Veda Krishnamurthy: ಟೀಂ ಇಂಡಿಯಾ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಇದೀಗ ಅವರ ಬದುಕಿನ ಹೊಸ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ಈ ಸ್ಟಾರ್ ಮಹಿಳಾ ಆಟಗಾರ್ತಿ ಶೀಘ್ರದಲ್ಲೇ ಹಸೆಮಣೆ ಏರಲಿದ್ದಾರೆ. ಇದನ್ನು ಸ್ವತಃ ವೇದಾ ಕೃಷ್ಣಮೂರ್ತಿ ಅವರೇ ಬಹಿರಂಗಪಡಿಸಿದ್ದಾರೆ. ಭಾರತ ಮಹಿಳಾ ಕ್ರಿಕೆಟ್ ತಂಡ ಪ್ರಸ್ತುತ ಇಂಗ್ಲೆಂಡ್ ಪ್ರವಾಸದಲ್ಲಿದೆ. ಟೀಂ ಇಂಡಿಯಾ ಮೊದಲ ಪಂದ್ಯದಲ್ಲಿ ಸೋಲು ಅನುಭವಿಸಿರಬಹುದು, ಆದರೆ ಭಾರತೀಯ ಕ್ರಿಕೆಟಿಗರೊಬ್ಬರು ಸ್ಟಾರ್ ಆಲ್ ರೌಂಡರ್ ವೇದಾ ಕೃಷ್ಣಮೂರ್ತಿ ಅವರ ಹೃದಯ ಗೆದ್ದಿದ್ದಾರೆ. ವೇದಾ ಕೃಷ್ಣಮೂರ್ತಿ ಇಂಗ್ಲೆಂಡ್ ಪ್ರವಾಸದಲ್ಲಿ ತಂಡದ ಭಾಗವಾಗಿಲ್ಲ. ಆದರೂ ಎಲ್ಲೆಡೆ ಅವರದ್ದೇ ಸುದ್ದಿ. 


COMMERCIAL BREAK
SCROLL TO CONTINUE READING

ಇದನ್ನೂ ಓದಿ : Virat Kohli : ಶತಕ ಸಿಡಿಸಿದ ವಿರಾಟ್ ಕೊಹ್ಲಿಗೆ ಸುಲಭವಾಗಿಲ್ಲ ಟಿ20 ವಿಶ್ವಕಪ್‌!


ಆಲ್ ರೌಂಡರ್ ವೇದಾ ಕೃಷ್ಣಮೂರ್ತಿ ಅವರನ್ನು ಕರ್ನಾಟಕದ ಕ್ರಿಕೆಟಿಗ ಅರ್ಜುನ್ ಹೊಯ್ಸಳ ವರಿಸಲಿದ್ದಾರೆ. ಅರ್ಜುನ್ ಹೊಯ್ಸಳ ಅವರು ಇನ್‌ಸ್ಟಾಗ್ರಾಮ್‌ನಲ್ಲಿ ಚಿತ್ರಗಳನ್ನು ಹಂಚಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಈ ವಿಶೇಷ ಮಾಹಿತಿ ನೀಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಚಿತ್ರಗಳನ್ನು ಅಭಿಮಾನಿಗಳು ತುಂಬಾ ಇಷ್ಟಪಡುತ್ತಿದ್ದಾರೆ.


 


Team India: ಟಿ-20 ವಿಶ್ವಕಪ್‌ಗೂ ಮುನ್ನ ಬದಲಾಗಲಿದ್ದಾರೆ ಭಾರತದ ನಾಯಕ? ಈ ಆಟಗಾರನಿಗೆ ಜವಾಬ್ದಾರಿ?


ಅರ್ಜುನ್ ಹೊಯ್ಸಳ ಅವರು 2016 ರಲ್ಲಿ ಕರ್ನಾಟಕಕ್ಕೆ ಪ್ರಥಮ ದರ್ಜೆಗೆ ಪದಾರ್ಪಣೆ ಮಾಡಿದರು. ಅರ್ಜುನ್ ಹೊಯ್ಸಳ ಎಡಗೈ ಓಪನರ್. ವೇದಾ ಕೃಷ್ಣಮೂರ್ತಿ ಅವರು ಕೆಲವು ಚಿತ್ರಗಳನ್ನು ಹಂಚಿಕೊಂಡಿದ್ದಾರೆ, ಇದರಲ್ಲಿ ಇಬ್ಬರೂ ಪರಸ್ಪರ ನಿಶ್ಚಿತಾರ್ಥದ ಉಂಗುರಗಳನ್ನು ಧರಿಸಿದ್ದಾರೆ. ವೇದಾ ಕೃಷ್ಣಮೂರ್ತಿ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಮತ್ತು ಬೌಲಿಂಗ್ ಕೂಡ ಮಾಡುತ್ತಾರೆ.


ವೇದಾ ಕೃಷ್ಣಮೂರ್ತಿ 2011 ರಲ್ಲಿ ಟೀಂ ಇಂಡಿಯಾಗೆ ಪದಾರ್ಪಣೆ ಮಾಡಿದ್ದರು. ವೇದಾ ಕೃಷ್ಣಮೂರ್ತಿ ಟೀಂ ಇಂಡಿಯಾ ಪರ ಇದುವರೆಗೆ 48 ಏಕದಿನ ಹಾಗೂ 76 ಟಿ20 ಪಂದ್ಯಗಳನ್ನು ಆಡಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.