IND vs SL T20 Series : ಭಾರತ ಮತ್ತು ಶ್ರೀಲಂಕಾ ನಡುವಿನ ಮೂರು ಟಿ20 ಸರಣಿಯ ಮೊದಲ ಪಂದ್ಯ ಇಂದು  ಮುಂಬೈನಲ್ಲಿ ನಡೆಯಲಿದೆ. ಟೀಂ ಇಂಡಿಯಾದ ನಾಯಕತ್ವವನ್ನು ಹಾರ್ದಿಕ್ ಪಾಂಡ್ಯ ವಹಿಸಿಕೊಂಡಿದ್ದಾರೆ. ಟೀಂ ಇಂಡಿಯಾ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ ಮತ್ತು ಜಸ್ಪ್ರೀತ್ ಬುಮ್ರಾ ಟೀಂನಿಂದ ಹೊರಗುಳಿದಿದ್ದಾರೆ. ಹೀಗಾಗಿ, ದೇಶಿ ಕ್ರಿಕೆಟ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ ಯುವ ಆಟಗಾರರಿಗೆ ಅವಕಾಶ ಸಿಕ್ಕಿದೆ. ಶ್ರೀಲಂಕಾ ವಿರುದ್ಧದ ಟಿ20 ಸರಣಿಯಲ್ಲಿ 5 ಯುವ ವೇಗದ ಬೌಲರ್‌ಗಳಿಗೆ ಅವಕಾಶ ನೀಡಲಾಗಿದೆ. ಇನ್ನು ನಾಯಕ ಹಾರ್ದಿಕ್ ಪಾಂಡ್ಯ ಪ್ಲೇಯಿಂಗ್ ಇಲೆವೆನ್‌ನಲ್ಲಿ ಯಾರನ್ನು ಸೇರಿಸಿಕೊಳ್ಳುತ್ತಾರೆ ಎಂಬುದು ಕಾದು ನೋಡಬೇಕಾಗಿದೆ. ಈ ಆಟಗಾರರ ಬಗ್ಗೆ ಮಾಹಿತಿ ಇಲ್ಲಿದೆ..


COMMERCIAL BREAK
SCROLL TO CONTINUE READING

ಟೀಂ ಇಂಡಿಯಾದಲ್ಲಿ ಈ ಬೌಲರ್‌ಗಳ ಎಂಟ್ರಿ


ಶ್ರೀಲಂಕಾ ವಿರುದ್ಧದ ಟಿ20 ಸರಣಿಗೆ ಭಾರತ ತಂಡದಲ್ಲಿ ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ ಆಯ್ಕೆಯಾಗಿಲ್ಲ. ಹೀಗಿರುವಾಗ ಐಪಿಎಲ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ ಯುವ ಆಟಗಾರರಿಗೆ ಅವಕಾಶ ಸಿಕ್ಕಿದೆ. ಇವರಲ್ಲಿ ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್, ಶಿವಂ ಮಾವಿ, ಮುಖೇಶ್ ಕುಮಾರ್ ಮತ್ತು ಹರ್ಷಲ್ ಪಟೇಲ್ ಅವರಿಗೆ ಅವಕಾಶ ಸಿಕ್ಕಿದೆ. ಭಾರತದ ಪಿಚ್‌ಗಳು ಯಾವಾಗಲೂ ಸ್ಪಿನ್ನರ್‌ಗಳಿಗೆ ಸಹಾಯಕವಾಗಿವೆ, ಆದರೆ ಇಲ್ಲಿ ರಿವರ್ಸ್ ಸ್ವಿಂಗ್ ಕೂಡ ವರ್ಕ್ ಔಟ್ ಆಗಲಿದೆ.


ಇದನ್ನೂ ಓದಿ : IND vs SL: ಟಿ20 ಸರಣಿಗೆ ಮುನ್ನ ಟೀಂ ಇಂಡಿಯಾಗೆ ಎಂಟ್ರಿ ನೀಡಿದ ಈ ಮಾರಕ ವೇಗದ ಬೌಲರ್‌!


