ನವದೆಹಲಿ: ಫೆಬ್ರುವರಿ 6 ರಿಂದ ಭಾರತವು ವೆಸ್ಟ್ ಇಂಡೀಸ್ ವಿರುದ್ಧ ಮೂರು ಏಕದಿನ ಪಂದ್ಯಗಳು ಮತ್ತು ಮೂರು T20 ಪಂದ್ಯಗಳನ್ನು ಎದುರಿಸಲಿದೆ.ಮೊದಲ ಏಕದಿನ ಪಂದ್ಯವು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: "ಹಿಂದು-ಮುಸ್ಲಿಂ ಧ್ರುವೀಕರಣ ರಾಜಕೀಯ ಉತ್ತರ ಪ್ರದೇಶದಲ್ಲಿ ನಡೆಯಲ್ಲ"


ಈಗ ಬಿಸಿಸಿಐ ಮೂಲಗಳ ಪ್ರಕಾರ ಮೊದಲ ಏಕದಿನ ಪಂದ್ಯಕ್ಕೆ ರಿಷಬ್ ಪಂತ್ ಉಪನಾಯಕನಾಗಿ ಆಯ್ಕೆಯಾಗುವ ಸಾಧ್ಯತೆ ದಟ್ಟವಾಗಿದೆ.ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಕೆಎಲ್ ರಾಹುಲ್ ಅವರನ್ನು ಉಪನಾಯಕರನ್ನಾಗಿ ನೇಮಿಸಲಾಯಿತಾದರೂ ಅವರು ನಿರೀಕ್ಷಿತ ಮಟ್ಟದಲ್ಲಿ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದರು ಮತ್ತು ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ತಂಡವನ್ನು ಮುನ್ನಡೆಸಿದರೂ ಕೂಡ ತಂಡವು ಹರಿಣಗಳ ವಿರುದ್ಧ 0-3 ರಿಂದ ಸೋಲುವ ಮೂಲಕ ಬಾರಿ ಮುಖಭಂಗವನ್ನು ಅನುಭವಿಸಿತು.


ಭಾರತದ ನೂತನ ಏಕದಿನ ತಂಡದ ನಾಯಕ ರೋಹಿತ್ ಶರ್ಮಾ ಅಂತಿಮವಾಗಿ ತಂಡದ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ.ಈ ಹಿಂದೆ ಗಾಯದ ಕಾರಣದಿಂದಾಗಿ ಅವರು ದಕ್ಷಿಣ ಆಫ್ರಿಕಾದಲ್ಲಿ ಏಕದಿನ ಪಂದ್ಯಗಳನ್ನು ತಪ್ಪಿಸಿಕೊಂಡಿದ್ದರು ಮತ್ತು ಈಗ ಮುಂಬರುವ ಸರಣಿಯಿಂದ ಅವರು ಏಕದಿನ ತಂಡದ ಪೂರ್ಣಾವಧಿ ನಾಯಕರಾಗಿ ನೇತೃತ್ವವನ್ನು ವಹಿಸಿಕೊಳ್ಳಲಿದ್ದಾರೆ.


ಇದನ್ನೂ ಓದಿ: UP Assembly election 2022: ಕುಸ್ತಿಪಟು ಬಬಿತಾ ಫೋಗಟ್ ವಿರುದ್ಧ ಎಫ್‌ಐಆರ್


ಈಗ ರಾಹುಲ್ ಮೊದಲ ಏಕದಿನ ಪಂದ್ಯದಿಂದ ಹೊರಗುಳಿದಿದ್ದರಿಂದಾಗಿ, ಪಂತ್ ಅವರಿಗೆ ಉಪನಾಯಕನ ಜವಾಬ್ದಾರಿ ನೀಡಬಹುದು ಎನ್ನಲಾಗಿದೆ.ಈ ಬೆಳವಣಿಗೆಯನ್ನು ಬಿಸಿಸಿಐ ಮೂಲಗಳು ಖಚಿತಪಡಿಸಿವೆ.


ಇದನ್ನೂ ಓದಿ: UP Assembly election 2022: ಕುಸ್ತಿಪಟು ಬಬಿತಾ ಫೋಗಟ್ ವಿರುದ್ಧ ಎಫ್‌ಐಆರ್


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.