನು ಆಡಬೇಕಾಗಿದೆ. ಆದರೆ ಈ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಮೂವರು ಆಟಗಾರರಿಗೆ ಆಡುವ ಅವಕಾಶ ಸಿಗುವುದು ಅನುಮಾನವಾಗಿದೆ.  ವೆಸ್ಟ್ ಇಂಡೀಸ್ ವಿರುದ್ಧದ ಈ ಎರಡು ಪಂದ್ಯಗಳ ಸಂಪೂರ್ಣ ಟೆಸ್ಟ್ ಸರಣಿಯಲ್ಲಿ ಬೆಂಚ್ ಕಾಯಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

1. ಋತುರಾಜ್ ಗಾಯಕ್ವಾಡ್: ವೆಸ್ಟ್ ಇಂಡೀಸ್ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತದ ಬ್ಯಾಟ್ಸ್‌ಮನ್ ರಿತುರಾಜ್ ಗಾಯಕ್ವಾಡ್ ಗೆ ಆಡಲು ಅವಕಾಶ ಸಿಗುವುದಿಲ್ಲ ಎಂದು ಹೇಳಲಾಗುತ್ತಿದೆ. ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ ಮತ್ತು ಅಜಿಂಕ್ಯ ರಹಾನೆ ಟೀಮ್ ಇಂಡಿಯಾದ ಬ್ಯಾಟಿಂಗ್ ಲೈನಪ್‌ ಗೆ ಫಿಕ್ಸ್ ಆಗಿದ್ದಾರೆ. ಹೀಗಾಗಿ ಈ ಬ್ಯಾಟ್ಸ್‌ಮನ್‌ ಗೆ ಪ್ಲೇಯಿಂಗ್ ಇಲೆವೆನ್‌ ನಲ್ಲಿ ಸ್ಥಾನ ಸಿಗುವುದು ಡೌಟ್.

2. ಅಕ್ಷರ್ ಪಟೇಲ್: ವೆಸ್ಟ್ ಇಂಡೀಸ್ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾದ ಆಲ್ ರೌಂಡರ್ ಅಕ್ಷರ್ ಪಟೇಲ್‌ ಗೆ ಅವಕಾಶ ಸಿಗುವುದು ಕೊಂಚ ಕಷ್ಟ ಎನಿಸಿದೆ. ಈ ಟೆಸ್ಟ್ ಸರಣಿಗೆ ರವೀಂದ್ರ ಜಡೇಜಾ ಮತ್ತು ರವಿಚಂದ್ರನ್ ಅಶ್ವಿನ್ ಅವರಂತಹ ಮಾರಕ ಸ್ಪಿನ್ನರ್‌ ಗಳನ್ನು ಟೀಂ ಇಂಡಿಯಾ ಹೊಂದಿದೆ. ಹೀಗಿರುವಾಗ ಅಕ್ಷರ್ ಪಟೇಲ್ ವೆಸ್ಟ್ ಇಂಡೀಸ್ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಆಡುವ ಅವಕಾಶ ಪಡೆಯುವುದು ತುಂಬಾ ಕಷ್ಟ. ಈ ಸರಣಿಯಲ್ಲಿ ಅಕ್ಷರ್ ಪಟೇಲ್ ಬದಲಿಗೆ ರವೀಂದ್ರ ಜಡೇಜಾ ಮತ್ತು ರವಿಚಂದ್ರನ್ ಅಶ್ವಿನ್ ಅವರನ್ನು ಪ್ಲೇಯಿಂಗ್ XI ನಲ್ಲಿ ಸೇರಿಸಿಕೊಳ್ಳುವ ಸಂಭವ ಹೆಚ್ಚಿದೆ.

ಇದನ್ನೂ ಓದಿ: ಈ ರಾಶಿಯವರ ಅದೃಷ್ಟ ಬೆಳಗಿ ಸಂಪತ್ತು ವೃದ್ಧಿಸುವನು ಶುಕ್ರದೇವ: ಸೋಲು ಬಳಿಯೂ ಸುಳಿಯದಂತೆ ಕಾಯುವನು!

 3. ಜಯದೇವ್ ಉನದ್ಕತ್: ವೆಸ್ಟ್ ಇಂಡೀಸ್ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ವೇಗದ ಬೌಲರ್ ಜಯದೇವ್ ಉನದ್ಕತ್ ಅವಕಾಶ ಪಡೆಯುವುದು ಕೊಂಚ ಕಷ್ಟ. ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್ ಮತ್ತು ನವದೀಪ್ ಸೈನಿ ಅವರನ್ನು ವೇಗದ ಬೌಲರ್‌ ಗಳಾಗಿ ಪ್ಲೇಯಿಂಗ್ ಇಲೆವೆನ್‌ ನಲ್ಲಿ ಅವಕಾಶ ನೀಡಿದರೆ, ಜಯದೇವ್ ಉನದ್ಕತ್ ಚ್ಯಾನ್ಸ್ ಮಿಸ್ ಮಾಡಿಕೊಳ್ಳಲಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News