ಭರ್ಜರಿ ಶಕ್ತಿ ಪ್ರದರ್ಶಿಸಿದ ಅರ್ಷದೀಪ್ ಸಿಂಗ್


ಅರ್ಷದೀಪ್ ಸಿಂಗ್ ಅತ್ಯುತ್ತಮ ಫಾರ್ಮ್‌ನಲ್ಲಿ ಆಡುತ್ತಿದ್ದಾರೆ. 2022ರ ಟಿ20 ವಿಶ್ವಕಪ್‌ನಲ್ಲಿ ಅವರು ಉತ್ತಮ ಪ್ರದರ್ಶನ ನೀಡಿದ್ದಾರೆ. 2022 ರ ಟಿ20 ವಿಶ್ವಕಪ್‌ನಲ್ಲಿ ಅವರು ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿದ್ದರು. ಅವರು ಇನ್ನಿಂಗ್ಸ್‌ನ ಆರಂಭದಲ್ಲಿ ತುಂಬಾ ಅಪಾಯಕಾರಿಯಾಗಿ ಕಾಣುತ್ತಾರೆ. ಅವರ ಯಾರ್ಕರ್ ಎಸೆತಗಳಿಗೂ ಹೊಂದಾಣಿಕೆ ಇಲ್ಲ. ಭಾರತ ತಂಡದ ಪರ 21 ಟಿ20 ಪಂದ್ಯಗಳಲ್ಲಿ 33 ವಿಕೆಟ್‌ಗಳನ್ನು ಕಬಳಿಸಿದ್ದಾರೆ.


ಮತ್ತೆ ಅಬ್ಬರಿಸಲು ಉತ್ಸುಕರಾಗಿದ್ದಾರೆ ಹರ್ಷಲ್ ಪಟೇಲ್‌


2022ರ ಟಿ20 ವಿಶ್ವಕಪ್‌ನಲ್ಲಿ ಹರ್ಷಲ್ ಪಟೇಲ್‌ಗೆ ಒಂದೇ ಒಂದು ಪಂದ್ಯವನ್ನು ಆಡುವ ಅವಕಾಶ ಸಿಗಲಿಲ್ಲ. ಆದರೆ ಶ್ರೀಲಂಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಅವರು ಆಡುವುದು ಖಚಿತವಾಗಿದೆ. ಹರ್ಷಲ್ ಪಟೇಲ್ ಡೆತ್ ಓವರ್‌ಗಳಲ್ಲಿ ಬೌಲಿಂಗ್ ಮಾಡುವಲ್ಲಿ ಪರಿಣತಿ ಹೊಂದಿದ್ದಾರೆ ಮತ್ತು ನಿಧಾನಗತಿಯ ಎಸೆತಗಳಲ್ಲಿ ಬೇಗನೆ ವಿಕೆಟ್‌ಗಳನ್ನು ಕಬಳಿಸುತ್ತಾರೆ. ಟೀಂ ಇಂಡಿಯಾ ಪರ 24 ಟಿ20 ಪಂದ್ಯಗಳಲ್ಲಿ 27 ವಿಕೆಟ್ ಪಡೆದಿದ್ದಾರೆ.


ಒಂದು ಸ್ಥಾನಕ್ಕಾಗಿ 3 ಬೌಲರ್‌ಗಳ ನಡುವೆ ‘ಫೈಟ್’


ಶ್ರೀಲಂಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಅರ್ಷದೀಪ್ ಸಿಂಗ್ ಮತ್ತು ಹರ್ಷಲ್ ಪಟೇಲ್ ಆಡುವುದು ಖಚಿತವಾಗಿದೆ. ಅದೇ ವೇಳೆಗೆ ಮೂರನೇ ವೇಗಿಯಾಗಿ ಉಮ್ರಾನ್ ಮಲಿಕ್, ಶಿವಂ ಮಾವಿ ಮತ್ತು ಮುಖೇಶ್ ಕುಮಾರ್ ಅವರಲ್ಲಿ ಒಬ್ಬರಿಗೆ ಅವಕಾಶ ಸಿಗಬಹುದು. ಉಮ್ರಾನ್ ಮಲಿಕ್ ತಮ್ಮ ವೇಗಕ್ಕೆ ಹೆಸರುವಾಸಿಯಾಗಿದ್ದಾರೆ. ವೇಗವೇ ಅವನ ದೊಡ್ಡ ಶಕ್ತಿ. ಶಿವಂ ಮಾವಿ ಮತ್ತು ಮುಖೇಶ್ ಕುಮಾರ್ ದೇಶೀಯ ಕ್ರಿಕೆಟ್‌ನಲ್ಲಿ ಕಿಲ್ಲರ್ ಬೌಲಿಂಗ್ ಮಾಡಿದ್ದಾರೆ.


ಇದನ್ನೂ ಓದಿ : WTC Final : ಪಾಕ್ ಟೀಂಗೆ ಬಿಗ್ ಶಾಕ್ : ಐಸಿಸಿ ಟ್ರೋಫಿ ರೇಸ್‌ನಿಂದ ಪಾಕಿಸ್ತಾನ ಔಟ್


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.