India vs South Africa : ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 5 ಪಂದ್ಯಗಳ ಟಿ20 ಸರಣಿಯು ಜೂನ್ 9 ರಿಂದ ಜೂನ್ 19 ರವರೆಗೆ ನಡೆಯಲಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಈ ಟಿ20 ಸರಣಿಗೆ ಆಯ್ಕೆಗಾರರು ಹೆಚ್ಚಿನ ಯುವ ಆಟಗಾರರಿಗೆ ಅವಕಾಶ ನೀಡಿದ್ದಾರೆ. ಹಾಗೆ, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಜಸ್ಪ್ರೀತ್ ಬುಮ್ರಾ ಅವರಂತಹ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ.


COMMERCIAL BREAK
SCROLL TO CONTINUE READING

ಆಫ್ರಿಕನ್ ಬೌಲರ್‌ಗಳ ಬೆವರಿಳಿಸುತ್ತಾರಂತೆ ಈ ಬ್ಯಾಟ್ಸ್‌ಮನ್ 


ದಕ್ಷಿಣ ಆಫ್ರಿಕಾ ವಿರುದ್ಧದ ಈ ಟಿ20 ಸರಣಿಗೆ ಕೆಎಲ್ ರಾಹುಲ್‌ಗೆ ನಾಯಕತ್ವ ನೀಡಲಾಗಿದೆ. ಹಾಗೆ, ಮಧ್ಯಮ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್, ದೀಪಕ್ ಹೂಡಾ, ರಿಷಬ್ ಪಂತ್, ದಿನೇಶ್ ಕಾರ್ತಿಕ್ ಮತ್ತು ಹಾರ್ದಿಕ್ ಪಾಂಡ್ಯ ಅವರಂತಹ ಆಟಗಾರರಿಗೆ ಅವಕಾಶ ನೀಡಲಾಗಿದೆ. ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಈ ಟಿ20 ಸರಣಿಯಲ್ಲಿ ಶ್ರೇಯಸ್ ಅಯ್ಯರ್ ನಂ.3ರಲ್ಲಿ ಬ್ಯಾಟಿಂಗ್ ಮಾಡುವ ಎಲ್ಲಾ ಸಾಧ್ಯತೆಗಳಿವೆ. ಈ ವರ್ಷದ ಫೆಬ್ರವರಿಯಲ್ಲಿ ಶ್ರೀಲಂಕಾ ವಿರುದ್ಧದ ಟಿ20 ಸರಣಿಯಲ್ಲಿ, ಶ್ರೇಯಸ್ ಅಯ್ಯರ್ ಸಹ 3 ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬಂದರು. ಹೀಗಾಗಿ ನಂ.3ರಲ್ಲಿ ಕಣಕ್ಕಿಳಿದು ಆಫ್ರಿಕನ್ ಬೌಲರ್‌ಗಳ ಬೆವರಿಳಿಸುವ ಅಲ್ಲ ಸಾಧ್ಯಗಳಿವೆ ಎಂದು ಹೇಳಬಹುದು.


ಇದನ್ನೂ ಓದಿ : Ind vs SA : ಈ ಸ್ಫೋಟಕ ಆಟಗಾರನನ್ನು ಕಡೆಗಣಿಸಿದ ಟೀಂ ಇಂಡಿಯಾ, ರೋಹಿತ್ ನೀಡ್ತಾರಾ ಚಾನ್ಸ್?


ಬಿರುಗಾಳಿಯಂತೆ ಬ್ಯಾಟ್ ಬಿಸಲಿದ್ದಾರೆ ಬ್ಯಾಟ್ಸ್‌ಮನ್ 


ಶ್ರೀಲಂಕಾ ವಿರುದ್ಧದ ಆ ಟಿ20 ಸರಣಿಯಲ್ಲಿ ವಿರಾಟ್ ಕೊಹ್ಲಿಗೂ ವಿಶ್ರಾಂತಿ ನೀಡಲಾಗಿತ್ತು. ಆ ಟಿ20 ಸರಣಿಯಲ್ಲಿ 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ ಶ್ರೇಯಸ್ ಅಯ್ಯರ್ ಒಟ್ಟು 204 ರನ್ ಗಳಿಸಿದರು. ಈ ಟಿ20 ಸರಣಿಯಲ್ಲಿ ಶ್ರೇಯಸ್‌ ಅಯ್ಯರ್‌ಗೆ ಸರಣಿಶ್ರೇಷ್ಠ ಪ್ರಶಸ್ತಿ ಲಭಿಸಿತ್ತು. ಹೀಗಾಗಿ ದಕ್ಷಿಣ ಆಫ್ರಿಕಾ ವಿರುದ್ಧದ ಈ ಟಿ20 ಸರಣಿಯಲ್ಲಿ ಬಿರುಗಾಳಿಯಂತೆ ಶ್ರೇಯಸ್ ಅಯ್ಯರ್ ಬ್ಯಾಟ್ ಬಿಸಲಿದ್ದಾರೆ.


ಟಿ20ಯಲ್ಲಿ ಕೊಹ್ಲಿ ಸ್ಥಾನಕ್ಕೆ ಎದುರಾಗಬಹುದು ಅಪಾಯ!


ದಕ್ಷಿಣ ಆಫ್ರಿಕಾ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯಲ್ಲಿ ಶ್ರೇಯಸ್ ಅಯ್ಯರ್ ಮತ್ತೆ 3ನೇ ಸ್ಥಾನಕ್ಕೇರಿದರೆ, ಟಿ20ಯಲ್ಲಿ ವಿರಾಟ್ ಕೊಹ್ಲಿ ಸ್ಥಾನಕ್ಕೆ ಅಪಾಯ ಎದುರಾಗಬಹುದು. ಅನುಭವಿ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ವರ್ಷಗಟ್ಟಲೆ ಬ್ಯಾಟಿಂಗ್ ಮಾಡಿರುವ ಟಿ20ಯಲ್ಲಿ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವ ಆಸೆಯನ್ನು ಶ್ರೇಯಸ್ ಅಯ್ಯರ್ ವ್ಯಕ್ತಪಡಿಸಿದ್ದಾರೆ. ಶ್ರೇಯಸ್ ಅಯ್ಯರ್ 36 ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 809 ರನ್ ಗಳಿಸಿದ್ದಾರೆ.


ಟೀಂ ಇಂಡಿಯಾ ಟಿ20 ಅಂತಾರಾಷ್ಟ್ರೀಯ ತಂಡ ಇಂತಿದೆ:


ಲೋಕೇಶ್ ರಾಹುಲ್ (ನಾಯಕ), ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ಉಪನಾಯಕ, ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ವೆಂಕಟೇಶ್ ಅಯ್ಯರ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ಬಿಶ್ರ್ನೋ ಪಟೇಲ್, ರವಿ ಪಟೇಲ್ , ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅವೇಶ್ ಖಾನ್, ಅರ್ಶ್ದೀಪ್ ಸಿಂಗ್ ಮತ್ತು ಉಮ್ರಾನ್ ಮಲಿಕ್.


ಇದನ್ನೂ ಓದಿ : Cricket: ಅಂತರರಾಷ್ಟ್ರೀಯ ಪಂದ್ಯದಲ್ಲಿ ಕೇವಲ 8 ರನ್ ಗಳಿಗೆ ಇಡೀ ತಂಡವೇ ಉಡಿಸ್


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